ವರ್ಚುವಲ್‌ ಕ್ಲಿನಿಕ್‌ಗೆ ಉತ್ತಮ ಸ್ಪಂದನೆ


Team Udayavani, May 18, 2023, 1:42 PM IST

TDY-6

ಬೆಂಗಳೂರು: ಸಾಮಾನ್ಯವಾಗಿ ಸರ್ಕಾರಿ ಆಸ್ಪತ್ರೆಗಳು ಎಂದರೆ ವೈದ್ಯರಿಗಾಗಿ ಕಾಯಬೇಕು, ದೊಡ್ಡ ಸಾಲಿನಲ್ಲಿ ನಿಂತು ಚೀಟಿ ಬರೆಸಬೇಕು,ಸರಿಯಾದ ಸಮಯಕ್ಕೆ ನುರಿತ ತಜ್ಞರುಸಿಗುವುದಿಲ್ಲ. ಈ ರೀತಿಯ ಅನೇಕ ಸಮಸ್ಯೆಗಳಿಗೆ ಪರಿಹಾರ ನೀಡುವ ಸದುದ್ದೇಶದಿಂದಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್‌ ಸಿಟಿಯೋಜನೆಯಡಿ ಇತ್ತೀಚೆಗೆ ಸ್ಥಾಪಿಸಿದ ಸ್ಮಾರ್ಟ್‌ವರ್ಚುವಲ್‌ ಕ್ಲಿನಿಕ್‌ಗಳಿಗೆ ಜನರಿಂದ ಉತ್ತಮ ಸ್ಪಂದನೆ ದೊರಕಿದೆ.

ಸ್ಮಾರ್ಟ್‌ಸಿಟಿಯು ತನ್ನ ನಾಗರಿಕರಿಗೆ ಅಗತ್ಯಮೂಲಸೌಕರ್ಯ, ಉತ್ತಮ ಗುಣಮಟ್ಟದಜೀವನ, ಸ್ವತ್ಛ ಸುಸ್ಥಿರ ಪರಿಸರ, ತಂತ್ರಜ್ಞಾನಬಳಸಿಕೊಂಡು ನಗರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರೋಗಿಗಳಿಗೆ ನುರಿತ ತಜ್ಞರೊಂದಿಗೆ ಸಮಾಲೋಚನೆ ನಡೆಸಲು ಹಾಗೂ ಬಡವರಿಗೆಉತ್ತಮ ಆರೋಗ್ಯ ಒದಗಿಸುವ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಪ್ರಾರಂಭಿಸಿದ 28 ಸ್ಮಾರ್ಟ್‌ ವರ್ಚುವಲ್‌ ಕ್ಲಿನಿಕ್‌ಗಳಲ್ಲಿ ಸಂಪೂರ್ಣ ಉಚಿತ ಚಿಕಿತ್ಸೆ ನೀಡಲಾಗುತ್ತಿದ್ದು, ಬಡವರು ಸೇರಿದಂತೆ ಬಹುತೇಕ ರೋಗಿಗಳಿಗೆ ಅನುಕೂಲವಾಗಿದೆ.

ನಗರದ ಕೋಡಿಹಳ್ಳಿ, ಗಂಗಾನಗರ, ಲಿಂಗರಾಜಪುರಂ, ಸುಲ್ತಾನ್‌ಪಾಳ್ಯ, ಅಶೋಕನಗರ, ವಸಂತನಗರ, ಗವಿಪುರಂ ಗುಟ್ಟಹಳ್ಳಿ, ಬಾಪೂಜಿ ನಗರ, ಜೆ.ಪಿ. ನಗರ, ಮಹಾಲಕ್ಷ್ಮೀ ಲೇಔಟ್‌, ಕಾಮಾಕ್ಷಿಪಾಳ್ಯ, ಸಹಕಾರ ನಗರ ಸೇರಿದಂತೆ ಒಟ್ಟು 28 ಕಡೆಗಳಲ್ಲಿ ಈ ಕ್ಲಿನಿಕ್‌ಗಳನ್ನು ಆರಂಭಿಸಲಾಗಿದೆ.

ಅಲ್ಲದೆ, ನಗರದ ಸದಾಶಿವನಗರದಲ್ಲಿ ಸ್ಥಾಪಿಸಿರುವ ಸೆಂಟ್ರಲ್‌ ಕ್ಲಿನಿಕಲ್‌ ಕಮ್ಯಾಂಡ್‌ ಸೆಂಟರ್‌ನಲ್ಲಿ ತಜ್ಞ ವೈದ್ಯರ ಬಳಗವಿದ್ದು, ನಗರ ಪ್ರಾಥಮಿಕ ಆರೋಗ್ಯಕೇಂದ್ರಗಳಲ್ಲಿ ಸ್ಥಾಪಿಸಲಾದ ಸ್ಮಾರ್ಟ್‌ ವರ್ಚುವಲ್‌ ಕ್ಲಿನಿಕ್‌ಗಳಿಗೆ ಬರುವ ರೋಗಿಗಳ ಜತೆ ಆನ್‌ಲೈನ್‌ ಮೂಲಕ ಸಮಾಲೋಚಿಸಲಾಗುತ್ತದೆ. ಇಲ್ಲಿ ಹೃದ್ರೋಗ, ಇಎನ್‌ಟಿ ಆಪ್ತಾಮಾಲಜಿ, ಡರ್ಮೋಟಾಲಜಿ, ಜನರಲ್‌ ಮೆಡಿಸಿನ್‌, ಎಂಡೊಕ್ರಿನೊಲಜಿ, ಮಕ್ಕಳ ಚಿಕಿತ್ಸೆ, ಮನೋಚಿಕಿತ್ಸೆ ಮತ್ತು ಸಾಮಾನ್ಯ ಶಸ್ತ್ರಚಿಕಿತ್ಸೆಗಳಿಗೆ ಸಂಬಂಧಿಸಿದ ಸಮಾಲೋಚನೆ ನಡೆಸಿ, ಆನ್‌ಲೈನ್‌ ಮೂಲಕ ಸಲಹೆ ನೀಡಲಾಗುತ್ತದೆ.

ಕ್ಲಿನಿಕ್‌ಗಳಲ್ಲಿನ ಉಪಕರಣಗಳು: ಡಿಜಿಟಲ್‌ ಸ್ತೆಥೋಸ್ಕೋಪ್‌, ಸಿಗ್ಮಾಮ್ಯಾನೋಮೀಟರ್‌,ಗ್ಲುಕ್ಲೊಮೀಟರ್‌, ಇಸಿಜಿ, ಡೆರ್ಮಾಸ್ಕೋಪ್‌, ತಪಾಸಣೆ ಕ್ಯಾಮೆರಾ-ಇಎಸ್ಟಿ ಆಫ್ತಲ್ಶೋಸ್ಕೋಪ್‌, ಫ‌ಂಡಸ್‌ ಕ್ಯಾಮೆರಾ, ಆಫ್ತಾಲ್ಶಿಕ್‌ ರೆಫ್ತಾಕ್ಷನ್‌ಯುನಿಟ್‌, ಸ್ಕಿರ್ಮರ್‌ ಟಿಯರ್‌ ಟೆಸ್ಟ್‌ಸ್ಟ್ರಿಪ್‌,ಸ್ನೆಲ್ಲೆನ್ಸ್‌ ಚಾರ್ಟ್‌, ಜೇಗರ್‌ ಚಾರ್ಟ್‌, ಇಶಿಹಾರ ಕಾರ್ಡ್‌, ಡಿಜಿಟಲ್‌ ಎಕ್ಸ್‌-ರೇ, ಸ್ಕ್ಯಾನರ್‌ ಮತ್ತು ಎಕ್ಷಾಮಿನಿಂಗ್‌ ಚೇರ್‌ ಉಪಕರಣಗಳನ್ನು ಈ ಕ್ಲಿನಿಕ್‌ಗಳು ಹೊಂದಿವೆ.

ವರ್ಚುವಲ್‌ ಕ್ಲಿನಿಕ್‌ ಕಾರ್ಯವೈಖರಿ ಹೇಗೆ?:

ನಗರದ ಸದಾಶಿವ ನಗರದಲ್ಲಿನ ಸೆಂಟ್ರಲ್‌ ಕ್ಲಿನಿಕಲ್‌ ಕಮ್ಯಾಂಡ್‌ ಸೆಂಟರ್‌ನಲ್ಲಿ 10 ಮಂದಿ ನುರಿತ ತಜ್ಞರು ಕಾರ್ಯನಿರ್ವಹಿಸುತ್ತಾರೆ. ನಗರದ 28 ಪ್ರದೇಶಗಳಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸ್ಥಾಪಿಸಿದ ಸ್ಮಾರ್ಟ್‌ ವರ್ಚುವಲ್‌ ಕ್ಲಿನಿಕ್‌ಗಳಲ್ಲಿ ವಿವಿಧ ತಂತ್ರಜ್ಞಾನದ ಉಪಕರಣಗಳನ್ನು ಹೊಂದಿವೆ. ಅಲ್ಲಿನ ಸುತ್ತಮುತ್ತಲಿನ ರೋಗಿಗಳು ಕ್ಲಿನಿಕ್‌ಗೆ ಭೇಟಿ ನೀಡಿದರೆ, ಸೆಂಟ್ರಲ್‌ ಕ್ಲಿನಿಕಲ್‌ ಕಮ್ಯಾಂಡ್‌ ಸೆಂಟರ್‌ನಿಂದಲೇ ತಜ್ಞರು ಆನ್‌ಲೈನ್‌ ವೀಡಿಯೋ ಕಾಲ್‌ ಮೂಲಕ ಪರೀಕ್ಷಿಸಿ, ಸಮಾಲೋಚನೆ ನಡೆಸಿ ಚಿಕಿತ್ಸೆ ನೀಡುತ್ತಾರೆ. ಇದರಿಂದಾಗಿ ದೂರದ ಆಸ್ಪತ್ರೆಗಳಿಗೆ ತೆರಳುವ ಸಮಸ್ಯೆ ತಪ್ಪುತ್ತದೆ. ಹಾಗೆಯೇ, ಹೃದಯ, ಕಣ್ಣು ಪರೀಕ್ಷೆ, ಇಸಿಜಿ, ಎಕ್ಸ್‌-ರೇ ಸೇರಿದಂತೆ ಎಲ್ಲಾ ಅಂಗಾಂಗ ಪರೀಕ್ಷೆಗಳನ್ನು ಡಿಜಿಟಲ್‌ ಮೂಲಕ ಸಮಸ್ಯೆಗಳನ್ನು ಪತ್ತೆಹಚ್ಚುವಂತಹ ಅತ್ಯಾಧುನಿಕ ಉಪಕರಣಗಳನ್ನು ಕಾಣಬಹುದಾಗಿದೆ.

ಕ್ಲಿನಿಕ್‌ನಲ್ಲಿ ಸಿಗುವ ಸೇವೆ:

 20 ವಿಶೇಷ ವೈದ್ಯರ ಕ್ಯಾಬಿನ್‌

 ಮಾನಿಟರ್‌ಗಳ ಮೂಲಕ ವಿಡಿಯೋ ಸಮಾಲೋಚನಾ ಸೌಲಭ್ಯ

 ವೈದ್ಯರ ಪರದೆಗೆ ವೈದ್ಯಕೀಯ ಸಾಧನಗಳ ನೇರ ಸ್ಟ್ರೀಮಿಂಗ್‌

 ಆನ್‌ಲೈನ್‌ ಸಮಾಲೋಚನೆ, ತಪಾಸಣೆ ಮತ್ತು ಚಿಕಿತ್ಸೆ

 ಡಿಜಿಟಲ್‌ ಪ್ರಿಸ್ಕ್ರಿಪ್ಷನ್‌ ಪ್ಯಾಡ್‌

ಸ್ಮಾರ್ಟ್‌ ವರ್ಚುವಲ್‌ ಕ್ಲಿನಿಕ್‌ಗಳಿಗೆ ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಸದ್ಯ 10 ಜನ ವೈದ್ಯ ತಜ್ಞರು ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ವೈದ್ಯರನ್ನು ನೇಮಿಸಲಾಗುತ್ತದೆ. ಅಲ್ಲದೆ, ಸ್ಮಾರ್ಟ್‌ ಸಿಟಿ ಯೋಜನೆಯಡಿ ಹೆಚ್ಚಿನ ಅನುದಾನದೊರೆತಲ್ಲಿ ನಗರದ ಇನ್ನಿತರೆ ಪ್ರದೇಶಗಳಲ್ಲಿ ಸ್ಮಾರ್ಟ್‌ ವರ್ಚುವಲ್‌ ಕ್ಲಿನಿಕ್‌ ಪ್ರಾರಂಭಿಸಲಾಗುತ್ತದೆ. – ಡಾ. ಕೆ.ವಿ. ತ್ರಿಲೋಕ್‌ಚಂದ್ರ, ವಿಶೇಷ ಆಯುಕ್ತರು(ಆರೋಗ್ಯ), ಬಿಬಿಎಂಪಿ

ತುಂಬಾ ಕೂದಲು ಉದುರುವ ಸಮಸ್ಯೆಯಿಂದ ಸುಮಾರು 3 ತಿಂಗಳುಗಳಿಂದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ತೆಗೆದುಕೊಳ್ಳುತ್ತಿದ್ದೆ. ಹಣ ಖರ್ಚಾಗುತ್ತಿತೇ¤ ಹೊರತು, ಕೂದಲು ಸಮಸ್ಯೆ ಕಡಿಮೆಯಾಗಲಿಲ್ಲ. ನಂತರ ಸುಬೇರ್‌ಪಾಳ್ಯದಲ್ಲಿನ ಸ್ಮಾರ್ಟ್‌ ವರ್ಚುವಲ್‌ ಕ್ಲಿನಿಕ್‌ನಲ್ಲಿ ಚಿಕಿತ್ಸೆ ತೆಗೆದುಕೊಳ್ಳಲು ಪ್ರಾರಂಭಿಸಿದೆ. ಆನ್‌ಲೈನ್‌ ಮೂಲಕ ಸಮಾಲೋಚನೆ ನಡೆಸಿ ಶಾಂಪೂ, ಮೆಡಿಸಿನ್‌ ನೀಡಿದರು. ಈಗ ಕೂದಲು ಉದುರುವುದು ಕಡಿಮೆಯಾಗಿದೆ. ಬೆಳವಣಿಗೆಯೂ ಉತ್ತಮವಾಗಿದೆ. – ಎಂ.ಕೆ.ಮನು, ಪೀಣ್ಯ ನಿವಾಸಿ

ಚರ್ಮರೋಗದ ಅಲರ್ಜಿಯಿಂದಾಗಿ ಅಡುಗೆ ಮಾಡುವಾಗ ಯಾವುದೇ ಬಿಸಿ ವಸ್ತುಗಳನ್ನು ಮುಟ್ಟಲುಸಾಧ್ಯವಾಗುತ್ತಿರಲಿಲ್ಲ. ಆದ್ದರಿಂದ ಅನೇಕ ವೈದ್ಯರ ಬಳಿ ಚಿಕಿತ್ಸೆ ಪಡೆದರೂ, ಪ್ರಯೋಜನವಾಗಿಲ್ಲ. ತದನಂತರ ಅಜಾದ್‌ ನಗರದಲ್ಲಿನ ಸ್ಮಾರ್ಟ್‌ ವರ್ಚುವಲ್‌ ಕ್ಲಿನಿಕ್‌ನಲ್ಲಿ ಸುಮಾರು ವಾರದಿಂದ ಚರ್ಮರೋಗ ತಜ್ಞರ ಬಳಿ ಚಿಕಿತ್ಸೆ ಪಡೆಯುತ್ತಿದ್ದೇನೆ.ಈ ಕ್ಲಿನಿಕ್‌ನಲ್ಲಿ ವೈದ್ಯರು ಸ್ನೇಹಮಯವಾಗಿದ್ದು, ಆನ್‌ಲೈನ್‌ ಮೂಲಕ ಕಾಯಿಲೆಗೆಕಾರಣವೇನು? ಯಾವುದರಿಂದ ಅಲರ್ಜಿ ಆಗುತ್ತದೆ ಎಂದು ತುಂಬಾ ಚೆನ್ನಾಗಿ ಮನವರಿಕೆಮಾಡಿಸುತ್ತಾರೆ. ಅವರು ನೀಡಿದ ಔಷಧಗಳಿಂದಾಗಿ ಈಗಾಗಲೇ ಸುಮಾರು ಶೇ.80ರಷ್ಟು ಅಲರ್ಜಿ ಕಡಿಮೆಯಾಗಿದೆ. ಈ ಕ್ಲಿನಿಕ್‌ಗಳು ಬಡಜನರು ಸೇರಿದಂತೆ ಎಲ್ಲರಿಗೂ ಉತ್ತಮವಾಗಿವೆ. – ಪಿ.ಎನ್‌. ನಿವೇದಿತಾ, ಶ್ರೀನಗರ ನಿವಾಸಿ

– ಭಾರತಿ ಸಜ್ಜನ್‌

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.