ಕಸಾಪ ಗದ್ದುಗೆ ಮೇಲೆ ಹಲವರ ಕಣ್ಣು

ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಅಖಾಡ ಸಿದ್ಧ, ವಾಟ್ಸ್ ‌ಆ್ಯಪ್ ‌ಮೂಲಕ ಹೈಟೆಕ್‌ ಪ್ರಚಾರ ಆರಂಭ

Team Udayavani, Dec 3, 2020, 11:46 AM IST

ಕಸಾಪ ಗದ್ದುಗೆ ಮೇಲೆ ಹಲವರ ಕಣ್ಣು

ಬೆಂಗಳೂರು: ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಅಖಾಡ ಸಿದ್ಧವಾಗಿದೆ. ಕನ್ನಡಪರ ಹೋರಾಟಗಾರರು, ಪುಸ್ತಕ ಪ್ರಕಾಶಕರು ಮತ್ತು ಉಪನ್ಯಾಸಕರು ಅಧ್ಯಕ್ಷ ಸ್ಥಾನದ ಮೇಲೆಕಣ್ಣಿಟ್ಟಿದ್ದು ವಾಟ್ಸ್‌ ಆ್ಯಪ್‌ ಮೂಲಕ ಹೈಟೆಕ್‌ ಪ್ರಚಾರ ಆರಂಭಿಸಿದ್ದಾರೆ. ಅಲ್ಲದೆ ಹಿರಿಯ ಸಾಹಿತಿಗಳ ಮತ್ತು ಕನ್ನಡಪರ ಹೋರಾಟಗಾರರ ಮನೆ ಮನೆಗೆ ತೆರಳಿ ಬೆಂಬಲ ಕೋರುತ್ತಿದ್ದಾರೆ.

ಪ್ರಕಾಶಕ ಮತ್ತು ಕನ್ನಡಪರ ಹೋರಾಟಗಾರ ಕುವೆಂಪು ಪ್ರಕಾಶ್‌,ಕೈಗಾರಿಕಾಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ತಿಮ್ಮಯ್ಯ, ಸಾಹಿತಿ ಮತ್ತು ಉಪನ್ಯಾಸಕ ಡಾ. ಕಾಂತರಾಜಪುರ ಸುರೇಶ್‌,ಪ್ರಕಾಶ ಮೂರ್ತಿ, ವೇದಮೂರ್ತಿ ಸೇರಿದಂತೆಇನ್ನೂ ಕೆಲವರು ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿರಿಸಿದ್ದಾರೆ.

ಹಾಗೆಯೇ ತಮ್ಮದೆ ಆದ ಗೆಳೆಯರ ಬಳಗದೊಂದಿಗೆ ಪ್ರಚಾರಕಾರ್ಯ ಆರಂಭಿಸಿದ್ದಾರೆ. ಜತೆಗೆ ಪ್ರತಿ ನಿತ್ಯ ಮೊಬೈಲ್‌ ಮತ್ತು ವ್ಯಾಟ್ಸ್‌ ಆಪ್‌ ಮೂಲಕ ಮತದಾರ ಸಂಪರ್ಕ ಸಾಧಿಸುತ್ತಿದ್ದಾರೆ. ಅಲ್ಲದೆ ಹಿರಿಯ ಸಾಹಿತಿ ಸಿದ್ದಲಿಂಗಯ್ಯ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ನಲ್ಲೂರು ಪ್ರಸಾದ್‌, ಚಂದ್ರಶೇಖರ ಪಾಟೀಲ, ಬರಗೂರುರಾಮಚಂದ್ರಪ್ಪ, ಜರಗನಹಳ್ಳಿ ಶಿವಶಂಕರ್‌, ದೊಡ್ಡರಂಗೇಗೌಡ ಸೇರಿದಂತೆ ನಗರದಲ್ಲಿ ನೆಲೆಸಿರುವ ಹಲವು ಸಾಹಿತಿಗಳನ್ನು ಭೇಟಿ ಮಾಜಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.

ಮರಳಿ ಯತ್ನ ಮಾಡುತ್ತಿರುವ ಸ್ಪರ್ಧಾಳುಗಳು: ಪ್ರಸಕ್ತ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಹುರಿಯಾಳುಗಳಲ್ಲಿ ಕೆಲವರು ಮೂರು ಭಾರಿ ಸ್ಪರ್ಧಿಸಿ ಸೋಲುಂಡವರು ಸೇರಿದ್ದಾರೆ. ಪರಿಷತ್ತಿನ ಗದ್ದುಗೆ ಮೇಲೆ ಆಸೆಯಿಟ್ಟು ಕೊಂಡಿರುವ ಪ್ರಕಾಶ್‌ ಮೂರ್ತಿ ಅವರು ಸತತ ಮೂರು ಬಾರಿ ನಗರ ಜಿಲ್ಲಾ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು.ಹಾಗೆಯೇ ಕೈಗಾರಿಕಾ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ತಿಮ್ಮಯ್ಯ ಅವರು ಈ ಹಿಂದೆ ಒಂದು ಬಾರಿ ಪರಿಷತ್ತಿನ ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸಿ ಸೋಲುಂಡಿದ್ದರು. ಇದೀಗ ಈ ಇಬ್ಬರೂಮತ್ತೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಈ ಹಿಂದೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದು ಸೋತಿದ್ದೆ. ಈಗ ಮತ್ತೆ ಕಣಕ್ಕಿಳಿಯಲು ಸಿದ್ಧವಾಗಿದ್ದೇನೆ. ಗೆಳೆಯರ ಬಳಗದ ಜತೆಗೂಡಿ ಸಾಹಿತಿಗಳ, ಕನ್ನಡ ಪರ ಹೋರಾಟಗಾರರ ಭೇಟಿ ಮಾಡಿ ಬೆಂಬಲ ಕೇಳುತ್ತಿರುವುದಾಗಿ ತಿಮ್ಮಯ್ಯ ಹೇಳಿದ್ದಾರೆ.

ಇದನ್ನೂ ಓದಿ : ಮಂಗಳೂರು ವಿವಾದಾತ್ಮಕ ಗೋಡೆ ಬರಹ ಪ್ರಕರಣ: ಓರ್ವ ಆರೋಪಿಯ ಬಂಧನ

ಯುವ ಸಮುದಾಯದ ಆಕರ್ಷಣೆ ಮುಖ್ಯ: ಸೆಂಟ್‌ ಜೋಸೆಫ್ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕ ರಾಗಿ ಸೇವೆ ಸಲ್ಲಿಸುತ್ತಿರುವ ಕಾಂತರಾಜಪುರ ಸುರೇಶ್‌ಅವರು ಈ ಹಿಂದೆ ಡಾ.ನಲ್ಲೂರು ಪ್ರಸಾದ್‌, ಪುಂಡಲೀಕ ಹಾಲಂಬಿ ಅವಧಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕಾರ್ಯ ನಿರ್ವಹಿಸಿರುವ ಅನುಭವವಿದೆ. ಕೆಲವು ಕೃತಿಗಳನ್ನು ಕೂಡ ರಚಿಸಿದ್ದಾರೆ. ಕಸಾಪ ಯುವ ಸಮುದಾಯವನ್ನು ಮಟ್ಟಬೇಕು. ಚಂಪಾ ಅವರು ಈ ಹಿಂದೆ ಆರಂಭಿಸಿದ್ದ “ಪುಸ್ತಕ ಸಂತೆ’ಕಾರ್ಯಕ್ರಮ ಆರಂಭವಾಗಬೇಕು ಎಂಬುವುದು ತಮ್ಮ ಆಸೆಯಾಗಿದೆ ಎಂದಿದ್ದಾರೆ.

ಅಧಿಕಾರಿಗಳಕೈಗೊಂಬೆ ಆಗದಿರಲಿ :  ಕನ್ನಡ ಸಾಹಿತ್ಯ ಪರಿಷತ್‌ನ್ನು ಮಹಾನ್‌ ಸಾಹಿತಿಗಳು,ಕನ್ನಡಪರ ಹೋರಾಟಗಾರರು ಕಟ್ಟಿ ಬೆಳೆಸಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ನಿವೃತ್ತ ಸರ್ಕಾರಿ ಅಧಿಕಾರಿಗಳು ಪರಿಷತ್ತಿನ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ. ಆದರೆ ಇದು ಆಗಬಾರದು. ಕನ್ನಡ ಸಾಹಿತ್ಯ ಪರಿಷತ್ತಿಗೆ ಸಾಹಿತಿಗಳು ಮತ್ತು ಕನ್ನಡಪರ ಹೋರಾಟಗಾರರು ಬರುವಂತಾಗಬೇಕು ಎಂದು ಕುವೆಂಪು ಪ್ರಕಾಶ್‌ ಹೇಳುತ್ತಾರೆ. ಗೋಕಾಕ್‌ ಚಳವಳಿಯಿಂದಲೂ ಕನ್ನಡ ಕಾಯಕಗಳಲ್ಲಿ ಸಕ್ರಿಯನಾಗಿದ್ದೇನೆ. ಕುವೆಂಪು ಕುರಿತ ಹಲವು ಕಾರ್ಯಕ್ರಗಳನ್ನು ಹಮ್ಮಿಕೊಂಡಿದ್ದೇನೆ. ಪರಿಷತ್ತಿನ ಕಾಯಕ ಮಾಡಲು ಮತ್ತೆ ಸಿದ್ಧನಾಗಿದೇನೆ ಎಂದಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತು ಸಮ್ಮೇಳನಗಳಿಗೆ ಮತ್ತು ಪ್ರಶಸ್ತಿ ಹಂಚಿಕೆಗೆ ಮಾತ್ರ ಸೀಮಿತವಾಗಬಾರದು. ಪ್ರಶಸ್ತಿ ಸ್ಥಾಪಿಸುವುದರ ಜತೆಗೆ ಅರ್ಹರನ್ನು ಗುರುತಿಸುವಕೆಲಸ ಆಗಬೇಕಾಗಿದೆ. ಕಾಂತರಾಜಪುರ ಸುರೇಶ್‌, ಉಪನ್ಯಾಸಕ

 

ವಿಶೇಷ ವರದಿ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.