ಉದ್ಯೋಗ ಕೊಡಿಸುವುದಾಗಿ 47 ಲಕ್ಷ ರೂ. ವಂಚನೆ
Team Udayavani, Feb 19, 2023, 3:01 PM IST
ಬೆಂಗಳೂರು: ಅಗ್ನಿಶಾಮಕ ಅಧಿಕಾರಿ ಹಾಗೂ ಕಂದಾಯ ನಿರೀಕ್ಷಕ ಕೆಲಸ ಕೊಡಿಸುವುದಾಗಿ ನಂಬಿಸಿ ಉದ್ಯೋಗಕಾಂಕ್ಷಿಯೊಬ್ಬರಿಗೆ 47 ಲಕ್ಷ ರೂ.ಪಡೆದು ವಂಚಿಸಿದ್ದ ಪ್ರಕರಣ ಬೆಳಕಿಗೆ ಬಂದಿದೆ.
ಈ ಸಂಬಂಧ ಕೆಂಗೇರಿಯ ಹರೀಶ್ ಎಂಬುವರು ಎಚ್. ಆರ್.ವೀರಭದ್ರ ಅಲಿಯಾಸ್ ಭದ್ರ ಹಾಗೂ ತೇಜಸ್ ಎಂಬವರ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ದೂರುದಾರ ಹರೀಶ್ಗೆ ಸ್ನೇಹಿತರೊಬ್ಬರ ಮೂಲಕ ಆರೋಪಿ ವೀರಭದ್ರ ಪರಿಚಯವಾಗಿದ್ದು, ಈತ ತೇಜಸ್ ನನ್ನು ಪರಿಚಯಿಸಿ, ಈತನ ಮೂಲಕ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿದ್ದ. ಹರೀಶ್ ಸಂಬಂಧಿಕರಿಬ್ಬರು ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದರು. ಅವರಿಬ್ಬರಿಗೆ ಕೆಲಸ ಕೊಡಿಸುವುದಕ್ಕಾಗಿ ವೀರಭದ್ರ ಜತೆ ಚರ್ಚಿಸಲಾಗಿತ್ತು.
ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಅಗ್ನಿಶಾಮಕ ದಳದ ಅಧಿಕಾರಿ ಹಾಗೂ ಪೌರಾಡಳಿತ ನಿರ್ದೇಶನಾಲಯದಲ್ಲಿ ಕಂದಾಯ ನಿರೀಕ್ಷಕ (ಆರ್.ಐ) ಹುದ್ದೆಗಳು ಖಾಲಿ ಇವೆ. ಹಿರಿಯ ಅಧಿಕಾರಿಗಳು ಹಾಗೂ ರಾಜಕೀಯ ಪ್ರಭಾವಿಗಳು ಪರಿಚಯವಿದ್ದು, ಹಣ ನೀಡಿದರೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದ ಎಂದು ಪೊಲೀಸರು ತಿಳಿಸಿದರು.
ಆರೋಪಿ ಮಾತು ನಂಬಿದ್ದ ಹರೀಶ್, ಹಂತ- ಹಂತವಾಗಿ 47 ಲಕ್ಷ ರೂ. ಅನ್ನು ವೀರಭದ್ರ ಮತ್ತು ತೇಜಸ್ಗೆ ನೀಡಿದ್ದಾನೆ. ಆದರೆ, ಆರೋಪಿಗಳು ಯಾವುದೇ ಕೆಲಸ ಕೊಡಿಸಿಲ್ಲ. ಹೀಗಾಗಿ ಇಬ್ಬರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಹರೀಶ್ ದೂರಿನಲ್ಲಿ ಉಲ್ಲೇಖೀಸದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!
Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ
Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?
Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ನಾಲ್ವರ ಬಂಧನ
Bengaluru: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ 6ರ ಹೆಣ್ಣು ಮಗು ಮೃತದೇಹ ಪತ್ತೆ!
MUST WATCH
ಹೊಸ ಸೇರ್ಪಡೆ
ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು
Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!
Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ
Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್
Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.