ಬೀದಿಗಿಳಿಯಲಿದ್ದಾರೆ ಚಾಲಕರು… ಪ್ರತಿಭಟಿಸಲು


Team Udayavani, Feb 26, 2017, 12:02 PM IST

ola-cars.jpg

ಬೆಂಗಳೂರು: ಓಲಾ-ಉಬರ್‌ ಟ್ಯಾಕ್ಸಿ ಚಾಲಕರ ಹೋರಾಟ ಮತ್ತೂಂದು ಮಜಲು ತಲುಪಿದೆ. ಮೂರ್‍ನಾಲ್ಕು ದಿನಗಳಿಂದ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುತ್ತಿದ್ದ ಟ್ಯಾಕ್ಸಿ ಚಾಲಕರು, ಮಂಗಳವಾರದಿಂದ ಸಾರ್ವಜನಿಕವಾಗಿಯೇ ಪ್ರತಿಭಟಿಸಲು ನಿರ್ಧರಿಸಿದ್ದಾರೆ. 

ಮೂರ್‍ನಾಲ್ಕು ದಿನಗಳಿಂದ ಸೇವೆಗೆ ಹೋಗದೆ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಹಾಗೂ ಓಲಾ-ಉಬರ್‌ ಕಂಪೆನಿಗಳು ಚಾಲಕರಿಗೆ ಸ್ಪಂದಿಸಿಲ್ಲ. ಮತ್ತೂಂದೆಡೆ ಪ್ರತಿಭಟನೆಗೆ ಪೊಲೀಸರು ಅನುಮತಿ ನೀಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸೋಮವಾರದವರೆಗೆ ಕಾದುನೋಡಲು ತೀರ್ಮಾನಿಸಿರುವ ಚಾಲಕರು, ಮಂಗಳವಾರದಿಂದ ಬೀದಿಗಿಳಿದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ. ಓಲಾ-ಉಬರ್‌ ಟ್ಯಾಕ್ಸಿ ಮಾಲಿಕರ ಮತ್ತು ಚಾಲಕರ ಸಂಘದ ಅಧ್ಯಕ್ಷ ತನ್ವೀರ್‌ ಪಾಷ ಈ ವಿಚಾರ ತಿಳಿಸಿದ್ದಾರೆ. 

“ಇತ್ತ ಬೇಡಿಕೆಗಳನ್ನೂ ಈಡೇರಿಸುತ್ತಿಲ್ಲ. ಅತ್ತ ಪ್ರತಿಭಟನೆಗೂ ಅವಕಾಶ ನೀಡುತ್ತಿಲ್ಲ. ಸರ್ಕಾರವೂ ಮಧ್ಯಪ್ರವೇಶಿಸುತ್ತಿಲ್ಲ. ಈ ಮಧ್ಯೆ ಮೌನ ಪ್ರತಿಭಟನೆ ನಡೆಸುತ್ತಿರುವ ಚಾಲಕರ ವಿರುದ್ಧವೇ ಇಲ್ಲ-ಸಲ್ಲದ ಆರೋಪಗಳನ್ನು ಮಾಡಿ, ಜನರಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ಕಂಪೆನಿಗಳು ಮಾಡುತ್ತಿವೆ. ಆದ್ದರಿಂದ ಸೋಮವಾರ ಸಂಘದ ಸಭೆ ಕರೆದು ಹೋರಾಟ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು,” ಎಂದು ಪಾಷಾ ಹೇಳಿದರು. 

ಅದೇ ರೀತಿ, ಓಲಾ-ಉಬರ್‌ ಕಂಪೆನಿಗಳು ಕೂಡ ಕಾದುನೋಡುವ ತಂತ್ರ ಅನುಸರಿಸುತ್ತಿವೆ. ಸೋಮವಾರದವರೆಗಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿ ಹೆಜ್ಜೆ ಇಡಲು ನಿರ್ಧರಿಸಿವೆ. ಅಲ್ಲಿಯವರೆಗೆ ಲಭ್ಯವಿರುವ ವಾಹನಗಳಲ್ಲೇ ಸೇವೆ ಮುಂದುವರಿಸುವುದಾಗಿ ಕಂಪೆನಿಗಳ ವಕ್ತಾರರು ತಿಳಿಸಿದ್ದಾರೆ. 

ಸೇವೆ ನಿಲ್ಲಿಸಿ ಪ್ರತಿಭಟಿಸುತ್ತಿರುವ ಚಾಲಕರು ನಷ್ಟ ಅನುಭವಿಸುತ್ತಿದ್ದಾರೆ. “ಸದ್ಯ ತಿಂಗಳಿಗೆ 40 ಸಾವಿರ ರೂ. ಆದಾಯ ಬರುತ್ತಿದೆ. ಕಾರು ಖರೀದಿಯ  ಸಾಲದ ಕಂತು ತೀರಿಸಲು ಹೆಚ್ಚು ಹಣ ಖರ್ಚಾಗುತ್ತಿದೆ. ಆದರೆ, ಪ್ರತಿಭಟನೆಯಿಂದ ಈ ಆದಾಯಕ್ಕೆ ಕತ್ತರಿ ಬಿದ್ದಿದ್ದು, ಕುಟುಂಬ ನಿರ್ವಹಣೆ ಹೇಗೆಂಬ ಚಿಂತೆ ಶುರುವಾಗಿದೆ’ ಎಂದು ಇಂದಿರಾನಗರದ ಉಬರ್‌ ಕಂಪೆನಿಯೊಂದಿಗೆ ಜೋಡಣೆ ಕಾರು ನೋಂದಾಯಿಸಿಕೊಂಡ ಚಾಲಕ ಮಹೇಶ್‌ ಅಲವತ್ತುಕೊಂಡರು. 

ಟ್ಯಾಕ್ಸಿಗಳು ಸಿಗದೆ ಸಾರ್ವಜನಿಕರ ಪರದಾಟ
ಈ ಮಧ್ಯೆ ನಗರದಲ್ಲಿ ಓಲಾ-ಉಬರ್‌ ಟ್ಯಾಕ್ಸಿಗಳ ಸಂಚಾರ ತುಂಬಾ ವಿರಳವಾಗಿತ್ತು. ಆ್ಯಪ್‌ನಲ್ಲಿ ಯಾವುದೇ ದಿಕ್ಕಿನಿಂದ ಯಾವುದೇ ಮೂಲೆಗೆ ಗುರುತು ಮಾಡಿದರೂ, ಒಂದೇ ಕಾರು ಲಭ್ಯವಿರುತ್ತದೆ. ಆ ಸೇವೆಗೂ ಗ್ರಾಹಕರು 10ರಿಂದ 20 ನಿಮಿಷ ಕಾಯಬೇಕಾಗಿದೆ. ಇದರಿಂದ ಜನ ಪರ್ಯಾಯವಾಗಿ ಆಟೋಗಳ ಮೊರೆಹೋಗುತ್ತಿದ್ದಾರೆ. ಹೀಗಾಗಿ ಆಟೋ ಚಾಲಕರು ದುಪ್ಪಟ್ಟು ದರ ವಸೂಲಿ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.