ಸುಸ್ಥಿರ ಅಭಿವೃದ್ಧಿಗೆ ಶಿಕ್ಷಣ ಸಂಸ್ಥೆಗಳು ಅಗತ್ಯ


Team Udayavani, Feb 24, 2020, 3:05 AM IST

sustirta-abhi

ಬೆಂಗಳೂರು: ರಾಜ್ಯ ಅಥವಾ ದೇಶದ ಸುಸ್ಥಿರ ಅಭಿ ವೃದ್ಧಿಯ ಗುರಿ ಮುಟ್ಟಲು ಶಿಕ್ಷಣ ಸಂಸ್ಥೆಗಳ ಪಾತ್ರ ಮಹ ತ್ವದಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅಭಿಪ್ರಾಯ ವ್ಯಕ್ತಪಡಿಸಿದರು.

ಸಮರ್ಥ ಭಾರತ ಸಂಘಟನೆಯು ಮಿಥಿಕ್‌ ಸೊಸೈಟಿ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಉತ್ತಮ ನಾಗು – ಉಪಕಾರಿಯಾಗು ಅಭಿಯಾನದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಭಾನುವಾರ ಮಿಥಿಕ್‌ ಸೊಸೈಟಿ ಸಭಾಂಗಣದಲ್ಲಿ ಬಹುಮಾನ ವಿತರಿಸಿ ಮಾತನಾಡಿದರು.

ಶಿಕ್ಷಣ, ಸಾಮಾಜಿಕ ಸ್ಥಾನಮಾನಕ್ಕೆ ಸೀಮಿತವಾಗದೆ ಸಮಾಜ ನಿರ್ಮಾಣಕ್ಕೆ ಪೂರಕವಾಗಿರಬೇಕು. ಹಿಂದೆ ಗುರುಕುಲ ಪದ್ಧತಿಯಿದ್ದಾಗ ಪರಿಸರ, ಆಚಾರ, ವಿಚಾರಗಳ ಮೂಲಕ ಶಿಕ್ಷಣ ಪಡೆದು ಸಾಕಷ್ಟು ಜ್ಞಾನ, ತಿಳುವಳಿಕೆಯನ್ನು ಹೊಂದುತ್ತಿದ್ದರು. ಈಗ ಶಿಕ್ಷಣ ಸಂಸ್ಥೆಗಳ ಮುಖಾಂತರ ಶಿಕ್ಷಣ ಪಡೆಯುವ ವ್ಯವಸ್ಥೆ ಬಂದಿದೆ. ಸಾಕಷ್ಟು ಸೌಲಭ್ಯವಿದ್ದರೂ ವೈಯಕ್ತಿಕ ಏಳ್ಗೆಗೆ ಶಿಕ್ಷಣ ಬಳಕೆಯಾಗುತ್ತಿದೆ. ಸಮಾಜದ ಉನ್ನತಿಗೆ ಶಿಕ್ಷಣ ಉಪಯೋಗವಾಗಬೇಕು ಎಂದರು.

ವೈಯಕ್ತಿಕ ಜ್ಞಾನ ಬೆಳೆಯಬೇಕಾದರೆ ಯುವಕರು ವಿವೇಕಾನಂದರ ಆದರ್ಶವನ್ನು ಬದುಕಿನಲ್ಲಿ ಅಳವಡಿಸಿ ಕೊಳ್ಳಬೇಕು. ವಿದೇಶದವರು ಭಾರತದ ಸಂಸ್ಕೃತಿ ಬಗ್ಗೆ ಸಂಶೋಧನೆ ನಡೆಸುತ್ತಿದ್ದಾರೆ. ಆದರೆ ಭಾರತದಲ್ಲಿ ಸಂಶೋಧನೆ ಮಾಡುವವರ ಸಂಖ್ಯೆ ಕಡಿಮೆಯಿದೆ. ಶಿಕ್ಷಣ ಪದವಿಗೋಸ್ಕರ ಎನ್ನುವಂತಾ ಗಿದೆ. ಶಿಕ್ಷಣ ಕೇವಲ ಸಾಮಾಜಿಕ ಸ್ಥಾನಮಾನಕ್ಕೆ ಸೀಮಿತವಾಗದೆ ಸಮಾಜ ನಿರ್ಮಾಣಕ್ಕೆ ಪೂರಕ ವಾಗಿರಬೇಕು ಎಂದು ಕಿವಿಮಾತು ಹೇಳಿದರು.

ಮಿಥಿಕ್‌ ಸೊಸೈಟಿ ಗೌರವ ಕಾರ್ಯದರ್ಶಿ ವಿ.ನಾಗರಾಜ್‌ ಮಾತನಾಡಿ, ವಿವೇಕಾನಂದರ ಜೀವನ, ಸಾಧನೆ ಮತ್ತು ಅವರು ಮಾಡಿರುವ ಕೆಲಸಗಳು ಸದಾಕಾಲಕ್ಕೂ ಪ್ರಸ್ತುತ. ಅಹಿಂಸಾತ್ಮಾಕ ಹೋರಾಟ ನಡೆಸಿದ ಗಾಂಧೀಜಿಸಹಿತವಾಗಿ ಅನೇಕ ಹೋರಾಟಗಾರರಿಗೆ ಮತ್ತು ಕ್ರಾಂತಿಕಾರರಿಗೆ ವಿವೇಕಾನಂದರೇ ಸ್ಫೂರ್ತಿ ಎಂದು ವಿವರಿಸಿದರು.

ಕೆಎಸ್‌ಒಯು ಕುಲಪತಿ ಡಾ.ಎಸ್‌.ವಿದ್ಯಾಶಂಕರ ಮಾತನಾಡಿ, ಭಾರತವನ್ನು ತಿಳಿದುಕೊಳ್ಳಬೇಕಾದರೆ ವಿವೇಕಾನಂದರನ್ನು ಓದಬೇಕು ಎಂದು ರವೀಂದ್ರನಾಥ್‌ ಠಾಗೋರ್‌ ಬಣ್ಣಿಸಿದ್ದರು. ಅದರಂತೆ ವಿವೇಕಾನಂದರು ದೇಶದ ಬಗ್ಗೆ ದೂರದೃಷ್ಟಿ ಹೊಂದಿದ್ದರು. ತನ್ನ ಭವಿಷ್ಯವನ್ನು ತನ್ನ ಸಾಮರ್ಥ್ಯದ ಮೂಲಕ ತಾನೇ ಕಟ್ಟಿಕೊಳ್ಳಬೇಕು ನಿರ್ದಿಷ್ಟ ಗುರಿ ತಲುಪಲು ಸಾಧ್ಯ ಎಂದು ವಿವೇಕಾನಂದರು ಹೇಳಿದ್ದರು ಎಂದು ವಿವರಿಸಿದರು.

ಮಿಥಿಕ್‌ ಸೊಸೈಟಿ ಅಧ್ಯಕ್ಷ ಪ್ರೊ.ಕೃ.ನರಹರಿ, ಸಮರ್ಥ ಭಾರತದ ಮಾರ್ಗದರ್ಶಕರಾದ ನಾ.ತಿಪ್ಪೇಸ್ವಾಮಿ, ಟ್ರಸ್ಟಿ ರಾಜೇಶ್‌ ಪದ್ಮಾರ್‌ ಇತರರಿದ್ದರು.

30 ಪ್ರಬಂಧಗಳಿಗೆ ಸಮಾಧಾನಕರ ಬಹುಮಾನ: ಪ್ರಬಂಧ ಸ್ಪರ್ಧೆಯಲ್ಲಿ ಬೆಳಗಾವಿಯ ಕಿತ್ತೂರಿನ ವಿಜಯಾ ಪಾಟೀಲ್‌ ಪ್ರಥಮ ಸ್ಥಾನ, ಬೆಂಗಳೂರಿನ ಪೂಜಾ ಡಿ.ಎಸ್‌ ದ್ವಿತೀಯ, ತುಮಕೂರಿನ ಭಾಗ್ಯಲಕ್ಷ್ಮೀ ಬಿ.ಆರ್‌. ತೃತೀಯ ಸ್ಥಾನ ಪಡೆದಿದ್ದರು. ಸುಮಾರು 700 ಕಾಲೇಜುಗಳ 2281 ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಆರು ಹಂತದಲ್ಲಿ ಮೌಲ್ಯಮಾಪನ ಮಾಡಿದ ನಂತರ ವಿಜೇತರನ್ನು ಗುರುತಿಸಲಾಗಿದೆ. 30 ಪ್ರಬಂಧಗಳಿಗೆ ಸಮಾಧಾನಕರ ಬಹುಮಾನ ನೀಡಲಾಯಿತು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.