![Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು](https://www.udayavani.com/wp-content/uploads/2025/02/delhi-8-415x213.jpg)
![Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು](https://www.udayavani.com/wp-content/uploads/2025/02/delhi-8-415x213.jpg)
Team Udayavani, Jan 29, 2025, 10:50 AM IST
ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರ ಹೆಸರು ಹೇಳಿಕೊಂಡು ಚಿನ್ನಾಭರಣ ಮಳಿಗೆ ಮಾಲೀಕರಿಗೆ ವಂಚಿಸಿದ್ದ ಶ್ವೇತಾಗೌಡಳಿಂದ 1 ಕೆ.ಜಿ. 800 ಗ್ರಾಂ ಚಿನ್ನ ಪಡೆದಿದ್ದ ಆರೋಪಿ ಯನ್ನು ಕಮರ್ಷಿಯಲ್ ಸ್ಟ್ರೀಟ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮೋಹನ್ ಲಾಲ್ ಬಂಧಿತ. ಚಿನ್ನಾಭರಣ ಮಳಿಗೆ ಮಾಲೀಕರಿಗೆ 2.42 ಕೋಟಿ ರೂ. ವಂಚಿಸಿದ್ದ ಪ್ರಕರಣದಲ್ಲಿ ಶ್ವೇತಾ ಗೌಡ ಸಿಕ್ಕಿ ಬಿದ್ದಿದ್ದಳು. ಆಕೆ ಬೆಂಗಳೂರಿನಲ್ಲಿ ಬಟ್ಟೆ ವ್ಯಾಪಾರ ನಡೆಸುತ್ತಿದ್ದ ಆರೋಪಿ ಮೋಹನ್ ಲಾಲ್ಗೆ 1 ಕೆ.ಜಿ 800 ಗ್ರಾಂ ಚಿನ್ನಾಭರಣ ಕೊಟ್ಟಿದ್ದಳು.
ಇತ್ತ ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿ ಬೇರೆ ರಾಜ್ಯಕ್ಕೆ ಪರಾರಿಯಾಗಿದ್ದ. ಇದನ್ನು ಅರಿತ ಪೊಲೀಸರು ರಾಜಸ್ಥಾನಕ್ಕೆ ತೆರಳಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ರಾಜಸ್ಥಾನ ದಿಂದ ನಗರಕ್ಕೆ ಕರೆ ತಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾ ರಣೆಗಾಗಿ ಪೊಲೀಸ್ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು
Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!
Robbery Case: ಅಸಲಿ ಪೊಲೀಸ್ನ ನಕಲಿ ಆಟವನ್ನು ಭೇದಿಸಿದರು!
Indian Deportees: ಭಾರತೀಯರಿಗೆ ಮತ್ತೆ ಕೋಳ ತೊಡಿಸಿ ಗಡೀಪಾರು!
Mahakumbha Mela: ದೇಶದ ಬಹುತೇಕ ರೈಲು ನಿಲ್ದಾಣಗಳು ರಶ್
You seem to have an Ad Blocker on.
To continue reading, please turn it off or whitelist Udayavani.