ಸ್ತ್ರೀರೋಗ ತಜ್ಞೆ ಪದ್ಮಿನಿ ಪ್ರಸಾದ್ ಹೆಸರಿನಲ್ಲಿ ವಂಚನೆ: ಮೋಸ ಹೋದ ಹಲವು ಮಹಿಳೆಯರು
Team Udayavani, Jan 2, 2021, 8:55 AM IST
ಬೆಂಗಳೂರು: ಸ್ತ್ರೀರೋಗ ತಜ್ಞೆ ಡಾ.ಪದ್ಮಿನಿ ಪ್ರಸಾದ್ ಹೆಸರಿನಲ್ಲಿ ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ನಕಲಿ ಖಾತೆ ತೆರೆದಿರುವ ಕಿಡಿಗೇಡಿಗಳು ಅಮಾಯಕ ಮಹಿಳೆಯರನ್ನು ಟಾರ್ಗೆಟ್ ಮಾಡಿ ದುಷ್ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಆದರೆ, ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ.
ಡಾ.ಪದ್ಮಿನಿ ಪ್ರಸಾದ್ ಹೆಸರಿನಲ್ಲಿ ಖಾತೆ ತೆರೆದಿರುವ ಕಿಡಿಗೇಡಿಗಳು ಅವರ ಫೋಟೋವನ್ನು ಖಾತೆಗೆ ಅಪ್ಲೋಡ್ ಮಾಡಿದ್ದಾರೆ. ಬಳಿಕ “ಲೈಂಗಿಕ ಸಮಸ್ಯೆ ಇದ್ದರೆ ಮೆಸೇಜ್ ಮಾಡಿ’ ಎಂದು ಚಾಟಿಂಗ್ ಮಾಡಿದ್ದಾರೆ. ಅದನ್ನು ಕಂಡ ಕೆಲ ಅಮಾಯಕ ಮಹಿಳೆಯರು, ತಮ್ಮ ವೈಯಕ್ತಿಕ ಸಮಸ್ಯೆ ಹೇಳಿ ಕೊಂಡಿದ್ದಾರೆ. ಅದಕ್ಕೆ ಪ್ರತಿ ಕ್ರಿಯೆ ನೀಡಿ ರುವ ಆರೋಪಿಗಳು, “ನಿಮ್ಮ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಕಳುಹಿಸಿ, ಅದನ್ನು ನೋಡಿ ಸಲಹೆ ನೀಡುತ್ತೇವೆ’ ಎಂದಿದ್ದಾರೆ.
ಅದನ್ನು ನಂಬಿದ ಸಾಕಷ್ಟು ಮಂದಿ ಫೋಟೋ, ವಿಡಿಯೋಗಳನ್ನು ಕಳುಹಿಸಿದ್ದಾರೆ. ಇನ್ನು ಕೆಲವರು ಆಸ್ಪ ತ್ರೆಗೆ ಬರುವುದಾಗಿ ಹೇಳಿ ದರೂ ಬೇಡವೆಂದು ಹೇಳಿ ವಂಚಿಸಿದ್ದಾರೆ. ಅನುಮಾನಗೊಂಡ ಕೆಲ ಮಹಿಳೆ ಯರು, ಡಾ.ಪದ್ಮಿನಿ ಅವರನ್ನು ನೇರವಾಗಿ ಮತ್ತು ಫೋನ್ ಮೂಲಕ ಸಂಪರ್ಕಿಸಿ ವಿಚಾರ ತಿಳಿಸಿದ್ದಾರೆ. ಈ ಸಂಬಂಧ ಡಾ.ಪದ್ಮಿನಿ ಅವರು, ವಿಡಿಯೋ ಮಾಡಿ ಸ್ಪಷ್ಟನೆ ನೀಡಿದ್ದಾರೆ.
ಜಾಲತಾಣದಲ್ಲಿ ಯಾರನ್ನೂ ಸಂಪರ್ಕಿಸಿಲ್ಲ
“ಇತ್ತೀಚೆಗೆ ನನ್ನ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ ನನ್ನ ಫೋಟೋ ಬಳಸಿಕೊಂಡು, ಹಲವಾರು ಸ್ತ್ರೀಯರನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಗೊತ್ತಾಯಿತು. ಅದರಿಂದ ತುಂಬ ದುಃಖ ಆಗಿದೆ. ಮೆಸೆಂಜರ್ ಮೂಲಕ ಸ್ತ್ರೀಯರ ವೈಯಕ್ತಿಕ ಸಮಸ್ಯೆ ಕೇಳುವುದು, ಅವರ ಫೋಟೋ ಮತ್ತು ವಿಡಿಯೋ ಗಳನ್ನು ಕಳುಹಿಸಿ ಎಂದು ಕೇಳುವುದು ಮಾಡಿದ್ದಾರೆ. ಈ ಬಗ್ಗೆ ತಿಳಿಯದ ಸ್ತ್ರೀಯರು ನಾನೇ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದೇನೆ ಎಂದು ಭಾವಿಸಿ ಕೆಲವರು ಕಿಡಿಗೇಡಿಗಳ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈ ಬಗ್ಗೆ ಕೆಲವರು ಅನುಮಾನಗೊಂಡು ಫೋನ್ ಮೂಲಕ ವಿಚಾರ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ನಾನು ಯಾರನ್ನು ಸಂಪರ್ಕಿಸಿಲ್ಲ. ರಾಜಾಜಿನಗರದ ನರ್ಸಿಂಗ್ ಹೋಮ್ ನಲ್ಲಿ ಮಾತ್ರ ಚಿಕಿತ್ಸೆ ನೀಡುತ್ತೇನೆ. ಕೆಲ ಆಸ್ಪತ್ರೆ ಹಾಗೂ ಇತರೆಡೆ ಹಾಕಿರುವ ನನ್ನ ಫೋಟೋ ಬಳಸಿ ಈ ರೀತಿ ಮಾಡಿರಬಹುದು. ದಯವಿಟ್ಟು ಯಾರೂ ಇಂತಹ ಬಲೆಗೆ ಬೀಳ ಬೇಡಿ. ನಿಮ್ಮ ವೈದ್ಯಕೀಯ ಸಮಸ್ಯೆಗೆ ನೇರವಾಗಿ ಸಂಪರ್ಕಿಸಿ. ಅಪರಿಚಿತರ ಕೃತ್ಯದಿಂದ ಸಮಸ್ಯೆಯಾಗಿ ದ್ದರೆ ಕ್ಷಮೆ ಕೇಳುತ್ತೇನೆ. ಗೌಪ್ಯ ವಿಚಾರಗಳನ್ನು ಯಾರೊಂದಿಗೆ ಹಂಚಿಕೊಳ್ಳಬೇಡಿ ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Lokayukta ಪತ್ರ ಸೋರಿಕೆ ಹೇಗಾಯ್ತು: ರಾಜ್ಯಪಾಲರ ಪ್ರಶ್ನೆ
Court ಕಲಾಪ ನೇರಪ್ರಸಾರ ಚಿತ್ರೀಕರಣಕ್ಕೆ ನಿರ್ಬಂಧ; ಪೂರ್ವಾನುಮತಿ ಅಗತ್ಯ: ಹೈಕೋರ್ಟ್ ಸೂಚನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.