![Mahesh](https://www.udayavani.com/wp-content/uploads/2024/07/Mahesh-415x229.jpg)
ಬಿಜೆಪಿಯಿಂದ ಉಪವಾಸ ನಾಟಕ
Team Udayavani, Apr 13, 2018, 12:08 PM IST
![bji-inda.jpg](https://www.udayavani.com/wp-content/uploads/2018/04/13/bji-inda.jpg)
ಬೆಂಗಳೂರು: ಪ್ಯಾಸಿಸ್ಟ್ ಮನಸ್ಥಿತಿಯ ಬಿಜೆಪಿ ನಾಯಕರು ಮಾಧ್ಯಮ ಮತ್ತು ಸಾರ್ವಜನಿಕರ ಗಮನ ಸೆಳೆಯಲು ಉಪವಾಸ ನಾಟಕ ಆಡುತ್ತಿದ್ದಾರೆ ಎಂದು ಎಐಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಣದೀಪ್ ಸುರ್ಜೆವಾಲಾ ಆರೋಪಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ವಿಧಾನಸಭೆ ಹಾಗೂ 2019ರ ಲೋಕಸಭಾ ಚುನಾವಣೆ ಸೋಲಿನ ಭೀತಿಯಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಂಸತ್ ಕಲಾಪ ನಡೆಸಲು ಪ್ರತಿಪಕ್ಷಗಳು ಅವಕಾಶ ನೀಡಿಲ್ಲ ಎಂಬ ಸಬೂಬು ಹೇಳಿ ಉಪವಾಸದ ನಾಟಕವಾಡುತ್ತಿದ್ದಾರೆ ಎಂದು ಟೀಕಿಸಿದರು.
ವಾಸ್ತವವಾಗಿ ಬಿಜೆಪಿ ಪ್ರತಿಪಕ್ಷದಲ್ಲಿದ್ದಾಗಲೂ ಸಂಸತ್ ಕಲಾಪಕ್ಕೆ ಅಡ್ಡಿಪಡಿಸಿತ್ತು. ಈಗ ಆಡಳಿತ ಪಕ್ಷದಲ್ಲಿದ್ದಾಗಲೂ ಅದೇ ನಾಟಕವಾಡುತ್ತಿದೆ. 2009 ರಿಂದ 14 ರ ವರೆಗೆ ಬಿಜೆಪಿ ಶೇ. 66.68 % ರಷ್ಟು ಲೋಕಸಭೆಯ ಕಲಾಪದ ಅವಧಿಯನ್ನು ನುಂಗಿ ಹಾಕಿತ್ತು. ಈ ಬಗ್ಗೆ ಕೇಂದ್ರ ಸರ್ಕಾರ ದೇಶದ ಜನತೆಯ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.
ಪ್ರತಿಪಕ್ಷಗಳು ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಲು ತೀರ್ಮಾನಿಸಿದ್ದವು. 63 ಸಾವಿರ ಕೋಟಿ ರೂ. ಬ್ಯಾಂಕ್ ಲೂಟಿಕೋರರ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡಲಿಲ್ಲ. ನೀರವ್ ಮೋದಿ, ಚೋಕ್ಸಿ, ಜತಿನ್ ಮೆಹ್ತಾ ಹೇಗೆ ಓಡಿ ಹೋದರು ಎಂದು ಬಿಜೆಪಿಯವರು ದೇಶದ ಜನತೆಗೆ ಉತ್ತರಿಸಲಿಲ್ಲ.ರಫೆಲ್ ಯುದ್ಧ ವಿಮಾನ ಖರೀದಿ ಹಗರಣ, ಎಸ್ಎಸ್ಸಿ ಹಗರಣ, ಸಿಬಿಎಸ್ಸಿ ಹಗರಣ ಕುರಿತು ಚರ್ಚಿಸಲು ಅವಕಾಶ ನೀಡದೇ ತನ್ನ ಮಿತ್ರ ಪಕ್ಷಗಳ ಮೂಲಕ ಕಲಾಪದ ಸಮಯ ಹಾಳಾಗುವಂತೆ ನೋಡಿಕೊಂಡಿತು ಎಂದು ದೂರಿದರು.
ಆಂಧ್ರಪ್ರದೇಶ ಹಾಗೂ ಬಿಹಾರ್ಕ್ಕೆ ವಿಶೇಷ ಸ್ಥಾನಮಾನ ನೀಡುವ ಭರವಸೆ ಬಿಜೆಪಿ ನೀಡಿತ್ತು. ಆದರೆ, ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಮಹದಾಯಿ ನೀರಿನ ಹಂಚಿಕೆ ವಿಷಯವಾಗಿ ಯಾವುದೇ ತೀರ್ಮಾನ ಕೈಗೊಳ್ಳದೆ ಗೋವಾ ಸಚಿವ ಬಿಜೆಪಿಯ ವಿನೋದ್ ಪಾಲೇಕರ್ ಕರ್ನಾಟಕದ ಜನತೆಯನ್ನು ಅವಮಾನಿಸಿದರೂ ಅವರ ವಿರುದ್ದ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ಬಿಜೆಪಿ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದು ಈಗ ಜಾತಿ, ಧರ್ಮ, ಭಾಷೆ, ಉತ್ತರ ದಕ್ಷಿಣ, ಆಹಾರ ಪದ್ಧತಿ ಹೆಸರಿನಲ್ಲಿ ಸಮಾಜ ಒಡೆಯುವ ಪ್ರಯತ್ನ ನಡೆಸುತ್ತಿದೆ. ಬಿಜೆಪಿಗೆ ಅಧಿಕಾರ ಕಳೆದುಕೊಳ್ಳುವ ಆತಂಕ ಎದುರಾಗಿದೆ ಂದು ಹೇಳಿದರು.
ಟಾಪ್ ನ್ಯೂಸ್
![Mahesh](https://www.udayavani.com/wp-content/uploads/2024/07/Mahesh-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Road mishap: ವಿಶ್ವಕಪ್ ಜೋಶ್ನಲ್ಲಿ ಬೈಕ್ ಓಡಿಸಿ ಡಿವೈಡರ್ಗೆ ಢಿಕ್ಕಿ; ಸವಾರನ ಸಾವು](https://www.udayavani.com/wp-content/uploads/2024/07/7-150x90.jpg)
Road mishap: ವಿಶ್ವಕಪ್ ಜೋಶ್ನಲ್ಲಿ ಬೈಕ್ ಓಡಿಸಿ ಡಿವೈಡರ್ಗೆ ಢಿಕ್ಕಿ; ಸವಾರನ ಸಾವು
![6](https://www.udayavani.com/wp-content/uploads/2024/07/6-150x90.jpg)
Bengaluru: ರಸ್ತೆ ಬದಿ ನಿಂತಿದ್ದ ಲಾರಿಗೆಬೈಕ್ ಡಿಕ್ಕಿ: ದುರ್ಮರಣ
![4](https://www.udayavani.com/wp-content/uploads/2024/07/4-150x90.jpg)
ಸಾಲ ಪಡೆದು ವಂಚನೆ ಮಾಡಿದ್ದ ಯುವಕನ ಅಪಹರಣ: ಫಾರ್ಮ್ ಹೌಸ್ ನಲ್ಲಿರಿಸಿ ಹಲ್ಲೆ
![Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್ ](https://www.udayavani.com/wp-content/uploads/2024/07/5-150x90.jpg)
Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್
![2](https://www.udayavani.com/wp-content/uploads/2024/07/2-150x90.jpg)
Disease: ಡೆಂಘೀ ಜತೆ ಮಕ್ಕಳ ಕಾಡುತ್ತಿದೆ ಕಾಲು ಬಾಯಿ ರೋಗ!
MUST WATCH
ಹೊಸ ಸೇರ್ಪಡೆ
![KKRDB Meeting: ಕಲ್ಯಾಣ ಕರ್ನಾಟಕ ಭಾಗದ ಸಚಿವರು- ಶಾಸಕರು ಭಾಗಿ](https://www.udayavani.com/wp-content/uploads/2024/07/KKRDB-150x83.jpg)
KKRDB Meeting: ಕಲ್ಯಾಣ ಕರ್ನಾಟಕ ಭಾಗದ ಸಚಿವರು- ಶಾಸಕರು ಭಾಗಿ
![ಪುತ್ತೂರು: ಅಡಿಕೆ ಪಾಲದ ಮೇಲೆ ಜೀವ ಪಣಕ್ಕಿಟ್ಟು ನಡಿಗೆ!](https://www.udayavani.com/wp-content/uploads/2024/07/Adike-150x84.jpg)
ಪುತ್ತೂರು: ಅಡಿಕೆ ಪಾಲದ ಮೇಲೆ ಜೀವ ಪಣಕ್ಕಿಟ್ಟು ನಡಿಗೆ!
![Mahesh](https://www.udayavani.com/wp-content/uploads/2024/07/Mahesh-150x83.jpg)
Hubli; ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಬಿದ್ದರೆ ನಮ್ಮ ಹೈಕಮಾಂಡ್..: ಮಹೇಶ ಟೆಂಗಿನಕಾಯಿ
![Sagara: ತಮ್ಮ ವ್ಯಾಪ್ತಿಯಲ್ಲೇ ಕೆಲಸ ಮಾಡಲು ವಿಎಗಳಿಗೆ ಸೂಚನೆ; ಕಾಗೋಡು ಆಗ್ರಹ](https://www.udayavani.com/wp-content/uploads/2024/07/thimmappa-150x100.jpg)
Sagara: ತಮ್ಮ ವ್ಯಾಪ್ತಿಯಲ್ಲೇ ಕೆಲಸ ಮಾಡಲು ವಿಎಗಳಿಗೆ ಸೂಚನೆ; ಕಾಗೋಡು ಆಗ್ರಹ
![15 ದಿನದಲ್ಲಿ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ ನಾಯ್ಕ](https://www.udayavani.com/wp-content/uploads/2024/07/bhimanna-naik-150x78.jpg)
15 ದಿನದಲ್ಲಿ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.