ಉದಯವಾಣಿ ಬಳಗದ ಗೆಟ್‌ ಮೈ ಕ್ಲಾಸ್‌ ಆ್ಯಪ್‌ ಲೋಕಾರ್ಪಣೆ

ಐಐಟಿಗಳಿಗೆ ಕನ್ನಡಿಗರ ಪ್ರವೇಶ ಹೆಚ್ಚಲಿ: ಡಿ.ರೂಪಾ

Team Udayavani, Nov 19, 2021, 10:56 AM IST

rupa udayavani

ಬೆಂಗಳೂರು: ಐಐಟಿಗಳು, ಏಮ್ಸ್‌ನಂಥ ಅತ್ಯುನ್ನತ ಶೈಕ್ಷಣಿಕ ಸಂಸ್ಥೆಗಳಲ್ಲಿ ಕನ್ನಡ ಅಭ್ಯರ್ಥಿಗಳ ಸಂಖ್ಯೆ ಅತ್ಯಂತ ವಿರಳ. ನೆರೆಯ ತೆಲಂಗಾಣ, ಆಂಧ್ರ, ತಮಿಳುನಾಡಿಗೆ ಹೋಲಿಸಿದಲ್ಲಿ ನಾವು ತುಸು ಹಿಂದಿದ್ದೇವೆ.

ಹೀಗಾಗಿ, ಕನ್ನಡದ ವಿಜ್ಞಾನ ವಿದ್ಯಾರ್ಥಿಗಳು “ಗೆಟ್‌ ಮೈ ಕ್ಲಾಸ್‌’ನಂಥ ಆ್ಯಪ್‌ ಅನ್ನು ಸದುಪಯೋಗಪಡಿಸಿಕೊಂಡು, ಕನ್ನಡಿಗರು ಯಾರಿಗೂ ಕಡಿಮೆ ಇಲ್ಲ ಎಂಬುದನ್ನು ತೋರಿಸಬೇಕು ಎಂದು ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ಮುಖ್ಯಸ್ಥೆ, ಐಪಿಎಸ್‌ ಅಧಿಕಾರಿ ಡಿ. ರೂಪಾ ಮನವಿ ಮಾಡಿದರು. “ಉದಯವಾಣಿ’ ಕಚೇರಿಯಲ್ಲಿ ಗುರುವಾರ ಮಣಿಪಾಲ್‌ ಗ್ರೂಪ್‌ನ “ಗೆಟ್‌ ಮೈ ಕ್ಲಾಸ್‌’ ಅಪ್ಲಿಕೇಷನ್‌ನನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

“ಗೆಟ್‌ ಮೈ ಕ್ಲಾಸ್‌’ ಆ್ಯಪ್‌ ಅನ್ನು 11, 12ನೇ ತರಗತಿಯ ವಿಜ್ಞಾನ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್‌, ಜೆಇಇ ಪರೀಕ್ಷೆ ಎದುರಿಸಲು ವಿನೂತನವಾಗಿ ಸಿದ್ಧಪಡಿಸಲಾಗಿದೆ.

ಅತಿ ಕಡಿಮೆ ಬೆಲೆ: ಮಾಸಿಕ ಕೇವಲ 199 ರೂ. ಗಳಿಗೆ ಇಂಥ ಅಮೂಲ್ಯ ಮಾಹಿತಿಯುಳ್ಳ ಆ್ಯಪ್‌ ಅನ್ನು ಕನ್ನಡಿಗರಿಗೆ ಪರಿಚಯಿಸುತ್ತಿರುವುದು ನನಗೆ ಖುಷಿ ತಂದಿದೆ. ಅತಿ ಕಡಿಮೆ ಬೆಲೆಯಲ್ಲಿ, ಸರಳವಾಗಿ ವಿಜ್ಞಾನವನ್ನು ಪ್ರಸ್ತುತಪಡಿಸಿರುವ “ಗೆಟ್‌ ಮೈ ಕ್ಲಾಸ್‌’ ಖಂಡಿತವಾಗಿ ವಿದ್ಯಾರ್ಥಿಗಳಿಗೆ ಉಪಯೋಗವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಹೋಲಿಸಿದರೆ ಗ್ರಾಮೀಣ ವಿದ್ಯಾರ್ಥಿಗಳು ಶಿಕ್ಷಣದ ಪರಿಕರ ಹಾಗೂ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಈ ಅಂತರ ಸರಿದೂಗಿಸಿ, “ಗೆಟ್‌ ಮೈ ಕ್ಲಾಸ್‌’ ಆ್ಯಪ್‌ ಕರ್ನಾಟಕದ ಮೂಲೆ ಮೂಲೆಗೂ ತಲುಪುವಂತಾಗಬೇಕು ಎಂದು ಆಶಿಸಿದರು.

 ಈಗಿನವರು ಅದೃಷ್ಟವಂತರು: “ಉದಯವಾಣಿ’ ಪತ್ರಿಕೆಯು ದಶಕಗಳಿಂದಲೂ ಶಿಕ್ಷಣ ಕ್ಷೇತ್ರದ ಕುರಿತು ಹೆಚ್ಚಿನ ಮುತುವರ್ಜಿ ವಹಿಸುತ್ತಲೇ ಬಂದಿದೆ. ನಾವು ಶಿಕ್ಷಣ ಪಡೆಯುವ ಕಾಲಘಟ್ಟದಲ್ಲಿ ಇಂಥ ಆ್ಯಪ್‌ಗ್ಳು ಇರಲಿಲ್ಲ. ಅದು ಸ್ಮಾರ್ಟ್‌ಫೋನ್‌ ಯುಗವೂ ಆಗಿರಲಿಲ್ಲ. ಆದರೆ, ಇಂದಿನ ಮಕ್ಕಳು ತುಂಬಾ ಅದೃಷ್ಟವಂತರು.

“ಗೆಟ್‌ ಮೈ ಕ್ಲಾಸ್‌‘ನಂಥ ಆ್ಯಪ್‌ ಗಳಿಂದ ಈಗಿನವರಿಗೆ ಯೋಗ್ಯ ಮಾರ್ಗದರ್ಶನ ನೀಡಲು ಸಾಧ್ಯ. “ಉದಯವಾಣಿ’ ಬಳಗದ ಈ ನೂತನ ಪ್ರಯತ್ನಕ್ಕೆ ಉತ್ತಮ ಯಶಸ್ಸು ಸಿಗಲಿ ಎಂದು ಶುಭ ಹಾರೈಸಿದರು. ಸಮಾರಂಭದಲ್ಲಿ ಮಣಿಪಾಲ್‌ ಗ್ರೂಪ್‌ನ ಗ್ರೂಪ್‌ ಸಿಎಚ್‌ಆರ್‌ಒ ಪ್ರಮೋದ್‌ ಫ‌ರ್ನಾಂಡಿಸ್‌, ಎಂಟಿಎಲ್‌ ಡಿಜಿಟಲ್‌ ಸಲೂ ಷನ್ಸ್‌ನ ಉಪಾಧ್ಯಕ್ಷ ಗುರುಪ್ರಸಾದ್‌ ಕಾಮತ್‌, “ಉದಯವಾಣಿ’ ಬೆಂಗಳೂರು ಆವೃತ್ತಿಯ ಹಂಗಾಮಿ ಸಂಪಾದಕ ಬಿ.ಕೆ. ಗಣೇಶ್‌ ಹಾಗೂ ಇತರರು ಉಪಸ್ಥಿತರಿದ್ದರು.

 ಏನಿದು ಗೆಟ್‌ ಮೈ ಕ್ಲಾಸ್‌?

 11, 12ನೇ ತರಗತಿಯ ವಿಜ್ಞಾನ ವಿದ್ಯಾರ್ಥಿಗಳಿಗೆ ರೂಪಿಸಲಾದ ಆ್ಯಪ್‌. ಸಿಇಟಿ, ನೀಟ್‌, ಜೆಇಇ

ಪರೀಕ್ಷಾ ತಯಾರಿಗೆ ಅಗತ್ಯ ಜ್ಞಾನ ಸರಕುಗಳಿವೆ.

ಎಲ್ಲಿ ಲಭ್ಯ?

ಗೂಗಲ್‌ ಪ್ಲೇಸ್ಟೋರ್‌ನಲ್ಲಿ GetMiClass ಡೌನ್‌ಲೋಡ್‌ಗೆ ಲಭ್ಯವಿದೆ.

ದರವೆಷ್ಟು?

ಮಾಸಿಕ ಕೇವಲ 199 ರೂ.

ಇದನ್ನೂ ಓದಿ:- ಆರೋಗ್ಯ ಶಿಬಿರದ ಲಾಭ ಪಡೆಯಿರಿ: ಡಾ|ಸಂಧ್ಯಾ

ಟಾಪ್ ನ್ಯೂಸ್

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

14-bng

Namma Metro ಬಗ್ಗೆ ಸಿಎಜಿ ಆಡಿಟ್‌ ನಡೆಸಿ: ಸಂಸದ ತೇಜಸ್ವಿ

13-bng

Bengaluru: ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ ಹೊಡೆದು ಸಹೋದರರ ಸಾವು

12-bng

Bengaluru: ಜೂಜಾಟದಿಂದ ಮಾಡಿದ್ದ ಭಾರೀ ಸಾಲ ತೀರಿಸಲು ಮನೆ ಕಳ್ಳತನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

10

Katpadi: ತ್ಯಾಜ್ಯ ಗುಂಡಿಯಾಗುತ್ತಿದೆ ಕುರ್ಕಾಲು ಮದಗ

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.