ಕ್ವಾರಂಟೈನ್‌ ವ್ಯವಸ್ಥೆಗೆ ಒತ್ತು


Team Udayavani, Mar 23, 2020, 3:06 AM IST

gruha-bhanada

ಬೆಂಗಳೂರು: ವಿದೇಶಗಳಿಂದ ರಾಜ್ಯಕ್ಕೆ ಆಗಮಿಸಿರುವ ನಾಗರೀಕರು ಗೃಹ ಬಂಧನದಲ್ಲಿರಲು ನಿರಾಕರಿಸಿದರೆ ಅಂತಹ ವ್ಯಕ್ತಿಗಳನ್ನು ಸರ್ಕಾರದ ಕ್ವಾರಂಟೈನ್‌ ನಲ್ಲಿಟ್ಟು ಆರೋಗ್ಯದ ಮೇಲೆ ನಿಗಾವಹಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ಹೇಳಿದರು.

ಭಾನುವಾರ ಸಂಜೆ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಕರೆಕೊಟ್ಟಿದ್ದ ಜನತಾ ಕರ್ಫ್ಯೂಗೆ ಉತ್ತಮವಾಗಿ ಸ್ಪಂದಿಸಿದ್ದಾರೆ. ಅದನ್ನು ಹೀಗೆ ಸ್ವಯಂಪ್ರೇರಿತವಾಗಿ ಮುಂದುವರಿಸಿ. ಎಲ್ಲೆಂದರಲ್ಲಿ ಗುಂಪು ಸೇರುವುದು ಬೇಡ.

ವಿದೇಶದಿಂದ ಬಂದವರು ಮನೆಯಲ್ಲಿಯೇ ಇರಬೇಕು. ನಿರ್ಲಕ್ಷಿಸಿ ಹೊರಗಡೆ ಓಡಾಡುವುದು ಸರಿಯಲ್ಲ. ಒಂದು ವೇಳೆ ಮನೆಯಿಂದ ಹೊರಗೆ ಬಂದರೆ ಸರ್ಕಾರದ ಕ್ವಾರಂಟೈನ್‌ನಲ್ಲಿಟ್ಟು ಆರೋಗ್ಯದ ಮೇಲೆ ನಿಗಾವಹಿಸಲಾಗುವುದು ಎಂದು ಹೇಳಿದರು.

20 ಸಾವಿರ ಜನರ ಗುರುತು!: ಮಾ.8ರಿಂದ ಮಾ.19ರವರೆಗೆ ವಿದೇಶದಿಂದ ರಾಜ್ಯಕ್ಕೆ 43 ಸಾವಿರ ಮಂದಿ ಆಗಮಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಅವರಿಗೆ ನೀಡುವ ಅರ್ಜಿಯಲ್ಲಿ ಸ್ವವಿವರ ಹಾಗೂ ವಿಳಾಸವನ್ನು ಭರ್ತಿ ಮಾಡಿದ್ದಾರೆ. ಈ ಮಾಹಿತಿಯನ್ನು ವಿಮಾನ ನಿಲ್ದಾಣದ ಅಧಿಕಾರಿಗಳು ಆರೊಗ್ಯ ಇಲಾಖೆಗೆ ಕೊಟ್ಟಿದ್ದು, ಅದರಲ್ಲಿ 20 ಸಾವಿರ ಮಂದಿಯ ವಿಳಾಸ ಗುರುತಿಸಲಾಗಿದೆ.

ಇನ್ನುಳಿದವರ ವಿಳಾಸ ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ. ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಸಿಬ್ಬಂದಿ ಜತೆಗೂಡಿ 500 ತಂಡಗಳನ್ನು ರಚಿಸಲಾಗಿದೆ. ವಿದೇಶದಿಂದ ಬಂದವರ ಮನೆಗೆ ಭೇಟಿ ಕೊಟ್ಟು ಕೈಗೆ ಮೊಹರು ಹಾಕಲಿದ್ದಾರೆ. ಅಲ್ಲದೆ, ಸ್ಥಳೀಯ ಠಾಣೆಯ ಇಬ್ಬರು ಸಿಬ್ಬಂದಿ ಗಸ್ತು ತಿರುಗಲಿದ್ದಾರೆ ಎಂದು ಮಾಹಿತಿ ನೀಡಿದರು.

ಗುಂಪು ಸೇರಬೇಡಿ: ಕೊರೊನಾ ವೈರಸ್‌ ಸೋಂಕು ಹರಡುತ್ತಿರುವ ಪರಿಸ್ಥಿತಿಯ ಬಗ್ಗೆ ಉದಾಸೀನತೆ ತೋರುವುದು ಬೇಡ. ಕೊರೊನಾ ವೈರಸ್‌ ವಿದೇಶ ಗಳಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಹೀಗಾಗಿ ಅದರ ವಿರುದ್ಧ ಯುವಕರು ಎಚ್ಚೆತ್ತುಕೊಳ್ಳಬೇಕು. ಇಬ್ಬರಿಗಿಂತ ಜಾಸ್ತಿ ಜನ ಸೇರುವುದು ಬೇಡ. ಅದರಿಂದ ಕೊರೊನಾ ವೈರಸ್‌ ಸೋಂಕು ಹರಡುವುದನ್ನು ನಿಯಂತ್ರಿಸಬಹುದು ಎಂದು ಸಲಹೆ ನೀಡಿದರು.

ಮೆಜೆಸ್ಟಿಕ್‌ನಲ್ಲಿದ್ದ ಶಂಕಿತ ವ್ಯಕ್ತಿ: ಜನತಾ ಕರ್ಫ್ಯೂನಿಂದಾಗಿ ಹೋಟೆಲ್‌, ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್‌ ಮಾಡಿದ್ದರಿಂದ ಊಟದ ಸಮಸ್ಯೆಯಾಗಿತ್ತು. ಮೆಜೆಸ್ಟಿಕ್‌ ಸಮೀಪ ಲಾಡ್ಜ್ನಲ್ಲಿ ಉಳಿದುಕೊಂಡಿದ್ದ ವ್ಯಕ್ತಿಯೊಬ್ಬರು, ಭಾನುವಾರ ಬೆಳಗ್ಗೆ 9.30ರಲ್ಲಿ ಊಟಕ್ಕಾಗಿ ಹೊರಬಂದಿದ್ದರು. ಈ ವೇಳೆ ಜನರು ಗಾಬರಿಗೊಂಡಿದ್ದಾರೆ. ಸಿಬ್ಬಂದಿ ಆತನನ್ನು ವಶಕ್ಕೆ ಪಡೆದು ಕೆ.ಸಿ. ಜನರಲ್‌ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿ, ಕ್ವಾರಂಟೈನ್‌ಗೆ ಕಳುಹಿಸಿದ್ದಾರೆ ಎಂದು ಹೇಳಿದರು.

ಪ್ರತಿಯೊಬ್ಬರು ಕೊರೊನಾ ವೈರಸ್‌ ನಿಯಂತ್ರಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳಲೇಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ. ಅದೇ ರೀತಿ ಎಲ್ಲರೂ ಪಾಲಿಸಬೇಕು.
-ಭಾಸ್ಕರ್‌ ರಾವ್‌, ನಗರ ಪೊಲೀಸ್‌ ಆಯುಕ್ತ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.