![Santhe-last](https://www.udayavani.com/wp-content/uploads/2025/02/Santhe-last-415x249.jpg)
![Santhe-last](https://www.udayavani.com/wp-content/uploads/2025/02/Santhe-last-415x249.jpg)
Team Udayavani, Jan 29, 2025, 10:59 AM IST
ನವದೆಹಲಿ: ಬೆಂಗಳೂರು ವಕೀಲರ ಸಂಘ ಚುನಾವಣೆಗೆ ಜ.24ರಂದು ನೀಡಿದ್ದ ಆದೇಶದಲ್ಲಿ ಸುಪ್ರೀಂಕೋರ್ಟ್ ಬದಲಾವಣೆ ಮಾಡಿದ್ದು, ವಕೀಲರ ಸಂಘದಲ್ಲಿ ಉಪಾಧ್ಯಕ್ಷ ಹುದ್ದೆ ಸೃಷ್ಟಿಸಬೇಕು ಎಂದು ಮಂಗಳವಾರ ಆದೇಶ ನೀಡಿದೆ. ಹೊಸ ಹುದ್ದೆ ಸೃಷ್ಟಿಸ ಬೇಕು ಎಂದು ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿ ನ್ಯಾ.ಸೂರ್ಯಕಾಂತ್ ಮತ್ತು ನ್ಯಾ.ಎನ್.ಕೋಟೀಶ್ವರ್ ಸಿಂಗ್ ನೇತೃತ್ವದ ಪೀಠ ಈ ಆದೇಶ ನೀಡಿದೆ.
ಈ ಹಿನ್ನೆಲೆಯಲ್ಲಿ ಶೀಘ್ರವೇ ವಕೀಲರ ಸಂಘದ ಚುನಾವಣೆ ನಡೆಯಲು ಅನುಕೂಲ ವಾಗಲಿದೆ. ಜ.24ರಂದು ಸುಪ್ರೀಂಕೋರ್ಟ್ ನೀಡಿದ್ದ ತೀರ್ಪಿನಲ್ಲಿ ಬೆಂಗಳೂರು ವಕೀಲರ ಸಂಘದ ಚುನಾವಣೆಗೆ ಸಂಬಂಧಿಸಿದಂತೆ ಮಹಿಳಾ ವಕೀಲರಿಗಾಗಿ ಖಜಾಂಚಿ ಹುದ್ದೆ ಸೃಷ್ಟಿ ಮಾಡಲು ಸೂಚಿಸಿತ್ತು. ಈ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದ ಪುರುಷ ಅಭ್ಯರ್ಥಿಗಳು ಬೇರೆ ಹುದ್ದೆಗೆ ನಾಮಪತ್ರ ಸಲ್ಲಿಸಿ ಸ್ಪರ್ಧಿಸುವಂತೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ನೀಡಿದ ಆದೇಶ ಮಹತ್ವ ಪಡೆದಿದೆ.
You seem to have an Ad Blocker on.
To continue reading, please turn it off or whitelist Udayavani.