ಡಾ.ರಾಜ್‌ಕುಮಾರ್‌ ಕಲಿಕಾ ಆ್ಯಪ್‌ಗೆ ಸಿಎಂ ಚಾಲನೆ


Team Udayavani, Aug 17, 2021, 2:40 PM IST

ಡಾ.ರಾಜ್‌ಕುಮಾರ್‌ ಕಲಿಕಾ ಆ್ಯಪ್‌ಗೆ ಸಿಎಂ ಚಾಲನೆ

ಜ್ಞಾನವಿರುವವರೇ ಜಗತ್ತನ್ನು ಆಳುವರು ವಿದ್ಯಾರ್ಥಿಗಳಿಗೆ ಸಾತ್ವಿಕ ಜ್ಞಾನ ತುಂಬಿ: ಬೊಮ್ಮಾಯಿ

ಬೆಂಗಳೂರು: ಇದು ಜ್ಞಾನದ ಯುಗ. ಯಾರಲ್ಲಿ ಜ್ಞಾನವಿರುತ್ತದೆಯೋ ಅವರು ಜಗತ್ತನ್ನು ಆಳುತ್ತಾರೆ. ಹೀಗಾಗಿ ಬೋಧಕರು ವಿದ್ಯಾರ್ಥಿಗಳಿಗೆ ಸಾತ್ವಿಕ ಜ್ಞಾನದ ಬೆಳಕು ತುಂಬುವ ಕಾರ್ಯ ಮಾಡಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು.

ವಿದ್ಯಾರ್ಥಿಗಳ ಕಲಿಕೆಯ ಅನುಕೂಲಕ್ಕಾಗಿ ಡಾ.ರಾಜ್‌ಕುಮಾರ್‌ ಕುಟುಂಬದಿಂದ ಹೊರತಂದಿರುವ ಡಾ.ರಾಜ್‌ ಕುಮಾರ್‌ ಲರ್ನಿಂಗ್‌ ಆ್ಯಪ್‌ಗೆ(
ಕಲಿಕೆ ಆ್ಯಪ್‌) ಚಾಲನೆ ನೀಡಿ ಮಾತನಾಡಿದರು.

ಹಿಂದೆ ಭೂಮಿ ಇದ್ದರು ಜಗತ್ತು ಆಳುತ್ತಿದ್ದರು. ನಂತರ ದುಡ್ಡಿದ್ದವರು ಜಗತ್ತು ಆಳುವ ಕಾಲ ಬಂತು. ಈಗ ಜ್ಞಾನವಿದ್ದವರದ್ದೇ ಜಗತ್ತು. 21ನೇ ಶತಮಾನ ಜ್ಞಾನವಂತರಿಗೆ ಸೇರಿದ್ದು. ಜ್ಞಾನಕ್ಕೆ ಬೆಲೆ ಹಾಗೂ ಬಲ ಬಂದಿದೆ. ಜ್ಞಾನದ ಕ್ಷೇತ್ರಕ್ಕೆ ಡಾ.ರಾಜ್‌ ಕುಮಾರ್‌ ಅವರ ಆ್ಯಪ್‌ ದೊಡ್ಡ ಕೊಡುಗೆ ನೀಡಲಿದೆ. ಈ ಅಕಾಡೆಮಿಮೂಲಕ ಮಕ್ಕಳಿಗೆ ತರ್ಕಬದ್ಧವಾಗಿ ಚಿಂತನೆ ಮಾಡಲು ಪ್ರೇರೇಪಿಸಬೇಕು. ಇದರಿಂದ ಎಲ್ಲ ವಿಷಯವು ಸಹಜವಾಗಿ ಅವರ ಸ್ಮತಿ ಪಟಲದಲ್ಲಿ ಉಳಿಯುತ್ತದೆ ಎಂದರು.

ಇದನ್ನೂ ಓದಿ:ಟಿ20 ವಿಶ್ವಕಪ್ ವೇಳಾಪಟ್ಟಿ ಬಿಡುಗಡೆ: ಅ.24ರಂದು ಭಾರತ-ಪಾಕ್ ಮುಖಾಮುಖಿ

ಮುಗ್ಧತೆ, ಆತ್ಮಶುದ್ಧತೆ: ರಾಜ್‌ ಕುಮಾರ್‌ ಎಂದರೆ,ಒಬ್ಬ ಸಾಧಕ. ಸಾಧಕನಿಗೆ ಸಾವು ಅಂತ್ಯವಲ್ಲ. ಸಾಧಕ ಸಾವಿನ ನಂತರವೂ ಬದುಕಬಲ್ಲ ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದಾರೆ. ಎಂತಹ ಶ್ರೀಮಂತ, ಮೌಲಿಕ ಬದುಕನ್ನು ಬದುಕಿದರೆ ಸಾವಿನ ನಂತರವೂ ಜನ ನಮ್ಮನ್ನು ನೆನಪಿಸಿಕೊಳ್ಳಬೇಕು. ಅಂತಹ ಸಾಧನೆ ಮಾಡಿದ ಕರ್ನಾಟಕದ ಅಂಥ ಏಕಮೇವ ತಾರೆ ಅಂದರೆ ಡಾ.ರಾಜ್‌ ಕುಮಾರ್‌. ಅವರ ಸರಳತೆ, ನಡೆ,ನುಡಿ, ಜೀವನ ಮೌಲ್ಯಗಳನ್ನು ವಿಶೇಷವಾಗಿ ಅಧಿಕಾರದಲ್ಲಿದ್ದವರು, ಜನಪ್ರಿಯ ವ್ಯಕ್ತಿಗಳು ಸರಳವಾಗಿ ಇರಬೇಕು ಎಂಬುದನ್ನು ಅವರಿಂದ ಕಲಿಯಬೇಕು.

ಡಾ.ರಾಜ್‌ಕುಮಾರ್‌ ಕಲಿಕಾ ಆ್ಯಪ್‌ನ ರಾಯ ಬಾರಿಯೂ ಆಗಿರುವ ನಟ ಪುನೀತ್‌ ರಾಜ್‌ ಕುಮಾರ್‌, ಹಿರಿಯ ನಟ ಡಾ.ರಾಘವೇಂದ್ರ ರಾಜ್‌
ಕುಮಾರ್‌ ಇತರರು ಉಪಸ್ಥಿತರಿದ್ದರು.

ಪ್ಲೇ ಸ್ಟೋರ್‌ ನಲ್ಲಿಲಭ್ಯ
ಡಾ.ರಾಜ್‌ ಕುಮಾರ್‌ ಲರ್ನಿಂಗ್‌ ಆ್ಯಪ್‌ ಅನ್ನುವಿದ್ಯಾರ್ಥಿಗಳು ತಮ್ಮ ಆ್ಯಂಡ್ರಾಯ್ಡ ಫೋನ್‌ ಮೂಲಕ ಪ್ಲೇಸ್ಟೋರ್‌ನಿಂದ ಪಡೆಯಬಹುದಾಗಿದೆ. ಸದ್ಯ ಈ ಆ್ಯಪ್‌ನಲ್ಲಿ ದ್ವಿತೀಯ ಪಿಯುಸಿವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ ಪೂರ್ವ ಮುದ್ರಿತ ವಿಡಿಯೊಗಳುಲಭ್ಯವಿದೆ. ವಿದ್ಯಾರ್ಥಿಗಳು
ತಮ್ಮ ಪಠ್ಯಕ್ಕೆ ಸಂಬಂಧಿಸಿದ ಯಾವುದೇ ಸಂಶಯ, ಗೊಂದಲಗಳಿದ್ದರೂ, ಈ ಪೂರ್ವ ಮುದ್ರಿತ ವಿಡಿಯೊಮೂಲಕ ಬಗೆಹರಿಸಿಕೊಳ್ಳಲು ಸಾಧ್ಯವಿದೆ.

ಡಾ.ರಾಜ್‌ಕುಮಾರ್‌ ಸಿನಿಮಾದ ಸೂಪರ್‌ ಸ್ಟಾರ್‌ ಮಾತ್ರವಲ್ಲ. ಆಕಾಶದಲ್ಲಿನ ಹೊಳೆಯುವ ನಕ್ಷತ್ರ. ಡಾ. ರಾಜ್‌ಕುಮಾರ್‌ ಅವರು ಶಿಕ್ಷಣದ ಬಗ್ಗೆ ಹೊಂದಿದ್ದಕನಸನ್ನು ಅವರಕುಟುಂಬ ಸಾಕಾರ ಮಾಡುತ್ತಿರುವುದು ಶ್ಲಾಘನೀಯ.
-ಬಸವರಾಜ ಬೊಮ್ಮಾಯಿ, ಸಿಎಂ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.