![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Sep 29, 2019, 3:03 AM IST
ಬೆಂಗಳೂರು: 2019ನೇ ಸಾಲಿನ ಅಭಿನವ ಭಾರ್ಗವ ಡಾ.ವಿಷ್ಣುವರ್ಧನ್ ಪ್ರಶಸ್ತಿಗೆ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಆಯ್ಕೆಯಾಗಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಹಾಗೂ ಡಾ.ವಿಷ್ಣು ಸೇನಾ ಸಮಿತಿ ವತಿಯಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಅ.11ರಂದು ನಡೆಯಲಿದೆ.
ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಡಾ.ವಿಷ್ಣುವರ್ಧನ್ ಜೊತೆ ಆತ್ಮೀಯ ಒಡನಾಟ ಹೊಂದಿದ್ದವರು. ವಿಷ್ಣುವರ್ಧನ್ ಅಭಿನಯದ “ನಾಗಕನ್ಯೆ’ ಚಿತ್ರವನ್ನು ನಿರ್ದೇಶಿಸುವ ಮೂಲಕ ನಿರ್ದೇಶಕರಾಗಿ ಚಿತ್ರರಂಗ ಪ್ರವೇಶಿಸಿದ ಸಿಂಗ್, ಆ ನಂತರ ವಿಷ್ಣುವರ್ಧನ್ ಅಭಿನಯದ “ಬಂಧನ’, “ಮುತ್ತಿನ ಹಾರ’ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಈಗ ವಿಷ್ಣುವರ್ಧನ್ ಹೆಸರಿನ ಪ್ರಶಸ್ತಿ ಅವರಿಗೆ ಒಲಿದಿದೆ.
You seem to have an Ad Blocker on.
To continue reading, please turn it off or whitelist Udayavani.