ಪರಿತ್ಯಕ್ತ ಶಿಶು ರಕ್ಷಣೆಗೆ “ಮಮತೆಯ ತೊಟ್ಟಿಲು’


Team Udayavani, Feb 26, 2019, 6:29 AM IST

parityakta.jpg

ಬೆಂಗಳೂರು: ಹೆತ್ತವರಿಂದ ತ್ಯಜಿಸಲ್ಪಟ್ಟ ಅನಾಥ ಮಗುವಿಗೆ ಸುರಕ್ಷಿತ ಆಶ್ರಯ ಒದಗಿಸುವ, ಆ ಮೂಲಕ ಶಿಶು ಮರಣ ಪ್ರಮಾಣ ಕುಗ್ಗಿಸುವ ಉದ್ದೇಶದೊಂದಿಗೆ ಸ್ವಯಂಸೇವಾ ಸಂಸ್ಥೆಯೊಂದು ಮಮತಾ ಕಾ ಜೋಲಾ (ಮಮತೆಯ ತೊಟ್ಟಿಲು) ಎಂಬ ವಿನೂತನ ಯೋಜನೆ ಜಾರಿಗೊಳಿಸಿದೆ.

ಅಸಹಜತೆ ಅಥವಾ ಇಷ್ಟವಿಲ್ಲದ ಕಾರಣಕ್ಕೆ ಜನಿಸಿದ ಮಗುವನ್ನು ಮಹಿಳೆಯರು ಕಸದ ತೊಟ್ಟಿ, ಖಾಲಿ ಜಾಗ ಅಥವಾ ಇತರ ಅನಾರೋಗ್ಯಕರ ಸ್ಥಳಗಳಲ್ಲಿ ಎಸೆದು ಹೋಗುತ್ತಾರೆ. ಇಂಥ ಸಂದರ್ಭದಲ್ಲಿ ಮಗು ಮೃತಪಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಇಂತಹ ಶಿಶುಗಳ ರಕ್ಷಣೆಗೆ ವಿಶ್ರಾಂತಿ ಎನ್‌ಜಿಒ “ಮಮತೆಯ ತೊಟ್ಟಿಲು’ ಪರಿಚಯಿಸಿದೆ.

ಭಾರತೀಯ ದಂಡ ಸಂಹಿತೆ 317ರ ಪ್ರಕಾರ ಮಗುವನ್ನು ಹೀಗೆ ಎಸೆದು ಅಥವಾ ಬಿಟ್ಟು ಹೋಗುವುದು ಶಿಕ್ಷಾರ್ಹ ಅಪರಾಧ. ಪೋಷಕರಿಂದ ದೂರವಾಗುವ ಮಕ್ಕಳು ಮುಂದೆ ಏನಾದರು ಎಂಬ ಮಾಹಿತಿಯೇ ಇರುವುದಿಲ್ಲ. ಯಾವುದೇ ಮಗುವಿನ ಬದುಕು ಬರಡಾಗಬಾರದು ಎಂಬ ಆಶಯದೊಂದಿಗೆ ಜಾಗೃತಿ ಮೂಡಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ.

ಹೇಗಿದೆ ಯೋಜನೆ?: ಸಂಸ್ಥೆಯ ಕೇಂದ್ರಗಳು, ಪಿಎಚ್‌ಸಿ, ಆಸ್ಪತ್ರೆ ಸೇರಿ ವಿವಿಧ ಸ್ಥಳಗಳಲ್ಲಿ ತೊಟ್ಟಿಲು ಇರಿಸಲಾಗುತ್ತದೆ. ಅನಾಥ, ಪರಿತ್ಯಕ್ತ ಮಗುವನ್ನು ತಾಯಂದಿರು ಎಲ್ಲಿಯೋ ಎಸೆಯುವ ಬದಲು ಈ ತೊಟ್ಟಿಲಲ್ಲಿ ಇರಿಸಿ ಹೋಗಬಹುದು. ಈ ತೊಟ್ಟಿಲು ಗಾಳಿ, ಬೆಳಕಿನ ಜತೆ ಸುರಕ್ಷಿತ ವ್ಯವಸ್ಥೆ ಹೊಂದಿರುತ್ತದೆ. ತೊಟ್ಟಿಲಿಗೆ ಮಗುವನ್ನು ಹಾಕಿದ 30 ಸೆಕೆಂಡ್‌ ಒಳಗಾಗಿ ವಿಶ್ರಾಂತಿ ಎನ್‌ಜಿಒ ಸಿಬಂದಿಗೆ ಮಾಹಿತಿ ಲಭಿಸಲಿದೆ. ಇದಾದ 5 ನಿಮಿಷದಲ್ಲಿ ಮಗುವನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಲಾಗುತ್ತದೆ. ಮಗುವನ್ನು ಇರಿಸಿದವರ ಮಾಹಿತಿ ಗೌಪ್ಯವಾಗಿರುತ್ತದೆ.

ಎರಡು ಕಡೆ ಪ್ರಯೋಗ: ಪ್ರಸ್ತುತ ಮಾಲೂರು ತಾಲೂಕಿನ ಯಶವಂತಪುರ ಹಾಗೂ ಕೋಲಾರದ ಎಸ್‌ಎನ್‌ಆರ್‌ ಜಿಲ್ಲಾಸ್ಪತ್ರೆಗಳಲ್ಲಿ ಪ್ರಾಯೋಗಿಕವಾಗಿ ತೊಟ್ಟಿಲು ಇರಿಸಲಾಗಿದೆ. ಭಾರತದಲ್ಲೇ ಮೊದಲ ಬಾರಿ ಇಂಥ ಯೋಜನೆಯೊಂದನ್ನು ಜಾರಿಗೊಳಿಸಿದ್ದು, ಮುಂದಿನ ದಿನಗಳಲ್ಲಿ ಯೋಜನೆಯನ್ನು ಇನ್ನಷ್ಟು ವಿಸ್ತರಿಸಲಾಗುವುದು ಎಂದು ಎನ್‌ಜಿಒ ಸಂಸ್ಥಾಪಕಿ ಸರಸಾ ವಾಸುದೇವನ್‌ ತಿಳಿಸಿದ್ದಾರೆ.

ಹೆಣ್ಣು ಭ್ರೂಣ ಹತ್ಯೆ ತಡೆ: ಪ್ರತಿ ದಿನ ರಾಜ್ಯದ ಪ್ರತಿ ಜಿಲ್ಲೆಯಿಂದ ಒಂದು ನವಜಾತ ಶಿಶು ಹೆತ್ತವರಿಂದ ದೂರವಾಗಿ ಅನಾಥವಾಗುತ್ತದೆ. ಅನಾರೋಗ್ಯಕರ ಸ್ಥಳಗಳಲ್ಲಿ ಎಸೆಯುವ ಬದಲು ಶಿಶುಗಳನ್ನು ತೊಟ್ಟಿಲಿಗೆ ಹಾಕಿದರೆ ರಕ್ಷಿಸಬಹುದು. ಮುಖ್ಯವಾಗಿ ಹೆಣ್ಣು ಭೂಣ ಹತ್ಯೆ ತಡೆಗೆ ನೆರವಾಗುವುದು ಸಂಸ್ಥೆಯ ಆಶಯ.

ಮಮತೆಯ ತೊಟ್ಟಿಲು ಮೂಲಕ ರಕ್ಷಿಸುವ ಮಗುವಿಗೆ ಶಿಕ್ಷಣ ಸೇರಿ ಎಲ್ಲ ಸೌಕರ್ಯ ನೀಡಿ ಉತ್ತಮ ಭವಿಷ್ಯ ನಿರ್ಮಾಣಕ್ಕೆ ಪೂರಕ ವ್ಯವಸ್ಥೆ ಮಾಡುತ್ತೇವೆ. ಮುಂದೆ ಯೋಜನೆಯನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶವಿದೆ.
-ಸರಸಾ ವಾಸುದೇವನ್‌, ವಿಶ್ರಾಂತಿ ಸಂಸ್ಥಾಪಕಿ

* ರಾಜೇಶ್‌ ಪಟ್ಟಿ

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.