
ತಪ್ಪೊಪ್ಪಿಕೊಂಡ ದುನಿಯಾ ವಿಜಯ್
Team Udayavani, Nov 5, 2018, 12:20 PM IST

ಬೆಂಗಳೂರು: ಮಾಸ್ತಿಗುಡಿ ಸಿನಿಮಾ ಚಿತ್ರೀಕರಣದ ವೇಳೆ ಇಬ್ಬರು ನಟರು ಮೃತಪಟ್ಟ ಪ್ರಕರಣ ಸಂಬಂಧ ತಾವರೆಕೆರೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ಪ್ರಕರಣದಲ್ಲಿ ನಟ ದುನಿಯಾ ವಿಜಯ್ ಹಾಗೂ ಚಿತ್ರ ನಿರ್ಮಾಪಕ ಸುಂದರ್ ಪಿ.ಗೌಡನ ವಿರುದ್ಧ ಸಿ.ಕೆ.ಅಚ್ಚುಕಟ್ಟು ಪೊಲೀಸರು 2ನೇ ಎಸಿಎಂಎಂ ನ್ಯಾಯಾಲಯಕ್ಕೆ 65 ಪುಟಗಳ ದೋಷಾರೋಪಪಟ್ಟಿ ಸಲ್ಲಿಸಿದ್ದಾರೆ.
ಮಾಸ್ತಿಗುಡಿ ಚಿತ್ರೀಕರಣದ ವೇಳೆ ಖಳ ನಟರಾದ ಉದಯ್ ಮತ್ತು ಅನಿಲ್ ಮೃತಪಟ್ಟ ಹಿನ್ನೆಲೆಯಲ್ಲಿ ಸುಂದರ್ ಪಿ.ಗೌಡ ವಿರುದ್ಧ ಪ್ರಕರಣ ದಾಖಲಾಗಿದ್ದು, ಪದೇ ಪದೆ ಕೋರ್ಟ್ಗೆ ಗೈರಾಗುತ್ತಿದ್ದರು. ಈ ಹಿನ್ನೆಲೆಯಲ್ಲಿ ವಾರಂಟ್ ಜಾರಿ ಮಾಡಲು ತಾವರೆಕೆರೆ ಮತ್ತು ಸಿ.ಕೆ.ಅಚ್ಚುಕಟ್ಟು ಪೊಲೀಸರು ಮೇ 30ರ ರಾತ್ರಿ ಹೊಸಕೆರೆಹಳ್ಳಿಯ ಸುಂದರ್ ಗೌಡ ಮನೆಗೆ ಹೋಗಿದ್ದರು. ಈ ವೇಳೆ ಸುಂದರ್ಗೌಡನನ್ನು ಬಂಧಿಸದಂತೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದಲ್ಲದೆ, ಆರೋಪಿ ಸುಂದರ್ ಗೌಡ ಪರಾರಿಯಾಗಲು ವಿಜಯ್ ಸಹಕರಿಸಿದ್ದರು.
ಈ ಸಂಬಂಧ ಮುಖ್ಯ ಪೇದೆ ಗೋವಿಂದರಾಜು ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡಿದ್ದ ಸಿ.ಕೆ.ಅಚ್ಚುಕಟ್ಟು ಪೊಲೀಸರು, ತಲೆಮರೆಸಿಕೊಂಡಿದ್ದ ದುನಿಯಾ ವಿಜಿ ಮತ್ತು ಸುಂದರ್ ಗೌಡರನ್ನು ಬಂಡೀಪುರ ಟೈಗರ್ ರೆಸಾರ್ಟ್ನಲ್ಲಿ ಬಂಧಿಸಿದ್ದರು. ಇದೀಗ ತನಿಖೆ ಪೂರ್ಣಗೊಳಿಸಿದ ಪೊಲೀಸರು, ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದು, ಪ್ರಕರಣ ಸಂಬಂಧ 9 ಮಂದಿ ಸಾಕ್ಷ್ಯಗಳ ಹೇಳಿಕೆಯನ್ನು ಉಲ್ಲೇಖೀಸಿದ್ದಾರೆ.
ತಪ್ಪೊಪ್ಪಿಕೊಂಡ ವಿಜಯ್: “ಮೇ 30ರ ರಾತ್ರಿ 11 ಗಂಟೆಗೆ ನನ್ನ ಮೊಬೈಲ್ ಸಂಖ್ಯೆಗೆ ನಿರ್ಮಾಪಕ ಸುಂದರ್ ಗೌಡ ಕರೆ ಮಾಡಿದ್ದರು. ತಾವರೆಕೆರೆ ಪೊಲೀಸರು ವಾರೆಂಟ್ ಹಿಡಿದು ಬಂದಿದ್ದು, ನನ್ನನ್ನು ಬಂಧಿಸುತ್ತಾರೆ ಎಂದು ಹೇಳಿದ್ದರು. ಹೀಗಾಗಿ ಸುಂದರ್ಗೌಡ ಮನೆಗೆ ತೆರಳಿ ಅವರನ್ನು ಬಂಧಿಸದಂತೆ ಪೊಲೀಸರನ್ನು ತಡೆದಿದ್ದೆ. ರಾತ್ರಿ ವೇಳೆ ಮನೆಗೆ ಬಂದು ದಬ್ಟಾಳಿಕೆ ಮಾಡುತ್ತೀರಾ ಎಂದು ಕರ್ತವ್ಯನಿರತ ಪೊಲೀಸರನ್ನು ಪ್ರಶ್ನಿಸಿದ್ದೆ.
ಪೊಲೀಸರು ತಾವು ತಂದಿದ್ದ ವಾರೆಂಟ್ ನನಗೆ ತೋರಿಸಿದ್ದರು. ಆದರೂ ರಾತ್ರಿ ವೇಳೆ ಬಂದು ತೊಂದರೆ ಕೊಡಬೇಡಿ, ನಿಮ್ಮ ವಿರುದ್ಧವೇ ದೌರ್ಜನ್ಯ ಎಸಗಿದ ದೂರು ಕೊಡಬೇಕಾಗುತ್ತದೆ ಎಂದು ಹೇಳಿ ಪೇದೆ ಕೈ ಹಿಡಿದು ಎಳೆದಿದ್ದೆ’ ಎಂದು ವಿಚಾರಣೆ ಸಂದರ್ಭದಲ್ಲಿ ದುನಿಯಾ ವಿಜಯ್ ಹೇಳಿಕೆ ನೀಡಿದ್ದಾರೆ.
ನಿರ್ಮಾಪಕ ಸುಂದರ್ ಪಿ.ಗೌಡ ಕೂಡ ಹೇಳಿಕೆ ನೀಡಿದ್ದು, ವಿಜಯ್ ಸಹಾಯದಿಂದ ಕೇವಲ 10 ನಿಮಿಷಗಳಲ್ಲಿ ತಪ್ಪಿಸಿಕೊಂಡೆ. ಬಟ್ಟೆ ಬದಲಿಸುವ ನೆಪದಲ್ಲಿ ಮನೆಯೊಳಗೆ ಹೋಗಿ, ಹಿಂದಿನ ಬಾಗಿಲ ಮೂಲಕ ಪರಾರಿಯಾಗಿ, ವಿಜಯ್ ಸ್ನೇಹಿತನ ಮನೆಯಲ್ಲಿ ವಾಸವಾಗಿದ್ದೆ ಎಂದು ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.