ರಜೆ ಎಫೆಕ್ಟ್ಗೆ ಟ್ರಾಫಿಕ್ ಜಾಮ್
Team Udayavani, Apr 14, 2017, 11:44 AM IST
ಬೆಂಗಳೂರು: ಜನಜಂಗುಳಿಯಿಂದ ಸದಾ ತುಂಬಿರುವ ಮೆಜೆಸ್ಟಿಕ್ ಬಸ್ನಿಲ್ದಾಣದಲ್ಲಿ ಗುರುವಾರ ರಾತ್ರಿ ಬಹಳಷ್ಟು ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ತೀವ್ರ ಪರದಾಡಿದರು.
ಶುಕ್ರವಾರ ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ ಹಾಗೂ ಗುಡ್ ಫ್ರೈಡೆ ಸರ್ಕಾರಿ ರಜಾ, ವಾರಾಂತ್ಯದ ದಿನಗಳಾದ ಶನಿವಾರ ಹಾಗೂ ಭಾನುವಾರಗಳ ನಿರಂತರ ಮೂರು ದಿನಗಳ ರಜೆಯ ಹಿನ್ನೆಲೆಯಲ್ಲಿ ದೂರದ ಊರುಗಳಿಗೆ ತೆರಳಲು ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಮೆಜೆಸ್ಟಿಕ್ ಕಡೆ ಬಂದಿದ್ದರಿಂದ ದಟ್ಟ ಟ್ರಾಫಿಕ್ ಉಂಟಾಗಿತ್ತು.
ಮೆಜೆಸ್ಟಿಕ್ ಪ್ರದೇಶದ ಬಿಎಂಟಿಸಿ ಬಸ್ ನಿಲ್ದಾಣ, ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ , ಚಿಕ್ಕಪೇಟೆ, ಗೂಡ್ಶೆಡ್ರಸ್ತೆ ಸುತ್ತಮುತ್ತಲ ಪ್ರದೇಶಗಳಲ್ಲಿ ವಾಹನಗಳು ಕಿಲೋಮೀಟರ್ಗೂ ಹೆಚ್ಚು ಸಾಲಾಗಿ ನಿಂತಿದ್ದವು. ಪರಿಣಾಮ ಪ್ರಯಾಣಿಕರು ಗಂಟೆಗಟ್ಟಲೆ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿಕೊಂಡು ತೊಂದರೆ ಅನುಭವಿಸುವಂತಾಯಿತು.
ಮೂರು ದಿನಗಳ ರಜಾಹಿನ್ನೆಲೆಯಲ್ಲಿ ಗುರುವಾರ 9-30ರ ಸುಮಾರಿಗೆ ಉಂಟಾದ ಟ್ರಾಫಿಕ್ ಜಾಮ್ ಮಧ್ಯರಾತ್ರಿಯವರೆಗೂ ಮುಂದುವರಿಧಿದಿತ್ತು. ಅನಿರೀಕ್ಷಿತವಾಗಿ ಉಂಟಾದ ಟ್ರಾಫಿಕ್ ಜಾಮ್ ನಿಯಂತ್ರಿಸಲು ಸಂಚಾರ ಪೊಲೀಸರು ಹರಸಾಹಸಪಡಬೇಕಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.