![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Oct 3, 2021, 9:23 AM IST
ಬೆಂಗಳೂರು: ಸ್ವಿಗ್ಗಿ ಫುಡ್ ಡೆಲಿವರಿ ಮತ್ತು ಕೊರಿಯರ್ ಮೂಲಕ ಉನ್ನತ ಮಟ್ಟದ ಗಾಂಜಾವನ್ನು ಮನೆ ಬಾಗಿಲಿಗೆ ಪೂರೈಸುತ್ತಿದ್ದ ಸ್ವಿಗ್ಗಿ ಡೆಲಿವರಿ ಬಾಯ್ ಸೇರಿ ಏಳು ಮಂದಿಯನ್ನು ಸಿನಿಮೀಯ ರೀತಿಯಲ್ಲಿ ಕಾರಿನಲ್ಲಿ ಹಿಂಬಾಲಿಸಿ ಮಾದಕ ವಸ್ತು ನಿಯಂತ್ರಣ ಘಟಕ (ಎನ್ಸಿಬಿ) ಅಧಿಕಾರಿಗಳು ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ ಕಿಂಗ್ಪಿನ್ ಸೇರಿ ಆರು ಮಂದಿ ಮತ್ತು ಹೈದರಾಬಾದ್ನ ಒಬ್ಬ ಪೂರೈಕೆದಾರ ಸೇರಿ 7 ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳಿಂದ 140 ಕೆ.ಜಿ. ಉನ್ನತ ಮಟ್ಟದ ಗಾಂಜಾ, 5.20 ಲಕ್ಷ ರೂ. ಮೌಲ್ಯದ ಪಾಕೆಟ್ ಮೆಟಿರಿಯಲ್, ಎರಡು ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಎನ್ಸಿಬಿ ತಿಳಿಸಿದೆ.
ಗುಪ್ತಚರ ಇಲಾಖೆ ಮಾಹಿತಿ ಆಧರಿಸಿ ಬೆಂಗಳೂರಿನ ಎನ್ಸಿಬಿ ವಲಯ ನಿರ್ದೇಶಕ ಅಮಿತ್ ಗುವಾಹಟೆ ನೇತೃತ್ವದ ಅಧಿಕಾರಿಗಳ ತಂಡ, ಸೆ.30ರಂದು ಬೆಂಗಳೂರಿನಲ್ಲಿ ಕೊರಿಯರ್ ಮೂಲಕ ಬಂದ ಸುಮಾರು ಎಂಟು ಬಾಕ್ಸ್ಗಳನ್ನು ಮಾರುತಿ ಕಾರಿಗೆ ನೇರವಾಗಿ ತುಂಬಲಾಗುತ್ತಿತ್ತು. ಈ ವೇಳೆ ದಾಳಿ ನಡೆಸಿ 137 ಕೆ.ಜಿ. ಗಾಂಜಾ ವಶಕ್ಕೆ ಪಡೆದು ಪ್ರಕರಣ ಕಿಂಗ್ಪಿನ್ ಸೇರಿ ಇಬ್ಬರನ್ನು ಬಂಧಿಸಲಾಗಿದೆ.
ಇದನ್ನೂ ಓದಿ:ಶಾರುಖ್ ಖಾನ್ ಪುತ್ರನ ಮಾದಕ ನಂಟು: ಎನ್ ಸಿಬಿ ಬಲೆಗೆ ಬಿದ್ದ ಆರ್ಯನ್ ಖಾನ್
ಬಳಿಕ ಅವರ ಮನೆಗಳ ಮೇಲೆ ದಾಳಿ ನಡೆಸಿ 4.81 ಲಕ್ಷ ರೂ. ನಗದು ಮತ್ತು ಡ್ರಗ್ಸ್ ಪ್ಯಾಕ್ ಮಾಡಲು ಬಳಸುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರ ಮಾಹಿತಿ ಮೇರೆಗೆ ಸ್ವಿಗ್ಗಿ ಡೆಲಿವರಿ ಬಾಯ್ ವೊಬ್ಬನ ಬಂಧಿಸಲು ಹೋದಾಗ ಆತ ಸ್ವಿಗಿ ಬ್ಯಾಗ್ನಲ್ಲಿ ಡ್ರಗ್ಸ್ ತುಂಬಿಕೊಂಡು ಮಾರಾಟಕ್ಕೆ ಹೊರಟ್ಟಿದ್ದು ಆತನನ್ನು ಬಂಧಿಸಲಾಗಿದೆ. ಆತನ ಮನೆಯಲ್ಲಿ ಮೂರು ಕೆ.ಜಿ. ಗಾಂಜಾ ವಶಕ್ಕೆ ಪಡೆಯಲಾಗಿದೆ ಎಂದು ಎನ್ಸಿಬಿ ತಿಳಿಸಿದೆ.
ಕೋವಿಡ್ ಸಂದರ್ಭದಲ್ಲೂ ಪೂರೈಕೆ: ಪ್ರಕರಣದ ಕಿಂಗ್ಪಿನ್ ಬೆಂಗಳೂರಿನಲ್ಲಿ ತನ್ನದೇ ಆದ ಬೃಹತ್ ಜಾಲ ಹೊಂದಿದ್ದು, ವಿಚಾರಣೆ ವೇಳೆ ಆರೋಪಿಗಳು ಕೊರೊನಾ ಮೊದಲು ಮತ್ತು ಎರಡನೇ ಅಲೆ ಸಂದರ್ಭದಲ್ಲಿ ಗ್ರಾಹಕರ ಬೇಡಿಕೆಗೆ ತಕ್ಕಂತೆ ಮನೆ ಬಾಗಿಲಿಗೆ ಸ್ವಿಗ್ಗಿ ಡೆಲಿವರಿ ಹೆಸರಿನಲ್ಲಿ ಪೂರೈಕೆ ಮಾಡುತ್ತಿದ್ದರು ಎಂಬುದು ಗೊತ್ತಾಗಿದೆ ಎಂದು ಎನ್ಸಿಬಿ ತಿಳಿಸಿದೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.