Crime: ಅಣ್ಣ, ತಂಗಿಗೆ ಆಸ್ತಿ ಪಾಲು ಕೊಡದ ಸೋದರನ ಕೊಲೆ!
Team Udayavani, Aug 5, 2024, 11:09 AM IST
ಬೆಂಗಳೂರು: ರಾಮಮೂರ್ತಿನಗರದ ವಿಜಿನಾ ಪುರದಲ್ಲಿ ಆಸ್ತಿ ವಿಚಾರವಾಗಿ ನಡೆದ ಜಗಳದಲ್ಲಿ ಸೋದರ ಸಂಬಂಧಿಯನ್ನೇ ಹತ್ಯೆ ಮಾಡಿದ ಇಬ್ಬರನ್ನು ರಾಮಮೂರ್ತಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ರಾಮ ಮೂರ್ತಿ ನಗರದ ಬಾಬುರೆಡ್ಡಿ (54) ಕೊಲೆಯಾದವರು. ಬಾಬುರೆಡ್ಡಿ ಸಹೋ ದರಿಯ ಪತಿ ಗೋಪಾಲ್ ರೆಡ್ಡಿ ಹಾಗೂ ಸಹೋದರನ ಮಗ ಭರತ್ ಬಂಧಿತ ಆರೋಪಿಗಳು. ಬಾಬು ರೆಡ್ಡಿ ಪಿತ್ರಾರ್ಜಿತ ಆಸ್ತಿಯಲ್ಲಿ ತನ್ನ ಅಣ್ಣ ಹಾಗೂ ತಂಗಿಗೆ ಪಾಲು ನೀಡಿರಲಿಲ್ಲ. ಇದರಿಂದ ಇವರ ನಡುವೆ ಆಸ್ತಿಗಾಗಿ ಆಗಾಗ ಜಗಳ ನಡೆದು ಆಸ್ತಿ ವ್ಯಾಜ್ಯ ನ್ಯಾಯಾಲಯದ ಮೆಟ್ಟಿಲೇರಿತ್ತು. ಆಸ್ತಿ ಹಂಚಿಕೆ ಬಗ್ಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಲು ಬಾಬುರೆಡ್ಡಿ, ಆರೋಪಿಗಳು ಹಾಗೂ ಇತರ ಕುಟುಂಬ ಸದಸ್ಯರು ಶನಿವಾರ ಸಂಜೆ ರಾಮಮೂರ್ತಿನಗರದ ವಿಜಿನಾಪುರದಲ್ಲಿ ಸೇರಿ ದ್ದರು. ಈ ವೇಳೆ ಮಾತುಕತೆ ನಡೆಸುತ್ತಿದ್ದಾಗ ಮಾತಿಗೆ ಮಾತು ಬೆಳೆದು ಆಕ್ರೋಶಗೊಂಡ ಆರೋಪಿಗಳಾದ ಗೋಪಾಲ್ ರೆಡ್ಡಿ ಹಾಗೂ ಭರತ್ ಏಕಾಏಕಿ ಚಾಕು ವಿನಿಂದ ಬಾಬುರೆಡ್ಡಿಗೆ ಇರಿದಿದ್ದಾರೆ. ಪರಿಣಾಮ ಇರಿತದಿಂದ ತೀವ್ರವಾಗಿ ರಕ್ತಸ್ರಾವಕ್ಕೊಳಗಾಗಿದ್ದ ಬಾಬುರೆಡ್ಡಿ ಅವರನ್ನು ಅಲ್ಲಿದ್ದವರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲೇ ಸಾವನ್ನಪ್ಪಿದ್ದಾರೆ.
ವಿಚಾರ ತಿಳಿಯುತ್ತಿದ್ದಂತೆ ರಾಮಮೂರ್ತಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಂತರ ಕಾರ್ಯಾಚರಣೆ ನಡೆಸಿ ಆರೋಪಿಗಳಾದ ಗೋಪಾಲ್ ರೆಡ್ಡಿ, ಭರತ್ ನನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.