ಬೇಡಿಕೆಯಿದ್ದರೂ ರಫ್ತಾಗದ ದಾಳಿಂಬೆ!


Team Udayavani, Nov 26, 2017, 12:35 PM IST

dalimbe.jpg

ಬೆಂಗಳೂರು: ಕೆಲವೇ ತಿಂಗಳ ಅಂತರದಲ್ಲಿ ರಾಜ್ಯದ ದಾಳಿಂಬೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಬಂದಿದ್ದು, ಇಲ್ಲಿನ ದಾಳಿಂಬೆ ಸುಮಾರು 36 ಯೂರೋಪ್‌ ರಾಷ್ಟ್ರಗಳಲ್ಲಿ ಫೇಮಸ್‌ ಆಗಿದೆ. ಆದರೆ, ಇದರ ಲಾಭ ಮಾತ್ರ ಬೆಳೆಗಾರರಿಗೆ ಸಿಗುತ್ತಿಲ್ಲ!

ದಾಳಿಂಬೆ ಕೆಲವು ಔಷಧೀಯ ಗುಣಗಳನ್ನು ಹೊಂದಿದೆ. ಕ್ಯಾನ್ಸರ್‌ ಬೆಳೆಯದಂತೆ ಸ್ಥಿರತೆ ಕಾಪಾಡುವಲ್ಲಿ ಮತ್ತು ನೈಸರ್ಗಿಕವಾದ ಸಿಹಿ ಅಂಶ ಇರುವುದರಿಂದ ಮಧುಮೇಹಿಗಳು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುತ್ತಾರೆ. ಹಾಗಾಗಿ, ದಾಳಿಂಬೆಗೆ ವಿದೇಶಿ ಬೇಡಿಕೆಯಿದೆ. ಇದರಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರತಿ ದಿನ ಒಂದು ಟನ್‌ ದಾಳಿಂಬೆ ರಫ್ತು ಆಗುತ್ತಿದೆ ಎಂದು ಮೆಂಜೀಸ್‌ ಏವಿಯೇಷನ್‌ ಬೊಬ್ಬ (ಬೆಂಗಳೂರು) ಸಿಇಒ ವೆಂಕಟ ರೆಡ್ಡಿ ತಿಳಿಸಿದರು.

“ಕಳೆದ ಒಂದು ವರ್ಷದೊಳಗೆ ದಾಳಿಂಬೆ ರಫ್ತು ಟ್ರೆಂಡ್‌ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ರಫ್ತುದಾರರು ಮತ್ತು ಆಮದುದರರ ಜತೆ ಚರ್ಚೆ ನಡೆಸಿದಾಗ, ಆರೋಗ್ಯದ ದೃಷ್ಟಿಯಿಂದ ಈ ಬೇಡಿಕೆ ಕಂಡುಬರುತ್ತಿದೆ ಎಂಬುದು ಗೊತ್ತಾಯಿತು. ಆದರೆ, ಬೇಡಿಕೆಗೆ ತಕ್ಕಂತೆ ಪೂರೈಕೆ ಆಗುತ್ತಿಲ್ಲ,’ ಎಂದು ವೆಂಕಟ ರೆಡ್ಡಿ ಹೇಳಿದರು.

ಉತ್ಪಾದನೆ 2 ಲಕ್ಷ ಟನ್‌; ರಫ್ತು 300 ಟನ್‌: ರಾಜ್ಯದಲ್ಲಿ ಸುಮಾರು 19 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ದಾಳಿಂಬೆ ಬೆಳೆಯುತ್ತಿದ್ದು, 2 ಲಕ್ಷ ಟನ್‌ ಉತ್ಪಾದನೆ ಆಗುತ್ತಿದೆ. ಈ ಪೈಕಿ 200ರಿಂದ 300 ಟನ್‌ ಮಾತ್ರ ರಫ್ತು ಆಗುತ್ತಿದೆ. ಆದರೆ, ತಾವು ಬೆಳೆದ ದಾಳಿಂಬೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಇದ್ದು, 36 ರಾಷ್ಟ್ರಗಳಿಗೆ ರಫ್ತಾಗುತ್ತಿದೆ ಎಂಬುದು ಬಹುತೇಕ ಬೆಳೆಗಾರರಿಗೆ ಗೊತ್ತಿಲ್ಲ. ಹಾಗೇ ನೇರ ಮಾರುಕಟ್ಟೆ ಬಗ್ಗೆ ಅರಿವೂ ಇಲ್ಲ. ಪರಿಣಾಮ ರೈತರು ಅತ್ಯಂತ ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದ್ದಾರೆ.

ಐದುಪಟ್ಟು ಹೆಚ್ಚು ಬೆಲೆಗೆ ಮಾರಾಟ: ವಿಪರ್ಯಾಸವೆಂದರೆ ರೈತರಿಂದ ಖರೀದಿಸಿದ ಬೆಲೆಗಿಂತ ನಾಲ್ಕೈದು ಪಟ್ಟು ಬೆಲೆಗೆ ವಿದೇಶಗಳಲ್ಲಿ ದಾಳಿಂಬೆ ಮಾರಾಟವಾಗುತ್ತದೆ. ಪ್ರಸ್ತುತ ಸಗಟು ಮಾರುಕಟ್ಟೆಯಲ್ಲಿ ದಾಳಿಂಬೆ ಕೆಜಿಗೆ 60ರಿಂದ 80 ರೂ. ಇದೆ. ಆದರೆ, ವಿದೇಶಗಳಲ್ಲಿ 6ರಿಂದ 7 ಡಾಲರ್‌ಗೆ ಮಾರಾಟವಾಗುತ್ತದೆ. ರಫ್ತು ಮತ್ತಿತರ ಎಲ್ಲ ವೆಚ್ಚ ಕಡಿತಗೊಳಿಸಿದರೂ ರೈತರಿಗೆ ಕನಿಷ್ಠ 150 ರೂ. ಸಿಗಬೇಕು ಎಂದು ತೋಟಗಾರಿಕೆ ಇಲಾಖೆ ಹೆಚ್ಚುವರಿ ನಿರ್ದೇಶಕ ಕೆ.ಎಂ. ಪರಶಿವಮೂರ್ತಿ “ಉದಯವಾಣಿ’ಗೆ ತಿಳಿಸಿದ್ದಾರೆ.

ರೈತರ ಲಾಭಕ್ಕಾಗಿ ಸಮಗ್ರ ಯೋಜನೆ: ಮಾರುಕಟ್ಟೆ ಮಾತ್ರವಲ್ಲದೆ ವಿವಿಧ ಹಂತಗಳಲ್ಲಿ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆ ಜಾರಿಗೊಳಿಸಲಾಗಿದೆ. ಇದರಡಿ 92 ರೈತರ ಗುಂಪುಗಳನ್ನು ರಚಿಸಿದ್ದು, 92 ಸಾವಿರ ರೈತರು ಸದಸ್ಯರಾಗಿದ್ದಾರೆ.

ಈ ಪೈಕಿ 4ರಿಂದ 5 ಸಾವಿರ ದಾಳಿಂಬೆ ಬೆಳೆಗಾರರೂ ಇದ್ದಾರೆ. ಇಲ್ಲಿ ಬಿತ್ತನೆ ಹಂತದಿಂದ ಮಾರುಕಟ್ಟೆ ಹಂತದವರೆಗೂ ಸರ್ಕಾರದ ಪಾಲ್ಗೊಳ್ಳುವಿಕೆ ಇರುತ್ತದೆ. ಜತೆಗೆ ಬಿಗ್‌ ಬ್ಯಾಸ್ಕೆಟ್‌, ರಿಲಾಯನ್ಸ್‌, ಮೋರ್‌ ಸೇರಿದಂತೆ ದೊಡ್ಡ ಕಂಪನಿಗಳೊಂದಿಗೆ ನೇರ ಸಂಪರ್ಕ ಹೊಂದಲಾಗಿದೆ. ಬೆಳೆದ ಉತ್ಪನ್ನಗಳನ್ನು ನೇರವಾಗಿ ಈ ಕಂಪನಿಗಳಿಗೆ ಪೂರೈಸಲಾಗುವುದು. ಇದರಿಂದ ರೈತರಿಗೆ ಕನಿಷ್ಠ ದುಪ್ಪಟ್ಟು ಬೆಲೆ ಸಿಗಲಿದೆ ಎಂದು ಅವರು ತಿಳಿಸಿದರು.

ಟಾಪ್ ನ್ಯೂಸ್

ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Yadagiri: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Bigg Boss: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಗೆ ಹೃದಯಾಘಾತ; ಮುಂದೆ ಆದದ್ದೇನು?

Bigg Boss: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಗೆ ಹೃದಯಾಘಾತ; ಮುಂದೆ ಆದದ್ದೇನು?

Udupi: ಜಿಲ್ಲಾ ಪತ್ರಕರ್ತರ ರಜತ ಕ್ರೀಡಾ ಸಂಭ್ರಮ: ನಿರ್ಭೀತ ಪತ್ರಿಕೋದ್ಯಮ ಇಂದಿನ ಅಗತ್ಯ: ಡಿಸಿ

Udupi: ಜಿಲ್ಲಾ ಪತ್ರಕರ್ತರ ರಜತ ಕ್ರೀಡಾ ಸಂಭ್ರಮ: ನಿರ್ಭೀತ ಪತ್ರಿಕೋದ್ಯಮ ಇಂದಿನ ಅಗತ್ಯ: DC

ಹೆಜ್ಬುಲ್ಲಾ ಮುಖ್ಯಸ್ಥ ಅಡಗಿದ್ದ ಬಂಕರ್‌ನೊಳಗೆ 500 ಮಿ. ಡಾಲರ್‌ ನಗದು, ಅಪಾರ ಚಿನ್ನ ಪತ್ತೆ! ಇಸ್ರೇಲ್

Hezbollah ಮುಖ್ಯಸ್ಥ ಅಡಗಿದ್ದ ಬಂಕರ್‌ನೊಳಗೆ 500 ಮಿ. ಡಾಲರ್‌ ನಗದು,ಚಿನ್ನ ಪತ್ತೆ! ಇಸ್ರೇಲ್

BBK11: “ಮಾನಸಗೆ ಪ್ರಬುದ್ಧತೆ ಇಲ್ಲ..” ನಾಮಿನೇಷನ್‌ ಕಾರಣ ಕೇಳಿ ಗರಂ ಆದ ತುಕಾಲಿ ಪತ್ನಿ

BBK11: “ಮಾನಸಗೆ ಪ್ರಬುದ್ಧತೆ ಇಲ್ಲ..” ನಾಮಿನೇಷನ್‌ ಕಾರಣ ಕೇಳಿ ಗರಂ ಆದ ತುಕಾಲಿ ಪತ್ನಿ

Video: ನಾಯಿ ಓಡಿಸಲು ಹೋಗಿ 3ನೇ ಮಹಡಿಯಿಂದ ಬಿದ್ದು ಮೃತಪಟ್ಟ ಯುವಕ…

Video: ನಾಯಿ ಓಡಿಸಲು ಹೋಗಿ 3ನೇ ಮಹಡಿಯಿಂದ ಬಿದ್ದು ಮೃತಪಟ್ಟ ಯುವಕ…

Madhya Pradesh: ಅದೃಷ್ಟ ಚೆನ್ನಾಗಿತ್ತು…ಚಿರತೆಗೆ ತಮಾಷೆ-ಮೂವರ ಮೇಲೆ ದಾಳಿ!

Madhya Pradesh: ಅದೃಷ್ಟ ಚೆನ್ನಾಗಿತ್ತು…ಚಿರತೆಗೆ ತಮಾಷೆ-ಮೂವರ ಮೇಲೆ ದಾಳಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ನಿಧಾನವಾಗಿ ಮಾತನಾಡಿ ಎಂದಿದ್ದಕ್ಕೆ  ಗಲಾಟೆ; ಪಾನಿಪೂರಿ ವ್ಯಾಪಾರಿ ಹತ್ಯೆ

Crime: ನಿಧಾನವಾಗಿ ಮಾತನಾಡಿ ಎಂದಿದ್ದಕ್ಕೆ  ಗಲಾಟೆ; ಪಾನಿಪೂರಿ ವ್ಯಾಪಾರಿ ಹತ್ಯೆ

Bengaluru Rain: ಪರಿಹಾರ ಕಾರ್ಯಕ್ಕೆ 1,000 ಕೋಟಿ ನೀಡಿ; ಅಶೋಕ್‌

Bengaluru Rain: ಪರಿಹಾರ ಕಾರ್ಯಕ್ಕೆ 1,000 ಕೋಟಿ ನೀಡಿ; ಅಶೋಕ್‌

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Consumer Court: ದೋಷಪೂರಿತ ಇವಿ ದ್ವಿಚಕ್ರ ವಾಹನ ಕೊಟ್ಟ ಕಂಪನಿಗೆ ಕೋರ್ಟ್‌ನಿಂದ 2ಲಕ್ಷ ದಂಡ

Consumer Court: ದೋಷಪೂರಿತ ಇವಿ ದ್ವಿಚಕ್ರ ವಾಹನ ಕೊಟ್ಟ ಕಂಪನಿಗೆ ಕೋರ್ಟ್‌ನಿಂದ 2ಲಕ್ಷ ದಂಡ

Fraud: ವಿದೇಶದಲ್ಲಿ ಉದ್ಯೋಗ‌ ಕೊಡಿಸುವುದಾಗಿ 9 ಲಕ್ಷ ವಂಚನೆ: ಮೂವರ ವಿರುದ್ಧ ಕೇಸ್‌ 

Fraud: ವಿದೇಶದಲ್ಲಿ ಉದ್ಯೋಗ‌ ಕೊಡಿಸುವುದಾಗಿ 9 ಲಕ್ಷ ವಂಚನೆ: ಮೂವರ ವಿರುದ್ಧ ಕೇಸ್‌ 

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಹುಬ್ಬಳ್ಳಿ: ಗೋಡೆ ಕುಸಿದು ಮಹಿಳೆ ಸಾ*ವು, 3500 ಕೋಳಿ ಬಲಿ!

ಹುಬ್ಬಳ್ಳಿ: ಗೋಡೆ ಕುಸಿದು ಮಹಿಳೆ ಸಾ*ವು, 3500 ಕೋಳಿ ಬಲಿ!

7(1)

Gangolli ಬಂದರಿಗೆ ಮರೀಚಿಕೆಯಾದ ಅಭಿವೃದ್ಧಿ

4

UV Fusion: ಕಣ್ಮರೆಯಾಗುತ್ತಿರುವ ಪರಂಪರಾನುಗತ ವೃತ್ತಿಗಳು

ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Yadagiri: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Bigg Boss: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಗೆ ಹೃದಯಾಘಾತ; ಮುಂದೆ ಆದದ್ದೇನು?

Bigg Boss: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಗೆ ಹೃದಯಾಘಾತ; ಮುಂದೆ ಆದದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.