
Extortion Case: ಅರೆಬೆತ್ತಲೆ ವಿಡಿಯೋ ಮಾಡಿ 14 ಲಕ್ಷ ರೂ. ಸುಲಿಗೆ!
Team Udayavani, Apr 12, 2024, 11:50 AM IST

ಬೆಂಗಳೂರು: ಫೆಡೆಕ್ಸ್ ಕೊರಿಯರ್ ಕಂಪನಿ ಪ್ರತಿನಿಧಿ ಸೋಗಿನಲ್ಲಿ ವಕೀಲೆಯೊ ಬ್ಬರಿಗೆ ಕರೆ ಮಾಡಿದ ಸೈಬರ್ ವಂಚಕರು ಆಕೆಯನ್ನು ಅರೆಬೆತ್ತಲಾಗುವಂತೆ ಹೇಳಿ, ಅದನ್ನು ವಿಡಿಯೋ ಮಾಡಿಕೊಂಡು 14 ಲಕ್ಷ ರೂ. ಸುಲಿಗೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಈ ಸಂಬಂಧ ವಕೀಲೆ ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಫೆಡೆಕ್ಸ್ ಕೊರಿಯರ್ ಕಂಪನಿ ಪ್ರತಿನಿಧಿ ಸೋಗಿನಲ್ಲಿ ಏ.3ರಂದು ಕರೆ ಮಾಡಿದ್ದ ವಂಚಕ, ನಿಮ್ಮ ಹೆಸರಿನಲ್ಲಿ ಹೊರದೇಶಕ್ಕೆ ಕೊರಿಯರ್ ಹೊರಟಿದೆ. ಅದರಲ್ಲಿ ಡ್ರಗ್ಸ್ ಹಾಗೂ ಇತರೆ ನಿಷೇಧಿತ ವಸ್ತುಗಳಿವೆ. ನಿಮ್ಮ ವಿರುದ್ಧ ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆದಿದೆ.
ಮುಂಬೈ ಸೈಬರ್ ಕ್ರೈಂ ಪೊಲೀಸರ ಜತೆ ಮಾತನಾಡಿ ಎಂದು ಹೇಳಿ ಬೇರೆಯವರಿಗೆ ಕರೆ ವರ್ಗಾಯಿಸಿದ್ದ. ಕೆಲ ಹೊತ್ತಿನ ಬಳಿಕ ಪೊಲೀಸರ ಸೋಗಿನಲ್ಲಿ ಮಾತನಾಡಿದ್ದ ಮತ್ತೂಬ್ಬ ವಂಚಕ, ತಾವು ಹೇಳಿದ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವಂತೆ ಸೂಚಿಸಿದ್ದಾನೆ. ನಂತರ ಆ ಆ್ಯಪ್ ಮೂಲಕ ವಿಡಿಯೋ ಕರೆ ಮಾಡಿದ ವಂಚಕ, ಪ್ರಕರಣದಲ್ಲಿ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಭಾಗಿಯಾಗಿದ್ದಾರೆ. ಇದರಲ್ಲಿ ನಿಮ್ಮ ಹೆಸರು ಇದೆ. ಇಡೀ ದಿನ ವಿಡಿಯೋ ಕರೆಯಲ್ಲೇ ಇರಬೇಕು ಎಂದು ಹೇಳಿದ್ದ. ಅದನ್ನೂ ನಂಬಿದ್ದ ವಕೀಲೆ, ವಿಡಿಯೋ ಆನ್ನಲ್ಲಿ ಇರಿಸಿದ್ದರು ಎಂದು ಹೇಳಲಾಗಿದೆ. ಮತ್ತೂಂದೆಡೆ ಬೇರೆ ನಂಬರ್ನಿಂದ ಕರೆ ಮಾಡಿದ ವಂಚಕ, ಪ್ರಕರಣ ಅಂತ್ಯಗೊಳಿಸಲು ಹಣ ಕೇಳಿದ್ದ. ಆದರೆ, ಹಣ ವರ್ಗಾವಣೆ ಆಗಿರಲಿಲ್ಲ. ಪುನಃ ಕರೆ ಮಾಡಿದ್ದ ಆರೋಪಿ, ಮಾದಕ ವಸ್ತು ಸೇವನೆ ಪರೀಕ್ಷೆ ನಡೆಸಬೇಕು. ಬಟ್ಟೆ ಬಿಚ್ಚಿ ಅರೆನಗ್ನವಾಗಿ ನಿಲ್ಲಬೇಕು. ಇಲ್ಲದಿದ್ದರೆ, ನಿಮ್ಮ ಮನೆಗೆ ಬಂದು ಬಂಧಿಸುತ್ತೇವೆ ಎಂದು ಹೆದರಿಸಿದ್ದಾನೆ. ಹೆದರಿದ ವಕೀಲೆ, ಆರೋಪಿ ಹೇಳಿದಂತೆ ಮಾಡಿದ್ದರು. ಅದೇ ವಿಡಿಯೋವನ್ನು ಆರೋಪಿ ಚಿತ್ರೀಕರಿಸಿಕೊಂಡು ಬ್ಲ್ಯಾಕ್ವೆುàಲ್ ಮಾಡಿ 14 ಲಕ್ಷ ರೂ. ಸುಲಿಗೆ ಮಾಡಿದ್ದಾನೆ.
ಮತ್ತೂಮ್ಮೆ ಹಣ ಕೇಳಿದಾಗ ವಕೀಲೆ ಬಂದು ದೂರು ನೀಡಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.