ಜಾತಿವ್ಯವಸ್ಥೆಯಿಂದ ಹೊರಬರಲು ಮಹನೀಯರ ಚಿಂತನೆಗಳು ಸಹಕಾರಿ


Team Udayavani, Jul 4, 2018, 12:41 PM IST

jaati.jpg

ಬೆಂಗಳೂರು: ಜಾತಿ, ಧರ್ಮ ವ್ಯವಸ್ಥೆತಯಿಂದ ಸಮಾಜ ಹೊರಬರಲು ಶಿಶುನಾಳ ಶರೀಫ‌ರು ಹಾಗೂ ಗೋವಿಂದಭಟ್ಟರ ಚಿಂತನೆಗಳು ಸಹಕಾರಿಯಾಗಿವೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅಭಿಪ್ರಾಯಪಟ್ಟರು. 

ಸಂತ ಶಿಶುನಾಳ ಶರೀಫ‌ರ ಹಾಗೂ ಕಳಸದ ಗುರು ಗೋವಿಂದಭಟ್ಟರ ಪ್ರತಿಷ್ಠಾನದ ಉದ್ಘಾಟನೆ ಮತ್ತು ಶರೀಫ‌ರ ದ್ವಿ-ಶತಮಾನೋತ್ಸವದ ಅಂಗವಾಗಿ ಮಂಗಳವಾರ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ “ತತ್ವ ರಸಾಯನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಾತಿ ವ್ಯವಸ್ಥೆಯಲ್ಲಿ ಮುಳುಗಿರುವ ನಾವುಗಳು ಸಾಮರಸ್ಯ ಹಾಗೂ ಸೌಹಾರ್ದತೆಗೆ ಹೆಸರಾದ ಶರೀಫ‌ರು ಹಾಗೂ ಗೋವಿಂದಭಟ್ಟರಂತಹ ಮಹನೀಯರ ಅಧ್ಯಯನ ನಡೆಸಿ, ಅವರ ಸಂದೇಶಗಳನ್ನು ಪಾಲಿಸಬೇಕಿದೆ ಎಂದರು. 

ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಮಾತನಾಡಿ, ಕಳಸದ ಗುರು ಗೋವಿಂದ ಭಟ್ಟರು ಹಾಗೂ ಸಂತ ಶಿಶುನಾಳ ಶರೀಫ‌ರು ಧಾರ್ಮಿಕ ಸಮನ್ವಯ ಮತ್ತು ಧಾರ್ಮಿಕ ಸಾಮರಸ್ಯಕ್ಕೆ ಉತ್ತಮ ನಿದರ್ಶನರಾಗಿದ್ದಾರೆ. ದೇಶದ ಇಂದಿನ ಕಲುಷಿತ ವಾತಾವರಣದಲ್ಲಿ ಪರಸ್ಪರ ಪ್ರೇಮ, ಸೌಹಾರ್ದತೆ ಬೆಳೆಸುವ ಸಂದೇಶವನ್ನು ಅವರು ನೀಡಿದ್ದಾರೆ ಎಂದು ಹೇಳಿದರು. 

ಜಗತ್ತಿನ ಎಲ್ಲ ಸಂತರ ಸಂದೇಶ ಒಂದೇ ಪರಮಾತ್ಮನಲ್ಲಿ ಭಕ್ತಿ ಮತ್ತು ಸಮಾಜದಲ್ಲಿ ಪ್ರೇಮ. ಭಯೋತ್ಪಾದನೆ, ಆತಂಕವಾದವನ್ನು ದಯೆ ಮತ್ತು ಅನುಕಂಪದಿಂದ ಗೆಲ್ಲಬೇಕಿದೆ. ಎಲ್ಲರನ್ನೂ ತನ್ನವರನ್ನಾಗಿ ನೋಡುವಂತ ಮನಸ್ಥಿತಿ ಬೆಳೆಸಿಕೊಳ್ಳಬೇಕಿದ್ದು, ಬಸವಣ್ಣ, ಮಧ್ವಾಚಾರ್ಯ, ಗೌತಮಬುದ್ಧ ಎಲ್ಲರನ್ನೂ ಪ್ರೀತಿಸುವುದನ್ನು ರೂಢಿಸಿಕೊಳ್ಳಬೇಕಿದೆ ಎಂದು ತಿಳಿಸಿದರು.

ಬೆಂಗಳೂರು ಮಹಾಧರ್ಮಾಧ್ಯಕ್ಷ ಡಾ.ಪೀಟರ್‌ ಮಚಾದೋ ಮಾತನಾಡಿ, ಶಿಶುನಾಳ ಶರೀಫ‌ರು ಅಂತರ್ಧಮೀಯ ಸಂತರು. ಅವರ ಸೌಹಾರ್ದತೆ ಬೆಳೆಸುವ ತತ್ವಪದಗಳು ಪ್ರಶಂಸನಾರ್ಹ. ಭಾರತ ಹಲವು ಧರ್ಮಗಳ ದೇಶವಾಗಿದ್ದರೂ ಒಂದೇ ಮನಸ್ಸು, ಒಂದೇ ಹೃದಯ ಹೊಂದಿದೆ. ಸರ್ವಧಮೀಯರು ಇಲ್ಲಿ ಶಾಂತಿ, ನೆಮ್ಮದಿ, ಭಾತೃತ್ವದಿಂದ ನೆಲೆಸಲು ಸಾಧ್ಯವಾಗಿದೆ. ಆದ್ದರಿಂದಲೇ ಪ್ರಪಂಚದಲ್ಲಿ ಭಾರತ ಅತ್ಯುತ್ತಮ ದೇಶವಾಗಿದೆ ಎಂದು ಹೇಳಿದರು.

ಲೋಕಾಯುಕ್ತ ನ್ಯಾ.ವಿಶ್ವನಾಥ ಶೆಟ್ಟಿ, ಸುಪೀಂ ಕೋರ್ಟ್‌ ನಿವೃತ್ತ ನ್ಯಾ.ಎಂ.ಎನ್‌.ವೆಂಕಟಾಚಲಯ್ಯ, ಮಾಜಿ ಸಚಿವರಾದ ಎಚ್‌.ಕೆ.ಪಾಟೀಲ್‌, ಬಿ.ಎಲ್‌.ಶಂಕರ್‌, ನಾಡೋಜ ಡಾ.ಮಹೇಶ್‌ಜೋಶಿ, ನಿವೃತ್ತ ಡಿಜಿಪಿ ಅಜಯ್‌ಕುಮಾರ್‌ ಸಿಂಗ್‌, ಚಿಂತಕ ಡಾ.ಎಂ.ಚಿದಾನಂದಮೂರ್ತಿ, ಗಾಂಧೀ ಸ್ಮಾರಕ ಭವನದ ಡಾ.ವೂಡೇ ಪಿ.ಕೃಷ್ಣ, ನೇ.ಬಾ.ರಾಮಲಿಂಗಶೆಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕಾಶ್ಮೀರದ ಬಾಲಕಿ ಮತ್ತು ಸ್ಥಳೀಯ ಹಿಂದು ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಗಳು ಮಾಡಿದ ಕೃತ್ಯಗಳ ವಿರುದ್ಧ ಹೋರಾಡಬೇಕೇ ಹೊರತು, ಅವರ ಧರ್ಮದ ವಿರುದ್ಧವಲ್ಲ. “ಸರ್ವೇ ಜನಾಃ ಸುಖೀನೋ ಭವಂತು’ ಎಂಬ ಶ್ಲೋಕದಲ್ಲಿ ಹಿಂದು ಸುಖೀನೋ ಭವಂತು ಅಥವಾ ಮುಸ್ಲಿಂ ಸುಖೀನೋ ಭವಂತು ಎಂದು ಹೇಳಿಲ್ಲ. ಈ ಶ್ಲೋಕದಲ್ಲಿ ಜಗತ್ತಿನ ಕುಲಕೋಟಿಗೆ ಸುಖ, ಶಾಂತಿ, ಸಮೃದ್ಧಿಗೆ ಪ್ರಾರ್ಥಿಸಲಾಗಿದೆ. 
-ಕೆ.ಎಂ.ಅಬೂಬಕರ್‌ ಸಿದ್ದೀಕ್‌, ಇಸ್ಲಾಂ ಧರ್ಮಗುರು

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

2-bng

Bengaluru: ನಗರದೆಲ್ಲೆಡೆ ಟ್ರಾಫಿಕ್ ಜಾಮ್‌, ಮೆಜೆಸ್ಟಿಕ್‌ ರಷ್‌! ‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.