Fraud: ಯುವತಿಯಿಂದ ದಿವ್ಯಾಂಗ ಆಟೋ ಚಾಲಕನಿಗೆ ವಂಚನೆ
Team Udayavani, Aug 10, 2023, 10:54 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಯುವತಿಯೊಬ್ಬಳು ಫೋನ್ ಪೇ ಮೂಲಕ ಹಣ ವರ್ಗಾವಣೆ ಮಾಡುವುದಾಗಿ ದಿವ್ಯಾಂಗ ಆಟೋ ಚಾಲಕನಿಂದ 23 ಸಾವಿರ ರೂ. ಪಡೆದು ವಂಚಿಸಿರುವ ಘಟನೆ ಗಿರಿನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಾಗರಬಾವಿ ಮಹದೇಶ್ವರ ಲೇಔಟ್ ನಿವಾಸಿ ಶಿವಕುಮಾರ್ ವಂಚನೆಗೊಳಗಾದವರು. ವಂಚಿಸಿದ ಯುವತಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಚಂದ್ರಾಲೇಔಟ್ ಬಳಿ ಯುವತಿಯೊಬ್ಬಳು ಶಿವಕುಮಾರ್ ಆಟೋ ಹತ್ತಿದ್ದಾಳೆ. ಮಾರ್ಗ ಮಧ್ಯೆ ಶಿವಕುಮಾರ್ಗೆ ಅಪರಿಚಿತ ವ್ಯಕ್ತಿಯೊಬ್ಬ 23 ಸಾವಿರ ರೂ. ಸಾಲದ ಹಣ ವಾಪಸ್ ಕೊಟ್ಟಿದ್ದಾರೆ. ಅದನ್ನು ಗಮನಿಸಿದ ಯುವತಿ, ತಾನೂ ಪ್ರತಿಷ್ಠಿತ ಕಾಲೇಜಿನಲ್ಲಿ ಓದುತ್ತಿದ್ದು, ಕಾಲೇಜಿನ ಶುಲ್ಕ ಪಾವತಿಸಬೇಕು, ಫೋನ್ ಪೇ ಮೂಲಕ ಕಾಲೇಜಿನವರು ಹಣ ಪಡೆಯುವುದಿಲ್ಲ. ನಿಮ್ಮ ಬಳಿಯಿರುವ ನಗದು ಕೊಟ್ಟರೆ, ಫೋನ್ ಪೇ ಮೂಲಕ ಹಣ ವರ್ಗಾವಣೆ ಮಾಡುತ್ತೇನೆ ಎಂದಿದ್ದಾಳೆ. ಅದಕ್ಕೆ ಒಪ್ಪಿದ ಶಿವಕುಮಾರ್ 23 ಸಾವಿರ ರೂ. ಕೊಟ್ಟಿದ್ದಾನೆ. ಕೆಲ ಹೊತ್ತಿನ ಬಳಿ ಆಕೆ ಫೋನ್ ಪೇ ಮಾಡಿದ್ದೇನೆ ಎಂದು ಆಟೋ ಇಳಿದು ಹೋಗಿದ್ದಾಳೆ. ಆಟೋ ಚಾಲಕ ಹಣ ಖಾತೆಗೆ ಬಂದಿದ್ದೇಯೇ? ಇಲ್ಲವೇ? ಎಂದು ನೋಡಿಕೊಳ್ಳುವಷ್ಟರಲ್ಲಿ ಆಕೆ ನಾಪತ್ತೆಯಾಗಿದ್ದಳು.ಬಳಿಕ ಆಕೆಯ ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು. ಹೀಗಾಗಿ ಚಾಲಕ ದೂರು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು
Bengaluru: ನಗರದಲ್ಲಿ ಏಕಕಾಲಕ್ಕೆ 200 ಗಣೇಶ ಮೂರ್ತಿಗಳ ಮೆರವಣಿಗೆ
Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್ಗಳು ಪತ್ತೆ
Bengaluru: ಚಿನ್ನಾಭರಣ ಮಳಿಗೆಯಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಕಳವಿಗೆ ಯತ್ನ
BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.