Namma Metro: ಇನ್ನೆರಡು ವರ್ಷದಲ್ಲಿ ಚಾಲಕರಹಿತ ಮೆಟ್ರೋ ರೈಲು ಸಂಚಾರ


Team Udayavani, Sep 1, 2024, 11:45 AM IST

Namma Metro: ಇನ್ನೆರಡು ವರ್ಷದಲ್ಲಿ ಚಾಲಕರಹಿತ ಮೆಟ್ರೋ ರೈಲು ಸಂಚಾರ

ಬೆಂಗಳೂರು: ಬೆಂಗಳೂರಿನ ಮೆಟ್ರೋ ಹಳಿಗಳ ಮೇಲೆ ಚಾಲಕರಹಿತ ರೈಲು ಸಂಚರಿಸುವ ದಿನಗಳು ಸನ್ನಿಹಿತವಾಗಿವೆ. ಬೆಂಗಳೂರು ಮೆಟ್ರೋ ನಿಗಮದ ಪರಿಷ್ಕೃತ ಗುರಿಯಂತೆ ಏರ್‌ಪೋರ್ಟ್‌ ಲೈನ್‌ ಮತ್ತು ಕಾಳೇನ ಅಗ್ರಹಾರದಿಂದ ನಾಗವಾರದ ವರೆಗಿನ ಮೆಟ್ರೋ ಕಾಮಗಾರಿ 2025 ರೊಳಗೆ ಪೂರ್ಣಗೊಂಡರೆ ಇನ್ನೆರಡು ವರ್ಷದಲ್ಲಿ ಸಿಲಿಕಾನ್‌ ಸಿಟಿಗೆ ಮಾನವರಹಿತ ಮೆಟ್ರೋ ರೈಲಿನ ಪರಿಚಯವಾಗಲಿದೆ.

ಕೇಂದ್ರ ರೇಷ್ಮೆ ಮಂಡಳಿಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ನೀಲಿ ಮಾರ್ಗ) ಮತ್ತು ಕಾಳೇನ ಅಗ್ರಹಾರದಿಂದ ನಾಗವಾರದವರೆಗೆ (ಗುಲಾಬಿ ಮಾರ್ಗ)ದಲ್ಲಿ ಚಾಲಕರಹಿತ ಮೆಟ್ರೋ ಓಡಿಸುವ ತೀರ್ಮಾನವನ್ನು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್‌) ಈಗಾಗಲೇ ತೆಗೆದುಕೊಂಡಿದೆ. ಒಪ್ಪಂದದಂತೆ ಭಾರತ್‌ ಅರ್ಥ್ ಮೂವರ್ಸ್‌ ಲಿಮಿಟೆಡ್‌ (ಬಿಇಎಂಎಲ್‌) ಚಾಲಕ ರಹಿತ ರೈಲುಗಳ ನಿರ್ಮಾಣ ಕಾರ್ಯಕ್ಕೆ ಶನಿವಾರ ಚಾಲನೆ ನೀಡಿತು.

ಕೋಚ್‌ ಪೂರೈಕೆಗೆ ಸಂಬಂಸಿದಂತೆ ಬಿಇಎಂಎಲ್‌, ಅಲ್‌ಸ್ಟೋಮ್‌ ಟ್ರಾನ್ಸ್‌ಪೊàರ್ಟ್‌ ಇಂಡಿಯಾ, ಟಿಟಾಗರ್‌ ವ್ಯಾಗನ್ಸ್‌ ಮತ್ತು ಸಿಎಎಫ್‌ ಕಂಪನಿಗಳು ಬಿಡ್‌ ಸಲ್ಲಿಸಿದ್ದವು. ಅಂತಿಮವಾಗಿ 2023ರಲ್ಲಿ 53 ಮೆಟ್ರೋ ಸೆಟ್‌ (318 ಕೋಚ್‌) ಪೂರೈಸುವ ಟೆಂಡರ್‌ನ್ನು 3,177 ಕೋಟಿ ರೂ. ಗಳಿಗೆ ಬಿಇಎಂಎಲ್‌ ತನ್ನದಾಗಿಸಿಕೊಂಡಿತ್ತು. ಈ ಟೆಂಡರ್‌ ಒಪ್ಪಂದದ ಪ್ರಕಾರ ಕೋಚ್‌ಗಳನ್ನು ತಯಾರಿಸಿ ಪೂರೈಸುವುದಲ್ಲದೆ, ಪರೀಕ್ಷೆ ಮತ್ತು ಮುಂದಿನ 15 ವರ್ಷಗಳವರೆಗೆ ನಿರ್ವಹಣೆಯನ್ನು ಕೂಡ ಬೆಮೆಲ್‌ ಮಾಡಬೇಕಿದೆ.

ಸುಧಾರಿತ ಕೋಚ್‌ಗಳು: ಕಾಳೇನ ಅಗ್ರಹಾರದಿಂದ ನಾಗವಾರ ಸಂಪರ್ಕಿಸುವ ಗುಲಾಬಿ ಮಾರ್ಗವು 21.76 ಕಿ.ಮೀ. ಉದ್ದವಿದೆ. ಅದೇ ರೀತಿ ಕೇಂದ್ರ ರೇಷ್ಮೆ ಮಂಡಳಿಯಿಂದ ದೇವನಹಳ್ಳಿ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ 58.19 ಕಿಮೀ ಉದ್ದದ ನೀಲಿ ಮಾರ್ಗದ ಕಾಮಗಾರಿ ಎರಡು ಹಂತಗಳಲ್ಲಿ ನಡೆಯುತ್ತಿದೆ.

318 ಬೋಗಿಗಳ ಪೈಕಿ, ಆರು ಬೋಗಿಗಳ 16 ರೈಲುಗಳು ಗುಲಾಬಿ ಮಾರ್ಗಕ್ಕೆ, ಆರು ಬೋಗಿಗಳ 16 ರೈಲು ಕೇಂದ್ರ ರೇಷ್ಮೆ ಮಂಡಳಿಯಿಂದ- ಕೆಆರ್‌ ಪುರದವರೆಗೆ ಹಾಗೂ ಆರು ಬೋಗಿಗಳ 21 ರೈಲುಗಳನ್ನು ಕೆಆರ್‌ ಪುರ- ವಿಮಾನ ನಿಲ್ದಾಣ ಮಾರ್ಗಕ್ಕೆ ನಿಯೋಜನೆ ಮಾಡಲಾಗುತ್ತದೆ. ವಿಶೇಷವಾಗಿ ವಿನ್ಯಾಸಗೊಳಿಸಿದ ಲಗೇಜ್‌ ರ್ಯಾಕ್‌, ಸುಧಾರಿತ ಅಗ್ನಿ ಸುರಕ್ಷತೆ, ಅಡಚಣೆ, ಹಳಿ ತಪ್ಪುವಿಕೆ ಪತ್ತೆ ವ್ಯವಸ್ಥೆ, ಪ್ಯಾಸೆಂಜರ್‌ ಅಲಾರಮ್‌ ಡಿವೈಸ್‌, ಸಿಬಿಟಿಸಿ ಆಧಾರಿತ ಸಿಗ್ನಲಿಂಗ್‌ ಮುಂತಾದ ಆಧುನಿಕ ತಂತ್ರಜ್ಞಾನವನ್ನು ಈ ಮೆಟ್ರೋ ಕೋಚ್‌ಗಳು ಹೊಂದಿರಲಿದೆ. ಮೆಟ್ರೋ ಕೋಚ್‌ಗಳನ್ನು ಹೈ- ಟೆನ್ಸಿಲ್‌ ಆಸ್ಟೆನಿಟಿಕ್‌ ಸ್ಟೇನ್ಲಸ್‌ ಸ್ಟೀಲ್‌ ಬಳಸಿ ನಿರ್ಮಿ ಸಲಾಗುತ್ತಿದೆ. ಪ್ರತಿ ಮೆಟ್ರೋ ಬೋಗಿಯಲ್ಲೂ ಪರಿಣಾಮಕಾರಿ ಹವಾನಿಯಂತ್ರಣವನ್ನು ಒದಗಿಸಲು ಎರಡು ರೂಫ್‌-ಮೌಂಟೆಡ್‌ ಸಲೂನ್‌ ಏರ್‌ ಕಂಡಿಷನರ್‌ಗಳನ್ನು ಅಳವಡಿಸಲಾಗುತ್ತದೆ. ಐಪಿ-ಆಧಾರಿತ ಪ್ಯಾಸೆಂಜರ್‌ ಅನೌನ್ಸ್‌ಮೆಂಟ್‌ (ಪಿಎ) ಮತ್ತು ಪ್ರಯಾಣಿಕರಿಗೆ ಮಾಹಿತಿ ವ್ಯವಸ್ಥೆ (ಪಿಐಎಸ್‌) ಸಹ ಒಳಗೊಂಡಿರುತ್ತವೆ.ಬಿಇಎಂಎಲ್‌ನಲ್ಲಿ ಕೋಚ್‌ ಉತ್ಪಾದನಾ ಚಟುವಟಿಕೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಬಿಎಂಆರ್ಸಿಎಲ್‌ ಮತ್ತು ಬೆಮೆಲ್‌ ಅಧಿಕಾರಿಗಳು, ತಂತ್ರಜ್ಞರು ಭಾಗವಹಿಸಿದ್ದರು.

ದೇಶದಲ್ಲೇ ಮೊದಲ ಬಾರಿಗೆ ಚಾಲಕ ರಹಿತ ಮೆಟ್ರೋವನ್ನು ನಾವು ನಿರ್ಮಿಸುತ್ತಿದ್ದೇವೆ. ಬಿಎಂಆರ್‌ಸಿಎಲ್‌ಗೆ ಅತ್ಯಾಧುನಿಕ ಬೋಗಿ ನಿರ್ಮಾಣ ಮಾಡಲು ಬದ್ದರಾಗಿದ್ದೇವೆ.-ಶಂತನು ರಾಯ್‌, ಬಿಇಎಂಎಲ್‌ ಎಂಡಿ

ಟಾಪ್ ನ್ಯೂಸ್

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Untitled-1

Kasaragod ಅಪರಾಧ ಸುದ್ದಿಗಳು

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.