ಜಿಎಸ್ಟಿ ಹೊರೆ ತಪ್ಪಿಸಲು ಸಚಿವರಿಗೆ ಪ್ರವಾಸಿ ವಾಹನ ಮಾಲೀಕರ ಮನವಿ
Team Udayavani, Sep 20, 2017, 11:42 AM IST
ಬೆಂಗಳೂರು: ಜಿಎಸ್ಟಿ ಲೋಪದಿಂದ ಟ್ಯಾಕ್ಸಿ ಉದ್ಯಮಕ್ಕೆ ಹೊರೆಯಾಗುತ್ತಿರುವುದನ್ನು ಕೂಡಲೇ ತಪ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬೆಂಗಳೂರು ಪ್ರವಾಸಿ ವಾಹನ ಮಾಲೀಕರ ಸಂಘದ ನೇತೃತ್ವದ ನಿಯೋಗ ಮಂಗಳವಾರವೂ ಕೇಂದ್ರ ಹಣಕಾಸು ಇಲಾಖೆ ಮುಖ್ಯಸ್ಥರಿಗೆ ಮನವಿ ಸಲ್ಲಿಸಿತು.
ಸಂಘದ ನೇತೃತ್ವದಲ್ಲಿ ದಕ್ಷಿಣ ಭಾರತ ಟ್ಯಾಕ್ಸಿ ಸಂಘಟನೆಗಳು ಹಾಗೂ ಅಖೀಲ ಭಾರತ ಟ್ರಾನ್ಸ್ಪೊàರ್ಟ್ ಕಾಂಗ್ರೆಸ್ನ ಪದಾಧಿಕಾರಿಗಳ ನಿಯೋಗ ಸೋಮವಾರ ದೆಹಲಿಯಲ್ಲಿ ಕೇಂದ್ರ ಸಚಿವ ಅನಂತಕುಮಾರ್, ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಶಿವ ಪ್ರತಾಪ್ ಶುಕ್ಲಾ ಅವರಿಗೆ ಮನವಿ ಸಲ್ಲಿಸಿತ್ತು. ಮಂಗಳವಾರವೂ ಕೇಂದ್ರ ಹಣಕಾಸು ಇಲಾಖೆ ಮುಖ್ಯಸ್ಥರಿಗೆ ಮನವಿ ಪತ್ರ ಸಲ್ಲಿಸಿತು.
ಎಲ್ಲ ರಾಜ್ಯಗಳ ಹಣಕಾಸು ಸಚಿವರು ಈ ಸಂಬಂಧ ಒತ್ತಡ ಹೇರಿದಂತೆ ಸಮಸ್ಯೆ ಸುಲಭವಾಗಿ ಬಗೆಹರಿಯಲಿದೆ ಎಂದು ನಿಯೋಗದಲ್ಲಿದ್ದ ಉಡುಪಿ ಜಿಲ್ಲಾ ಟ್ಯಾಕ್ಸಿಮನ್ ಸಂಘದ ಅಧ್ಯಕ್ಷರೂ ಆದ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದರು.
ಜಿಎಸ್ಟಿಯಡಿ ಟ್ಯಾಕ್ಸಿಗಳ ಮೇಲೆ ಎರಡು ಬಾರಿ ತೆರಿಗೆ ವಿಧಿಸುತ್ತಿರುವ ಬಗ್ಗೆ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಡಲಾಗಿದೆ. ಸೆ.29ರಂದು ನಡೆಯುವ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸುವುದಾಗಿ ಕೇಂದ್ರ ಹಣಕಾಸು ಇಲಾಖೆ ಕಾರ್ಯದರ್ಶಿ ಭರವಸೆ ನೀಡಿದ್ದಾರೆ ಎಂದು ಬೆಂಗಳೂರು ಪ್ರವಾಸಿ ವಾಹನ ಮಾಲೀಕರ ಸಂಘದ ಅಧ್ಯಕ್ಷ ಕೆ.ರಾಧಾಕೃಷ್ಣ ಹೊಳ್ಳ ತಿಳಿಸಿದರು.
ಸಂಚಾರ ದಟ್ಟಣೆ ನಿವಾರಿಸಲು ಡಿವಿಎಸ್ಗೆ ಮನವಿ
ದೆಹಲಿಯಲ್ಲಿ ಮಂಗಳವಾರ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರನ್ನು ಭೇಟಿ ಮಾಡಿದ ನಿಯೋಗವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ರಸ್ತೆಯಲ್ಲಿನ ಸಂಚಾರ ದಟ್ಟಣೆ ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ಮನವಿ ಸಲ್ಲಿಸಿತು. ಕೇಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ತೀವ್ರ ದಟ್ಟಣೆ ಉಂಟಾಗುತ್ತಿದೆ.
ಥಣಿಸಂದ್ರ- ಬಾಗಲೂರು ಮಾರ್ಗವಾಗಿ ಸಂಪರ್ಕ ರಸ್ತೆ ನಿರ್ಮಾಣ ಯೋಜನೆ ವಿಳಂಬದಿಂದ ದಟ್ಟಣೆ ಹೆಚ್ಚಾಗಿದೆ. ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಕೇಂದ್ರ ಸರ್ಕಾರದಿಂದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ ಎಂದು ರಾಧಾಕೃಷ್ಣ ಹೊಳ್ಳ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಂಗಡಿ!
Bengaluru; ಬಸ್ ಡ್ರೈವರ್ಗೆ ಎದೆನೋವು: ಬ್ರೇಕ್ ಹಾಕಿ ಅಪಾಯ ತಪಿಸಿದ ಎಎಸ್ಐ
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ
Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು
Vijayapura: ತಿರುಪತಿ ಲಡ್ಡು ಪಾವಿತ್ರ್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್
Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.