ಕೆಂಪೇಗೌಡ ಅಧ್ಯಯನ ಕೇಂದ್ರಕ್ಕೆ ಗ್ರಹಣ
Team Udayavani, Jan 2, 2018, 12:20 PM IST
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ನಾಡಪ್ರಭು ಕೆಂಪೇಗೌಡ ಅಧ್ಯಯನ ಕೇಂದ್ರಕ್ಕೆ ಸ್ವಂತ ಕಟ್ಟಡ ಸೇರಿದಂತೆ ಯಾವುದೇ ಸೌಲಭ್ಯಗಳಿಲ್ಲ. ಆದರೂ, ಐವರು ಸಂಶೋಧಕರು ಕೆಂಪೇಗೌಡರ ಕುರಿತಾದ ಸಂಶೋಧನೆ ನಡೆಸುತ್ತಿದ್ದಾರೆ.
ಕೆಂಪೇಗೌಡರ ಇತಿಹಾಸ ಮತ್ತು ಸಮಕಾಲೀನ ಸನ್ನಿವೇಶ, ಹೋರಾಟ ಇತ್ಯಾದಿಗಳ ಅಧ್ಯಯನಕ್ಕಾಗಿ ಬೆಂಗಳೂರು ವಿಶ್ವವಿದ್ಯಾಯದಲ್ಲಿ ಅಧ್ಯಯ ಕೇಂದ್ರ ತೆರೆಯಲಾಗಿದೆ. ಅಧ್ಯಯನ ಕೇಂದ್ರ ಕಟ್ಟಡ ನಿರ್ಮಾಣಕ್ಕಾಗಿ 3 ಎಕರೆ ಜಮೀನನ್ನು ಬೆಂವಿವಿಯಿಂದಲೇ ಮೀಸಲಿಟ್ಟಿದೆ. ಕೇಂದ್ರ ಅಭಿವೃದ್ಧಿಗೆ ಬಿಬಿಎಂಪಿಯಿಂದ 50 ಕೋಟಿ ರೂ. ಮಂಜೂರಾಗಿದೆ. ಕಟ್ಟಡದ ಶಂಕುಸ್ಥಾಪನೆ ಮಾಡಿ 3 ತಿಂಗಳು ಕಳೆದರೂ ಕಾಮಗಾರಿ ಆರಂಭವಾಗಿಲ್ಲ.
ಅಧ್ಯಯನ ಕೇಂದ್ರದಲ್ಲಿ ಐವರು ಪ್ರಶಿಕ್ಷಣಾರ್ಥಿಗಳು ಸಂಶೋಧನೆ ಚುಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಉನ್ನತ ಮಟ್ಟದ ಸಂಶೋಧನೆಗೆ ಪೂರಕವಾದ ಯಾವ ವ್ಯವಸ್ಥೆ ಹಾಗೂ ಸೌಲಭ್ಯವೂ ಇಲ್ಲಿಲ್ಲ. ಅಧ್ಯಯನ ಕೇಂದ್ರವನ್ನು ವ್ಯವಸ್ಥಿತವಾಗಿ ನಡೆಸಿಕೊಂಡು ಹೋಗಲು ಬೇಕಾದ ಪರಿಕರಗಳ ವ್ಯವಸ್ಥೆ ಕೂಡ ಮಾಡಿಕೊಟ್ಟಿಲ್ಲ. ಕಾರಣ, ಸಮಾಜಶಾಸ್ತ್ರ ವಿಭಾಗದ ಕಟ್ಟಡದಲ್ಲೇ ಕೇಂದ್ರ ಕಾರ್ಯ ಚಟುವಟಿಕೆ ನಡೆಯುತ್ತಿದೆ.
ಬೆಂಗಳೂರು ನಿರ್ಮಾತೃ ಕೆಂಪೇಗೌಡ ಹೆಸರಿನ ಅಧ್ಯಯನ ಪೀಠವನ್ನು ಬೆಂಗಳೂರು ವಿವಿಯಲ್ಲಿ ಸ್ಥಾಪನೆ ಮಾಡಬೇಕೆಂಬ ಬೇಡಿಕೆ ಹಲವು ವರ್ಷಗಳಿಂದಲೂ ಇತ್ತು. ಪ್ರೊ.ತಿಮ್ಮೇಗೌಡ ಅವರು ಕುಲಪತಿಯಾಗಿದ್ದ ಸಂದರ್ಭದಲ್ಲಿ ಅಧ್ಯಯನ ಕೇಂದ್ರ ತೆರೆಯಲಾಯಿತು. ಬಿಬಿಎಂಪಿ ಕೌನ್ಸಿಲ್ ಸಭೆಯ ನಿರ್ಣಯದಂತೆ 50 ಕೋಟಿ ರೂ.ಗಳನ್ನು ಅಧ್ಯಯನ ಕೇಂದ್ರದ ಅಭಿವೃದ್ಧಿಗೆ ಮೀಸಲಿಡಲಾಯಿತ್ತು. ಇದಕ್ಕೆ ಪೂರಕವಾಗಿ ಬೆಂಗಳೂರು ವಿವಿ 3 ಎಕೆರೆ ಜಾಗವನ್ನೂ ಮೀಸಲಿಟ್ಟಿತ್ತು.
ಸಂಶೋಧನಾ ಪ್ರಕ್ರಿಯೆ: ಸೌಲಭ್ಯ ನೀಡಿಲ್ಲ ಎಂದ ಮಾತ್ರಕ್ಕೆ ಕೆಂಪೇಗೌಡರ ಕುರಿತಾದ ಸಂಶೋಧನಾ ಕಾರ್ಯ ಮೊಟಕಾಗಿಲ್ಲ. ಅಧ್ಯಯನ ಕೇಂದ್ರ ಸ್ಥಾಪನೆಯಾದ ದಿನದಿಂದಲೂ ಸಂಶೋಧನೆ ನಡೆಯುತ್ತಲೇ ಇದೆ. ಕೆಂಪೇಗೌಡರ ಇತಿಹಾಸ, ಅಂದಿನ ಜನಜೀವನ, ಆರ್ಥಿಕ ಪರಿಸ್ಥಿತಿ ಇತ್ಯಾದಿ ಸೇರಿದಂತೆ ಅವರ ಕಾಲಘಟ್ಟದ ಅಧ್ಯಯನವನ್ನು ಐವರು ಬೇರೆ ಬೇರೆ ಆಯಾಮಗಳಲ್ಲಿ ಸಂಶೋಧನೆ ನಡೆಸುತ್ತಿದ್ದಾರೆ. ಇದರೊಂದಿಗೆ ಕೇಂದ್ರಕ್ಕೆ ನಿರ್ದೇಶಕರನ್ನು ನೇಮಕ ಮಾಡಲಾಗಿದೆ.
ಕೆಂಪೇಗೌಡ ಅಧ್ಯಯನ ಕೇಂದ್ರಕ್ಕೆ ಜಾಗ ನೀಡಲಾಗಿದೆ. ಆದರೆ, ಕಟ್ಟಡ ಕಾಮಗಾರಿ ಆರಂಭವಾಗಿಲ್ಲ. ಸಮಾಜಶಾಸ್ತ್ರ ವಿಭಾಗದಲ್ಲಿ ಸಂಶೋಧನಾ ಕಾರ್ಯ ನಡೆಸುತ್ತಿದ್ದೇವೆ. ಅಧ್ಯಯನ ಕೇಂದ್ರಕ್ಕೆ ಬೇಕಾದ ಯಾವ ಸೌಲಭ್ಯವೂ ಸರಿಯಾಗಿ ಸಿಕ್ಕಿಲ್ಲ.
-ಡಾ.ಎನ್.ಶೈಖ್ ಮಸ್ತಾನ್, ಕೇಂದ್ರದ ನಿರ್ದೇಶಕ
ಕೆಂಪೇಗೌಡ ಅಧ್ಯಯನ ಪೀಠದ ಕಟ್ಟಡ ನಿರ್ಮಾಣ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಸಚಿವರು ಸೂಚನೆ ನೀಡಿದ್ದಾರೆ. ಮುಂದಿನ ವಾರದಲ್ಲಿ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಕಾರ್ಯಾದೇಶ ನೀಡಲಾಗುವುದು.
-ಆರ್.ಸಂಪತ್ರಾಜ್, ಮೇಯರ್
* ರಾಜು ಖಾರ್ವಿ ಕೊಡೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಂಗಡಿ!
Bengaluru; ಬಸ್ ಡ್ರೈವರ್ಗೆ ಎದೆನೋವು: ಬ್ರೇಕ್ ಹಾಕಿ ಅಪಾಯ ತಪಿಸಿದ ಎಎಸ್ಐ
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
Thug Life: ದುಬಾರಿ ಬೆಲೆಗೆ ಕಮಲ್ ಹಾಸನ್ ʼಥಗ್ ಲೈಫ್ʼ ಓಟಿಟಿ ರೈಟ್ಸ್ ಸೇಲ್
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Padmaavat To Billu.. ಟೈಟಲ್ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್ ಸಿನಿಮಾಗಳಿವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.