![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Feb 18, 2024, 11:43 AM IST
ಬೆಂಗಳೂರು: ಮದ್ಯದ ಅಮಲಿನಲ್ಲಿ ಹಣದ ವಿಚಾರಕ್ಕೆ ಸ್ನೇಹಿತನಿಗೆ ಬ್ಲೇಡ್ನಿಂದ ಹಲ್ಲೆಗೈದು ಕೊಲೆಗೆ ಯತ್ನಿಸಿದ ಆರೋಪಿಯನ್ನು ಹಲಸೂರು ಗೇಟ್ ಠಾಣೆ ಪೊಲೀ ಸರು ಬಂಧಿಸಿದ್ದಾರೆ.
ನಗರ್ತಪೇಟೆಯ ಸಂತೋಷ್(26) ಬಂಧಿತ. ಆರೋಪಿ ಫೆ.15 ರಂದು ಮಧ್ಯಾಹ್ನ 12 ಗಂಟೆಗೆ ರಾಜ ಅಲಿಯಾಸ್ ರಾಜರಾವ್(25) ಎಂಬಾತನ ಮೇಲೆ ಬ್ಲೇಡ್ನಿಂದ ಹೊಟ್ಟೆ ಹಾಗೂ ಭುಜದ ಭಾಗಕ್ಕೆ ಕೊಯ್ದು ಕೊಲೆಗೆ ಯತ್ನಿಸಿದ್ದ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿ ಸಂತೋಷ್ ಮತ್ತು ಗಾಯಾಳು ರಾಜ ಹಲವು ವರ್ಷ ಗಳಿಂದ ಸ್ನೇಹಿತರು. ನಗರ್ತಪೇಟೆ, ಚಿಕ್ಕಪೇಟೆ ಸುತ್ತಮುತ್ತ ಕೂಲಿ ಮಾಡಿಕೊಂಡು ಜೀವನ ಮಾಡುತ್ತಿದ್ದರು. ದುಶ್ಚಟಗಳ ದಾಸರಾಗಿರುವ ಇಬ್ಬರೂ ಮನೆಗಳಿಂದ ದೂರಾಗಿದ್ದು, ರಾತ್ರಿ ವೇಳೆ ಎಲ್ಲೆಂದರಲ್ಲಿ ಮಲಗುತ್ತಿದ್ದರು. ಫೆ.15ರಂದು ಮದ್ಯದ ಅಂಗಡಿಯಲ್ಲಿ ಮದ್ಯ ಸೇವಿಸಿದ್ದ ರಾಜ ಅಂಗಡಿಯೊಂದರ ಎದುರು ಕುಳಿತ್ತಿದ್ದ. ಈ ವೇಳೆ ಪಾನಮತ್ತ ನಾಗಿ ಬಂದ ಆರೋಪಿ ಸಂತೋಷ್, ಮದ್ಯ ಸೇವಿಸಲು ಹಣ ಕೊಡುವಂತೆ ರಾಜನನ್ನು ಕೇಳಿದ್ದಾನೆ. ಆಗ ರಾಜ ಹಣ ಇಲ್ಲ ಎಂದಿದ್ದಾನೆ. ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಆರೋಪಿ ಸಂತೋಷ್ ತನ್ನ ಜೇಬಿನಲ್ಲಿದ್ದ ಬ್ಲೇಡ್ ತೋರಿಸಿ, ಹಣ ಕೊಡದಿದ್ದರೆ ಸಾಯಿಸುವುದಾಗಿ ಹೆದರಿಸಿದ್ದಾನೆ. ರಾಜ ಹಣ ಇಲ್ಲ ಎಂದಾಗ, ಸಂತೋಷ್ ಬ್ಲೇಡ್ನಿಂದ ರಾಜನ ಹೊಟ್ಟೆ ಹಾಗೂ ಭುಜದ ಭಾಗಕ್ಕೆ ಹಲವು ಬಾರಿ ಕೊಯ್ದು ಪರಾರಿಯಾಗಿದ್ದಾನೆ. ರಕ್ತದ ಮಡುವಿನಲ್ಲಿದ್ದ ರಾಜನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾನೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.