ಬಿತ್ತನೆ ಬೀಜ ಖರೀದಿಸುವ ಖಾತರಿ ಕೊಡಿ: ಸಿಎಂ


Team Udayavani, Sep 26, 2017, 11:30 AM IST

siddu.jpg

ಬೆಂಗಳೂರು: ರೈತರು ಎಷ್ಟೇ ಪ್ರಮಾಣದ ಬಿತ್ತನೆ ಬೀಜ ಉತ್ಪಾದಿಸಿದರೂ ಅದನ್ನು ಯೋಗ್ಯ ಬೆಲೆಗೆ ಖರೀದಿ ಮಾಡುವ ಭರವಸೆಯನ್ನು ಬೀಜ ನಿಗಮ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

ರಾಜ್ಯ ಬೀಜ ನಿಗಮ ಹಾಗೂ ಅಂತಾರಾಷ್ಟ್ರೀಯ ಪುಷ್ಪ ಹರಾಜು ನಿಗಮ, ಹೆಬ್ಟಾಳದಲ್ಲಿ ಸೋಮವಾರ ನೂತನವಾಗಿ ನಿರ್ಮಿಸಿರುವ ಬೀಜ ಭವನ, ಪುಷ್ಪ ಸ್ಟುಡಿಯೋ ಮತ್ತು ತರಬೇತಿ ಕೇಂದ್ರ ಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿ ಅವರು, ರೈತರು ಎಷ್ಟು ಪ್ರಮಾಣದ ಬಿತ್ತನೆ ಬೀಜ ಉತ್ಪಾದಿಸಿದರೆ, ಅಷ್ಟನ್ನು ತಾವು ಖರೀದಿಸುವುದಾಗಿ ಬೀಜ ನಿಗಮ ಭರವಸೆ ನೀಡಿ, ಖರೀದಿಸಿದರೆ, ರೈತರು ಉತ್ತಮ ಜೀವನ ನಡೆಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಹಿಂದೆ ರೈತರು ತಮಗೆ ಬೇಕಾದ ಗುಣಮಟ್ಟದ ಬಿತ್ತನೆ ಬೀಜಗಳನ್ನು ತಾವೇ ಉತ್ಪಾದನೆ ಮಾಡಿಟ್ಟುಕೊಳ್ಳುತ್ತಿದ್ದರು. ಈಗ ಖಾಸಗಿ ಸಂಸ್ಥೆಗಳು ಮತ್ತು ಸರ್ಕಾರ ಪೂರೈಸುವ ಬಿತ್ತನೆ ಬೀಜಗಳನ್ನು ಅವಲಂಬಿಸುವ ಸ್ಥಿತಿ ಇದೆ. ಖಾಸಗಿ ಸಂಸ್ಥೆಗಳ ಬಿತ್ತನೆ ಬೀಜ ಕಳಪೆ ಮತ್ತು ದುಬಾರಿಯೂ ಆಗಿರುತ್ತದೆ. ಇದಕ್ಕೆ ಕಡಿವಾಣ ಹಾಕಬೇಕು. ಅದಕ್ಕಾಗಿ ರೈತರು ತಾವಾಗಿಯೇ ಬಿತ್ತನೆ ಬೀಜ ಉತ್ಪಾದನೆ ಮಾಡಿಕೊಳ್ಳಲು ಕೃಷಿ ಇಲಾಖೆ ಮತ್ತು ಬೀಜ ನಿಗಮ ಪ್ರೋತ್ಸಾಹ ನೀಡಬೇಕು ಎಂದರು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿತ್ತನೆ ಬೀಜಕ್ಕಾಗಿ ಹೋರಾಟ ನಡೆಸಿದ ರೈತರ ಮೇಲೆ ಗೋಲಿಬಾರ್‌ ನಡೆದಿತ್ತು. ಕೃಷಿ ಸಚಿವ ಕೃಷ್ಣ ಭೈರೇಗೌಡರು, ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೃಷಿ ಪರಿಕರಗಳನ್ನು ಪೂರೈಸಲು ಕ್ರಮ ಕೈಗೊಂಡಿದ್ದರಿಂದ  ನಾಲ್ಕೂವರೆ ವರ್ಷದಲ್ಲಿ ರೈತರಿಗೆ ಯಾವುದೇ ಸಮಸ್ಯೆಯಾಗಿಲ್ಲ. ಹಾಗಾಗಿ ಕೃಷ್ಣಭೈರೇಗೌಡ ಮತ್ತು ಅವರ ಅಧಿಕಾರಿ ವರ್ಗದವರಿಗೆ ಅಭಿನಂದನೆಗಳು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಚಿವರಾದ ಕೆ.ಜೆ.ಜಾರ್ಜ್‌, ಕೃಷ್ಣ ಬೈರೇಗೌಡ, ವಿಧಾನ ಪರಿಷತ್‌ ಸದಸ್ಯ ಬೈರತಿ ಸುರೇಶ್‌, ಶಾಸಕ ರಾಜಶೇಖರ ಪಾಟೀಲ ಹುಮ್ನಾಬಾದ್‌, ಕೃಷಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್‌ ಮತ್ತಿತರರು ಉಪಸ್ಥಿತರಿದ್ದರು.

“ಪ್ರಯೋಗಾಲಯದಿಂದ ಜಮೀನಿಗೆ’ ಎಂಬ ಹಳೆಯ ಘೋಷಣೆ ಬದಲಿಗೆ, “ಜಮೀನಿಂದ ಪ್ರಯೋಗಾಲಯದತ್ತ’ ಎಂಬ ಪರಿಕಲ್ಪನೆ ಜಾರಿಯಾಗಬೇಕು. ಲಾಭದಾಯಕ ಬೆಳೆ ಬೆಳೆಯಲು ಕೃಷಿ ವಿವಿ, ಕೃಷಿ ಇಲಾಖೆ ರೈತರಿಗೆ ಸಲಹೆ ನೀಡಬೇಕು. ಆಗ ರೈತರು ಕೂಡ ಆರ್ಥಿಕಾಭಿವೃದ್ಧಿ ಹೊಂದಲು ಸಾಧ್ಯ.
-ಸಿದ್ದರಾಮಯ್ಯ, ಮುಖ್ಯಮಂತ್ರಿ

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Vaishnodevi-Temple

Famous Goddess Temple: ಗುಹಾಲಯ ಶ್ರೀಮಾತಾ ವೈಷ್ಣೋದೇವಿ ದೇಗುಲ, ಜಮ್ಮು-ಕಾಶ್ಮೀರ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.