![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 21, 2023, 1:47 PM IST
ಬೆಂಗಳೂರು: ಮುಂಬೈ ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಹೆದರಿಸಿ ನಗರದ ವ್ಯಕ್ತಿಯೊಬ್ಬರಿಂದ ಒಂದೂವರೆ ಕೋಟಿ ರೂ. ಸುಲಿಗೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಮೈಕೊ ಲೇಔಟ್ ನಿವಾಸಿಯೊಬ್ಬರು ನೀಡಿದ ದೂರಿನ ಮೇರೆಗೆ ದಕ್ಷಿಣ ವಿಭಾಗದ ಸೆನ್ ಠಾಣೆ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದಾರೆ.
ಫೆಡೆಕ್ಸ್ ಕೊರಿಯರ್ ಪ್ರತಿನಿಧಿ ಸೋಗಿನಲ್ಲಿ ನ.10ರಂದು ದೂರುದಾರರಿಗೆ ಕಾರ್ತಿಕೇಯನ್ ಎಂಬ ಹೆಸರಿನಲ್ಲಿ ಕರೆ ಮಾಡಿದ್ದ ಆರೋಪಿ, ನಿಮ್ಮ ಹೆಸರಿನಲ್ಲಿ ಡ್ರಗ್ಸ್ ಕೊರಿಯರ್ ಬಂದಿದೆ. ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕೊರಿಯರ್ ಜಪ್ತಿ ಮಾಡಿದ್ದಾರೆ.
ನಿಮ್ಮ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಹೇಳುತ್ತಿದ್ದಾರೆ ಎಂದಿದ್ದಾನೆ. ಅದಕ್ಕೆ ದೂರು ದಾರರು ಕೋರಿಯರ್ ನಮ್ಮದಲ್ಲ ಎಂದಿ ದ್ದಾರೆ. ಆಗ ಆರೋಪಿ, ಪೊಲೀಸರನ್ನು ಸಂಪ ರ್ಕಿಸುವಂತೆ ಹೇಳಿ ಕರೆ ಸ್ಥಗಿತಗೊಳಿಸಿದ್ದಾನೆ. ಕೆಲ ನಿಮಿಷಗಳ ನಂತರ ಮುಂಬೈ ಸೈಬರ್ ಕ್ರೈಂ ಪೊಲೀಸರ ಹೆಸರಿನಲ್ಲಿ ಕರೆ ಮಾಡಿದ್ದ ಆರೋಪಿ, ಕೊರಿಯರ್ ನಿಮ್ಮದಲ್ಲವೆಂದರೆ ವೈಯಕ್ತಿಕ ವಿವರ ಹಾಗೂ ಖಾತೆ ವಿವರ ನೀಡಿ. ಪ್ರಕರಣ ದಾಖಲಿಸುವುದಿಲ್ಲ. ಇಲ್ಲದಿದ್ದರೆ, ಡ್ರಗ್ಸ್ ಸಾಗಣೆ ಪ್ರಕರಣ ದಾಖಲಿಸಿ ಜೈಲಿಗೆ ಕಳು ಹಿಸಲಾಗುವುದು ಎಂದು ಬೆದರಿಸಿದ್ದಾರೆ.
ಬಂಧನದ ಭೀತಿಯಲ್ಲಿದ್ದ ದೂರುದಾರ, ಆರೋಪಿ ಗಳು ಹೇಳಿದ್ದ ಖಾತೆಗಳಿಗೆ ಹಂತ ಹಂತವಾಗಿ 1.52 ಕೋಟಿ ವರ್ಗಾಯಿಸಿದ್ದರು. ಆ ಬಳಿಕವೂ ಹೆಚ್ಚುವರಿ ಹಣಕ್ಕೆ ಬೇಡಿಕೆ ಇಟ್ಟಿ ದಾಗ ಅನುಮಾನಿಗೊಂಡ ದೂರುದಾರ ಪೊಲೀಸ ರಿಗೆ ದೂರು ನೀಡಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಸೆನ್ ಠಾಣೆ ಪೊಲೀಸರು ಹೇಳಿದರು.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.