ಮಳೆ ಕಾರಣಕ್ಕೆ ಗುಂಡಿ ಮುಚ್ಚುವ ಕಾರ್ಯ ಸ್ಥಗಿತ


Team Udayavani, Oct 10, 2017, 11:21 AM IST

gundi-karya-stagita.jpg

ಬೆಂಗಳೂರು: ನಗರದಲ್ಲಿ ಸೋಮವಾರ ರಾತ್ರಿ ಮತ್ತೆ ಮಳೆ ಅಬ್ಬರಿಸಿದ್ದು, ಸಮರೋಪಾದಿಯಲ್ಲಿ ಗುಂಡಿ ಮುಚ್ಚುವ ಕಾರ್ಯಕ್ಕೆ ಬ್ರೇಕ್‌ ಹಾಕಿದೆ. “ಮಳೆ ಬರಲಿ, ಬಾರದಿರಲಿ ನಿಗದಿತ ಗಡುವಿನಲ್ಲಿ ಗುಂಡಿ ಮುಚ್ಚಬೇಕು’ ಎಂದು ಬಿಬಿಎಂಪಿ ಆಯುಕ್ತರು ಸೂಚಿಸಿದ ಹಿನ್ನೆಲೆ ಎಂಜಿನಿಯರ್‌ಗಳು ಭಾನುವಾರ ರಾತ್ರಿಯಿಂದಲೇ ತ್ವರಿತ ಗತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯ ಕೈಗೆತ್ತಿಕೊಂಡರು. ಆದರೆ ಸೋಮವಾರ ಬೆಳಗಿನಜಾವ ಮತ್ತು ರಾತ್ರಿ ಸುರಿದ ಮಳೆ, ಈ ಕಾರ್ಯಕ್ಕೆ ತಡೆಯೊಡ್ಡಿತು. 

ಧಾರಾಕಾರ ಮಳೆ ಬಿದ್ದಿದ್ದರಿಂದ ಅನಿವಾರ್ಯವಾಗಿ ಗುಂಡಿ ಮುಚ್ಚುವ ಕಾರ್ಯ ಸ್ಥಗಿತಗೊಂಡಿತು. ಮಳೆ ನಿಂತ ನಂತರ ಗುಂಡಿಯಲ್ಲಿನ ನೀರು ಹೊರಹಾಕಿ, ಅದು ಒಣಗುವವರೆಗೂ ಕಾದು ಕೋಲ್ಡ್‌ ಮಿಕ್ಸ್‌ನಿಂದ ಮುಚ್ಚಬಹುದು. ಆದರೆ, ರಾತ್ರಿಯ ಮಳೆ ಇದಕ್ಕೂ ಅವಕಾಶ ನೀಡಲಿಲ್ಲ. ರಾತ್ರಿಪಾಳಿಯಲ್ಲಿದ್ದ ಎಂಜಿನಿಯರ್‌ಗಳು, ಕಾರ್ಮಿಕರು, ಮಳೆ ನಿಲ್ಲುವವರೆಗೂ ಗಂಟೆಗಟ್ಟಲೆ ಕಾದುಕುಳಿತರು.

ಈ ಮಧ್ಯೆ ಭಾನುವಾರ ರಾತ್ರಿಯಿಂದ ಸೋಮವಾರ ಸಂಜೆವರೆಗೆ ಸುಮಾರು 30ರಿಂದ 40 ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಲಾಗಿದೆ. 8ರಿಂದ 10 ಜನರ ತಂಡಗಳನ್ನು ಮಾಡಿ ಒಂದೊಂದು ರಸ್ತೆಗೆ ತಲಾ ಒಂದು ತಂಡ ಕೆಲಸ ಮಾಡುತ್ತಿದೆ. ಬುಲ್‌ ಟೆಂಪಲ್‌, ಬನಶಂಕರಿ ದೇವಸ್ಥಾನ ರಸ್ತೆ, ಮಾರ್ಗೋಸಾ ರಸ್ತೆ, ಯಲಹಂಕ ಸೇರಿದಂತೆ ವಿವಿಧೆಡೆ ಗುಂಡಿಗಳನ್ನು ಹಾಟ್‌ ಮಿಕ್ಸ್‌ ಮತ್ತು ಕೋಲ್ಡ್‌ ಮಿಕ್ಸ್‌ ಎರಡರಿಂದಲೂ ಮುಚ್ಚಲಾಗಿದೆ. ಆದರೆ, ಮಳೆಯಿಂದ ಈ ಕಾರ್ಯ ತುಸು ಮಂದಗತಿಯಲ್ಲಿ ಸಾಗುತ್ತಿದೆ ಎಂದು ಮುಖ್ಯ ಎಂಜಿನಿಯರ್‌ (ರಸ್ತೆ ಮೂಲಸೌಕರ್ಯ) ಎಸ್‌. ಸೋಮಶೇಖರ್‌ ತಿಳಿಸಿದರು. 

ರಸ್ತೆಯಲ್ಲಿ ವಾಹನಗಳ ಸರ್ಕಸ್‌!: ಇನ್ನೂ ಒಂದೆಡೆ ಮಳೆ, ಮತ್ತೂಂದೆಡೆ ಹದಗೆಟ್ಟ ರಸ್ತೆಗಳ ನಡುವೆ ವಾಹನ ಸವಾರರು ಪರದಾಟ ನಡೆಸಿದರು. ಈ ಹಿಂದೆ ಮುಚ್ಚಿದ ರಸ್ತೆ ಗುಂಡಿಗಳು ಕೂಡ ನಿರಂತರ ಮಳೆಯ ಹೊಡೆತಕ್ಕೆ ಬಾಯೆ¤ರೆದಿದ್ದವು. ಮಳೆಯಿಂದ ಬಚಾವಾಗುವ ಭರದಲ್ಲಿ ನೀರು ತುಂಬಿದ ಗುಂಡಿಗಳಲ್ಲಿ ಆಯತಪ್ಪಿ ಬಿದ್ದ ಅನೇಕ ಪ್ರಸಂಗಗಳು ನಡೆದವು.

ಈ ನಡುವೆ ಮಳೆಯ ರಭಸಕ್ಕೆ ಪ್ರಮುಖ ಜಂಕ್ಷನ್‌ಗಳು, ರಸ್ತೆಗಳಲ್ಲಿ ನೀರು ಆವರಿಸಿದ್ದರಿಂದ ರಾತ್ರಿ 10 ಗಂಟೆಯಾದರೂ ಸಂಚಾರದಟ್ಟಣೆ ಉಂಟಾಯಿತು. ಜಲಾವೃತಗೊಂಡ ಜಂಕ್ಷನ್‌ಗಳ ಪರ್ಯಾಯ ಮಾರ್ಗಗಳಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಯಿತು. 

ಎಂ.ಜಿ. ರಸ್ತೆ, ಶಿವಾನಂದ ವೃತ್ತ, ಮೆಜೆಸ್ಟಿಕ್‌, ಕೆ.ಆರ್‌. ಮಾರುಕಟ್ಟೆ, ಹೆಬ್ಟಾಳ, ಶಾಂತಿನಗರ ಸೇರಿದಂತೆ ವಿವಿಧೆಡೆ ಮಳೆಯಾಗಿದೆ. ಮೈಸೂರು ರಸ್ತೆ, ನಾಯಂಡಹಳ್ಳಿ, ತುಮಕೂರು ರಸ್ತೆ, ಸೆಂಟ್ರಲ್‌ ಸಿಲ್ಕ್ ಬೋರ್ಡ್‌, ಕೆ.ಆರ್‌. ಪುರ ರಸ್ತೆ, ಎನ್‌ಜಿಇಎಫ್, ಪೀಣ್ಯ, ವೆಲ್ಲಾರ ಜಂಕ್ಷನ್‌ ಮತ್ತಿತರ ಕಡೆಗಳಲ್ಲಿ ಸಂಚಾರದಟ್ಟಣೆ ಇತ್ತು.

ಟಾಪ್ ನ್ಯೂಸ್

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

6-bng

Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.