ಆಯುಕ್ತರ ಕಚೇರಿಯಲ್ಲಿ ಬೊಂಬೆಗಳ ಬೆಡಗು


Team Udayavani, Oct 1, 2019, 3:09 AM IST

ayuktara

ಬೆಂಗಳೂರು: ಪೊಲೀಸರ ಬೂಟು, ಲಾಠಿ ಸದ್ದು ಕೇಳಿ ಬರುತ್ತಿದ್ದ ಸ್ಥಳದಲ್ಲಿಗ ದಸರಾ ಬೊಂಬೆಗಳ ಸಂಭ್ರಮ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ದಸರಾ ಆಚರಣೆ ಗರಿಗೆದರಿದ್ದರೆ, ಇತ್ತ ನಗರದ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿಯೂ ದಸರಾ ಕಳೆಗಟ್ಟಿದೆ. ನಗರ ಪೊಲೀಸ್‌ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ನಗರ ಆಯುಕ್ತರ ಕಚೇರಿ ಆವರಣದಲ್ಲಿ ದಸರಾ ಆಚರಣೆಗೆ ಚಾಲನೆ ನೀಡಲಾಗಿದೆ.

ಇಡೀ ಕಚೇರಿ ಆವರಣ ಮಾವಿನ ತೋರಣ, ಬಾಳೆ ಗಿಡದ ಸ್ವಾಗತ ಕಮಾನು, ವಿದ್ಯುತ್‌ ದೀಪಗಳಿಂದ ಅಲಂಕೃತಗೊಂಡು ಮದುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ಪ್ರವೇಶ ದ್ವಾರದ ಎಡಭಾಗದಲ್ಲಿ ನಿರ್ಮಿಸಿರುವ ಸುಂದರ ವೇದಿಕೆಯಲ್ಲಿ ನಾನಾ ರೀತಿಯ ಬೊಂಬೆಗಳನ್ನು ಪ್ರದರ್ಶನಕ್ಕಿಡಲಾಗಿದೆ. ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ಅವರ ವೈಯಕ್ತಿಕ ಆಸಕ್ತಿಯಿಂದ ಕಚೇರಿಯಲ್ಲಿ ದಸರಾ ವೈಭವ ಮನೆಮಾಡಿದೆ. ನಟ, ಕಲಾವಿದ ಅರುಣ್‌ ಸಾಗರ್‌ ನೇತೃತ್ವದ ತಂಡ, ಬಣ್ಣ-ಬಣ್ಣದ ವಿವಿಧ ಪುಷ್ಪಗಳಿಂದ ಅಲಂಕರಿಸಿ, ಜಗಮಗಿಸುವ ದೀಪಾಲಂಕರದೊಂದಿಗೆ ವೇದಿಕೆ ನಿರ್ಮಿಸಿದೆ.

ಅಲ್ಲದೆ, ಇಡೀ ಮೈಸೂರು ದಸರಾ ಇತಿಹಾಸ ಬಿಂಬಿಸುವ, ಜಂಬೂ ಸವಾರಿ, ಆನೆಗಳು, ಕುದುರೆಗಳು, ಅರಮನೆ, ಖಾಸಗಿ ದರ್ಬಾರ್‌, ದಶಾವತಾರದ ಬೊಂಬೆಗಳು, ಹಳ್ಳಿ ಸೊಗಡು, ಮಹಾಭಾರತ, ಮಸೀದಿ, ಮದರ್‌ ತೆರೆಸಾ, ವಿಶ್ವದ ಹಾಸ್ಯಚಕ್ರವರ್ತಿ ಚಾರ್ಲಿ ಚಾಪ್ಲಿನ್‌, ದುರ್ಗೆ, ಸರಸ್ವತಿ, ಮಹಿಷಾಸುರ, ಗೌತಮಬುದ್ಧ, ಡಾ.ಎ.ಪಿ.ಜೆ.ಅಬ್ದುಲ್‌ ಕಲಾಂ, ಸ್ವಾಮಿ ವಿವೇಕಾನಂದ ಸೇರಿ ಸುಮಾರು 60ಕ್ಕೂ ಹೆಚ್ಚು ಮಾದರಿಯ ನೂರಾರು ಬೊಂಬೆಗಳನ್ನು ಪ್ರದರ್ಶನದಲ್ಲಿ ಇರಿಸಲಾಗಿದೆ. ಕೆಲ ಪೊಲೀಸ್‌ ಸಿಬ್ಬಂದಿ ಕೂಡ ಸ್ವಇಚ್ಛೆಯಿಂದ ಬೊಂಬೆಗಳನ್ನು ತಂದು ಪ್ರದರ್ಶನದಲ್ಲಿ ಇರಿಸಿದ್ದಾರೆ.

ಹಬ್ಬದ ದಿನಗಳು ಸೇರಿ ದಿನದ 24 ಗಂಟೆಗಳ ಕಾಲ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬ ಪೊಲೀಸ್‌ ಸಿಬ್ಬಂದಿಯಲ್ಲಿ ಒಬ್ಬ ಕಲಾವಿದ, ಹಾಡುಗಾರ, ನಿರ್ದೇಶಕ, ಕವಿ, ಸಾಹಿತಿ ಇದ್ದಾನೆ. ಅಂತಹ ಮನಸ್ಸುಗಳಿಗೆ ಉತ್ತೇಜನ ನೀಡಲು ಕಚೇರಿ ಆವರಣದಲ್ಲಿ ದಸರಾ ಆಚರಣೆ ಮಾಡಲಾಗಿದೆ ಎನ್ನುತ್ತಾರೆ ಪ್ರದರ್ಶನದ ಉಸ್ತುವಾರಿ ಹೊತ್ತ ಅಧಿಕಾರಿಗಳು.

ಸಾರ್ವಜನಿಕರಿಗೆ ಅಚ್ಚರಿ: ತಮ್ಮ ಸಮಸ್ಯೆಗಳನ್ನು ಹೊತ್ತು ಸೋಮವಾರ ಕಚೇರಿ ಪ್ರವೇಶಿಸುತ್ತಿದ್ದ ಸಾರ್ವಜನಿಕರು ಅಚ್ಚರಿಯಿಂದಲೇ ದಸರಾ ಬೊಂಬೆಗಳನ್ನು ವೀಕ್ಷಿಸಿದರು. ದಸರಾ ಸಂಭ್ರಮ ಕಣ್ತಂಬಿಕೊಳ್ಳಲು ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಲಾಯಿತು. ಜತೆಗೆ ಕರ್ತವ್ಯ ಮುಗಿಸಿಕೊಂಡು ಮನೆಗೆ ತೆರಳಿದ್ದ ಪೊಲೀಸ್‌ ಸಿಬ್ಬಂದಿ ಕೂಡ ತಮ್ಮ ಕುಟುಂಬ ಸಮೇತ ಬಂದು ಬೊಂಬೆ ಪ್ರದರ್ಶನ ವೀಕ್ಷಿಸಿದರು. ಕೆಲ ಸಾರ್ವಜನಿಕರು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದು ಕಂಡುಬಂತು.

ಈ ಕುರಿತು ಪ್ರತಿಕ್ರಿಯೆ ನೀಡಿದ ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌, ಸದಾ ಕೆಲಸದ ಒತ್ತಡದಲ್ಲಿರುವ ಪೊಲೀಸರು ಈ ನಾಡಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ಇದು ದಸರಾ ಹಬ್ಬ ಮಾತ್ರವಲ್ಲ, ಸಮವಸ್ತ್ರಧಾರಿ ಯೋಧರ ಹಬ್ಬ. ಹೀಗಾಗಿ ತಮ್ಮ ಸ್ನೇಹಿತರ ಸಹಕಾರದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಇದು ನಮ್ಮ ಇತರೆ ಪೊಲೀಸ್‌ ಸಿಬ್ಬಂದಿಗೆ ಸ್ಫೂರ್ತಿ ನೀಡಿದೆ. 9ದಿನವೂ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ನೀಡಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.