ಯುವ ದಿನಾಚರಣೆಗೆ ವೇದಿಕೆ ಸಜ್ಜು


Team Udayavani, Jan 12, 2020, 3:08 AM IST

yuva

ಬೆಂಗಳೂರು: ನಿಸರ್ಗ ಸೇವಾ ಫೌಂಡೇಷನ್‌ ಸಂಸ್ಥೆಯ ಸಂಸ್ಥಾಪಕಾಧ್ಯಕ್ಷ ಜಗದೀಶ್‌ ಅವರು ಹಲವಾರು ಸೇವಾ ಕಾರ್ಯಗಳನ್ನು ಹಮ್ಮಿಕೊಂಡು ಬರುತ್ತಿದ್ದು, ಸ್ವಾಮಿ ವಿವೇಕಾನಂದರ 158ನೇ ಜಯಂತಿಯನ್ನು ವಿಶಿಷ್ಟವಾಗಿ ಆಚರಿಸಲು ಸಿದ್ಧತೆ ನಡೆಸಿದ್ದಾರೆ. ಶಾಲಾ ದಿನಗಳಲ್ಲಿಯೇ ಇವರಿಗೆ ಪರಿಸರದ ಬಗೆಗೆ ಕಾಳಜಿಯಿತ್ತು. ಹೀಗಾಗಿಯೇ ವಿದ್ಯಾರ್ಥಿ ಮಿತ್ರರು ಇವರನ್ನು ನಿಸರ್ಗ ಜಗದೀಶ್‌ ಎಂದು ಕರೆಯುತ್ತಿದ್ದರು. ಅದೀಗ ಖಾಯಂ ಹೆಸರಾಗಿದೆ.

ಕನ್ನಡ ಪ್ರೇಮಿಯಾಗಿರುವ ನಿಸರ್ಗ ಜಗದೀಶ್‌ ಅವರು, ಚಿಕ್ಕಂದಿನಿಂದಲೂ ಕನ್ನಡ ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡು ಬಂದಿದ್ದಾರೆ. ಹಾಗೇ 7 ವರ್ಷಗಳಿಂದ ಮಹಾಲಕ್ಷ್ಮೀ ಲೇಔಟ್‌ ವಿಧಾನಸಭಾ ಕ್ಷೇತ್ರದ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಾರ್ಯಕ್ರಮ ಯಾವುದೇ ಇರಲಿ ಗಿಡ ನೆಡುವುದು, ಗಿಡಕ್ಕೆ ನೀರುಣಿಸುವುದು, ಗಿಡ ದಾನ ಮಾಡುವ ಮೂಲಕ ಅದನ್ನು ಉದ್ಘಾಟಿಸುವುದು ಇವರ ವಾಡಿಕೆಯಾಗಿದೆ. ಮಾವು, ಬೇವು, ಶ್ರೀಗಂಧ ಹೀಗೆ ವಿವಿಧ ಜಾತಿಯ 15 ಸಾವಿರಕ್ಕೂ ಅಧಿಕ ಗಿಡಗಳನ್ನು ನಗರಾದ್ಯಂತ ನೆಟ್ಟು ಪೋಷಿಸಿದ್ದಾರೆ. ಪರಿಸರ ರಕ್ಷಣೆ ಪೂಜೆ ಎಂದೇ ಭಾವಿಸಿದ್ದಾರೆ.

ಪರಿಸರ ಸಂರಕ್ಷಣೆಗೆಂದೇ ನಿಸರ್ಗ ಸೇವಾ ಫೌಂಡೇಶನ್‌ ಎಂಬ ಸೇವಾ ಸಂಸ್ಥೆ ಆರಂಭಿಸಿ ಪ್ರತಿವರ್ಷ ವಿಶ್ವ ಪರಿಸರ ದಿನಾಚರಣೆ, ವಿಶ್ವ ಭೂಮಿ ದಿನಾಚರಣೆ, ಜಲ ಸಂರಕ್ಷಣಾ ದಿನಾಚರಣೆ ಮುಂತಾದ ಕಾರ್ಯಕ್ರಮಗಳನ್ನು ಆಚರಿಸುತ್ತಾ ಬಂದಿದ್ದಾರೆ. ಪಟಾಕಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ನಿಸರ್ಗ ಜಗದೀಶ್‌ ಅವರು ನಡೆಸಿದ “ಪಟಾಕಿ ಬಿಟ್ಟಾಕಿ’ ಎಂಬ ಬೀದಿ ನಾಟಕಗಳ ಅಭಿಯಾನ ಸಾಕಷ್ಟು ಯಶಸ್ವಿಯಾಗಿದ್ದು, ಹೆಸರಾಂತ ಸಂಸ್ಥೆ ಬಿ.ಪ್ಯಾಕ್‌ ಕೂಡ ಇದಕ್ಕೆ ಸಹಕಾರ ನೀಡಿದೆ. ಗಣೇಶ ಹಬ್ಬದ ವೇಳೆ ಮಣ್ಣಿನ ಗಣಪತಿಯನ್ನು ವಿತರಿಸುವ ಮೂಲಕ ಜಲ, ಜಲಚರ ಉಳಿವಿಗೆ ಅಳಿಲು ಸೇವೆ ಸಲ್ಲಿಸುತ್ತಿದ್ದಾರೆ.

ಪ್ಲಾಸ್ಟಿಕ್‌ ಮುಕ್ತ ಬೆಂಗಳೂರಿಗಾಗಿ ಗಾಂಧಿ ಜಯಂತಿಯಂದು ಮಹಾಲಕ್ಷ್ಮೀ ಲೇಔಟ್‌ ವಿಧಾನಸಭಾ ಕ್ಷೇತ್ರದಲ್ಲಿ ಫ್ಲಾಗ್‌ ರನ್‌ ಕಾರ್ಯಕ್ರಮ ಆಯೋಜಿಸಿ ಬಿಬಿಎಂಪಿ ಗಿನ್ನಿಸ್‌ ದಾಖಲೆ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಆನ್‌ಲೈನ್‌ ಮೂಲಕ ಪಡಿತರ ಚೀಟಿ ನೋಂದಣಿ ಇದ್ದಾಗ ಉಚಿತವಾಗಿ ಸುಮಾರು 10 ಸಾವಿರಕ್ಕೂ ಹೆಚ್ಚು ಜನರಿಗೆ ಅವರ ಅಗತ್ಯದ ಎಪಿಎಲ್, ಬಿಪಿಎಲ್‌ ಕಾರ್ಡ್‌ಗಳು ದೊರೆಯುವಂತೆ ಮಾಡಿದ್ದಾರೆ. ಅಸಂಘಟಿತ ಕಾರ್ಮಿಕರಿಗೆ ಸರ್ಕಾರದ ವಿಮಾ ಯೋಜನೆಯ ಗುರುತಿನ ಚೀಟಿ ದೊರೆಯುವಂತೆ ಮಾಡಿದ್ದಾರೆ. ಇದರಿಂದ ನೂರಾರು ಫ‌ಲಾನುಭವಿ ಗಳಿಗೆ ಇವರಿಂದ ಉಪಯೋಗವಾಗಿದೆ. ಪ್ರತಿ ವರ್ಷ ಗಾಂಧಿಜಯಂತಿಯಂದು “ಸೇವಾದಿನವಾಗಿ’ ಆಚರಿಸುತ್ತಾ ಶ್ರಮದಾನದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದಾರೆ.

ಕೆಂಪೇಗೌಡ ಪ್ರಶಸ್ತಿ ಪುರಸ್ಕೃತರು: ಪರಿಸರ ಹಾಗೂ ಸಮಾಜ ಸೇವೆಗೆ ಜಗದೀಶ್‌ ನೀಡಿರುವ ಕೊಡುಗೆ ಗಮನಿಸಿ, ಕಳೆದ ವರ್ಷ ಬಿಬಿಎಂಪಿ ಕೆಂಪೇಗೌಡ ಪ್ರಶಸ್ತಿ ನೀಡಿ ಗೌರವಿಸಿದೆ. ವಿವಿಧ ಸಂಘ ಸಂಸ್ಥೆಗಳ ಪ್ರಶಸ್ತಿಗೂ ಇವರು ಭಾಜನರಾಗಿದ್ದಾರೆ. ಮಾಜಿ ಶಾಸಕ ನೆ.ಲ ನರೇಂದ್ರಬಾಬು ಅವರ ಮಾರ್ಗದರ್ಶನದಲ್ಲಿ ಹಲವಾರು ಕಾರ್ಯಕ್ರಮ, ಹೋರಾಟ, ಚಳವಳಿಗಳಲ್ಲಿ ಭಾಗಿಯಾಗಿದ್ದಾರೆ.‌ ಬೆಂಗಳೂರು ರಾಜಕೀಯ ಕ್ರಿಯಾ ಸಮಿತಿಯ ನೆಚ್ಚಿನ ಸಿವಿಕ್‌ ಲೀಡರ್‌ ಆಗಿ ನಾಯಕತ್ವದ ಗುಣಗಳನ್ನು ರೂಢಿಸಿಕೊಂಡಿರುವುದು ಮಾತ್ರವಲ್ಲದೆ ಸಮಿತಿ ವತಿಯಿಂದ ಹಲವಾರು ಯಶಸ್ವಿ ಕಾರ್ಯಕ್ರಮ ಕೊಟ್ಟ ಕೀರ್ತಿ ಇವರ ಬೆನ್ನಿಗಿದೆ. ನಿಸರ್ಗ ಜಗದೀಶ್‌ ಕ್ಯಾಪ್ಟನ್‌ ಆಗಿರುವ ನಿಸರ್ಗ ಫೌಂಡೇಶನ್‌ ಹಾಗೂ ಮಹಾಲಕ್ಷ್ಮೀ ಎಜುಕೇಶನಲ್‌ ಟ್ರಸ್ಟ್‌ನ ಅಧ್ಯಕ್ಷರಾದ ಜಯರಾಮಣ್ಣ ಅವರು ವಿವೇಕಾನಂದರ ಜಯಂತಿಯಂದು ಆರೋಗ್ಯ ಶಿಬಿರ ಆಯೋಜಿಸಿರುವುದು ಶ್ಲಾಘನೀಯ.

ಆಟೋ ಚಾಲಕರಿಗೆ ಪ್ರಥಮ ಚಿಕಿತ್ಸಾ ತರಬೇತಿ: ಮಹಾಲಕ್ಷಿ ಲೇಔಟ್‌ ವಿಧಾನಸಭಾ ಕ್ಷೇತ್ರದಲ್ಲಿ ಜ. 12ರಂದು ಸ್ವಾಮಿ ವಿವೇಕಾನಂದರ 158ನೇ ಜಯಂತಿಯನ್ನು ವಿಶಿಷ್ಟವಾಗಿ ಆಚರಿಸಲು ಸಿದ್ಧತೆ ನಡೆಸಿದ್ದು, ಸುಮಾರು 200 ಆಟೋ ಚಾಲಕರಿಗೆ ಪ್ರಥಮ ಚಿಕಿತ್ಸಾ ತರಬೇತಿ ಹಾಗೂ ಕಿಟ್‌ ವಿತರಿಸಲಿದ್ದಾರೆ. ನಿಸರ್ಗ ಫೌಂಡೇಶನ್‌ ಹಾಗೂ ಮಹಾಲಕ್ಷ್ಮೀ ಎಜುಕೇಶನ್‌ ಟ್ರಸ್ಟ್‌ಗಳ ಸಂಯುಕ್ತಾಶ್ರಯದಲ್ಲಿ ಕುರುಬರಹಳ್ಳಿ ವೃತ್ತದಲ್ಲಿ ಡಾ. ರಾಜ್‌ ಕುಮಾರ್‌ ಪುತ್ಥಳಿಯ ಮುಂಭಾಗದಲ್ಲಿ ಆರೋಗ್ಯ ಶಿಬಿರ ಏರ್ಪಡಿಸಲಾಗಿದೆ.

ಈ ಕಾರ್ಯಕ್ರಮಕ್ಕೆ ಶಾಸಕ ಕೆ. ಗೋಪಾಲಯ್ಯ, ಮಾಜಿ ಶಾಸಕ ನೆ.ಲ.ನರೇಂದ್ರಬಾಬು, ಮಾಜಿ ಉಪ ಮೇಯರ್‌ ಹೇಮಲತಾ ಗೋಪಾಲಯ್ಯ, ಕಸಾಪದ ಕ್ಷೇತ್ರದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಮುಖಂಡರಾದ ಎಂ.ನಾಗರಾಜ್‌ ಹಾಗೂ ಎಸ್‌.ಹರೀಶ್‌, ಜಯರಾಮಣ್ಣ ಉಪಸ್ಥಿತಿ ಇರಲಿದೆ. ಈ ಕಾರ್ಯಕ್ರಮದ ಯಶಸ್ಸಿಗಾಗಿ ಪಕ್ಷಾತೀತವಾಗಿ ಹಲವು ಮುಖಂಡರು ದುಡಿಯುತ್ತಿದ್ದಾರೆ. ಆದರೆ ಇಲ್ಲಿ ಪ್ರಮುಖವಾಗಿ ಕೇಳಿ ಬರುತ್ತಿರುವ ಹೆಸರೆಂದರೆ ನಿಸರ್ಗ ಜಗದೀಶ್‌ ಅವರದ್ದು. ಏಕೆಂದರೆ ಇಂತಹ ಕಾರ್ಯಕ್ರಮವನ್ನು ಆಯೋಜಿಸುವುದರಲ್ಲಿ ಇವರು ನಿಪುಣರು. ಕಳೆದ ಒಂದು ದಶಕದಿಂದಲೂ ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಆಚರಿಸಿಕೊಂಡು ಬರುತ್ತಿದ್ದು ಕ್ಷೇತ್ರದ ಜನತೆಯ ಅಭಿಮಾನ ಗಳಿಸಿದ್ದಾರೆ.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.