ದರೋಡೆ, ಸುಲಿಗೆ ಆರೋಪಿಗೆ ಗುಂಡೇಟು
Team Udayavani, Jun 25, 2019, 3:00 AM IST
ಬೆಂಗಳೂರು: ಬಂಧಿಸಲು ಹೋದ ಪೊಲೀಸರ ಮೇಲೆಯೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಕೊಲೆ ಯತ್ನ , ದರೋಡೆ ಪ್ರಕರಣಗಳ ಅರೋಪಿಗೆ ಬ್ಯಾಟರಾಯನಪುರ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ.
ಮೂಡಲಪಾಳ್ಯ ನಿವಾಸಿ ಕೆ.ರಾಹುಲ್ ಅಲಿಯಾಸ್ ಗೋವಿಂದು(22) ಎಂಬಾತನಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಆತನ ದಾಳಿಯಿಂದ ಹಲ್ಲೆಗೊಳಗಾಗಿದ್ದ ಹೆಡ್ಕಾನ್ಸ್ಟೆಬಲ್ ಪ್ರಕಾಶ್ ಅವರ ಕೈಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರೇಳು ವರ್ಷಗಳಿಂದ ಕೊಲೆ ಯತ್ನ, ದರೋಡೆ, ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ, ಇತ್ತೀಚೆಗೆ ಬ್ಯಾಟರಾಯಪುರ, ಚಾಮರಾಜಪೇಟೆ, ಜ್ಞಾನಭಾರತಿ ವ್ಯಾಪ್ತಿಯಲ್ಲಿ ತನ್ನ ಸಹಚರರ ಜತೆ ಸೇರಿಕೊಂಡು ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಅಡ್ಡಗಡ್ಡಿ ಸುಲಿಗೆ ಮಾಡುತ್ತಿದ್ದ.
ಆತನ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 15ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಮೂರು ದಿನಗಳ ಹಿಂದೆ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದ ರಾಹುಲ್,ತನ್ನ ಸಹಚರರ ಜತೆ ತಡರಾತ್ರಿವರೆಗೆ ಕಂಠಪೂರ್ತಿ ಮದ್ಯ ಸೇವಿಸಿ ಚಾಮರಾಜಪೇಟೆ ಮತ್ತು ಬ್ಯಾಟರಾಯಪುರದಲ್ಲಿ ಸುತ್ತಾಡುತ್ತ ಸಿಕ್ಕಸಿಕ್ಕವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಸುಲಿಗೆ ಮಾಡಿದ್ದಾನೆ.
ನಾಲ್ಕು ಬೇಕರಿಗಳನ್ನು ಮಾರಕಾಸ್ತ್ರಗಳಿಂದ ಧ್ವಂಸ ಮಾಡಿ, ಭಯದ ವಾತಾವರಣ ಸೃಷ್ಟಿಸಿದ್ದ. ಇದನ್ನು ಗಂಭೀರವಾಗಿ ಪರಿಗಣಿಸಿದ ಪಶ್ಚಿಮ ವಲಯ ಹಿರಿಯ ಪೊಲೀಸ್ ಅಧಿಕಾರಿಗಳು ಆರೋಪಿ ಪತ್ತೆಗೆ ವಿಶೇಷ ತಂಡ ರಚಿಸಿದ್ದರು.
ಆರೋಪಿ ಎಡಗಾಲಿಗೆ ಗುಂಡೇಟು: ಎರಡು ದಿನಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ರಾಹುಲ್ ಸೋಮವಾರ ಮುಂಜಾನೆ ಆರು ಗಂಟೆ ಸುಮಾರಿಗೆ ಜ್ಞಾನಭಾರತಿ ಠಾಣಾ ವ್ಯಾಪ್ತಿಯ ಚಿಕ್ಕಬಸ್ತಿ ಸಮೀಪದಲ್ಲಿ ಅಡಗಿಕೊಂಡಿದ್ದ.
ಈ ಮಾಹಿತಿ ಪಡೆದ ಬ್ಯಾಟರಾಯನಪುರ ಪೊಲೀಸರು, ಕೂಡಲೇ ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಲು ಮುಂದಾಗಿದ್ದಾರೆ. ಪೊಲೀಸರನ್ನು ಕಂಡ ರಾಹುಲ್ ಸ್ಥಳದಿಂದ ಪರಾರಿಯಾಗಲು ಯತ್ನಿಸಿ, ಹೆಡ್ಕಾನ್ಸ್ಟೆಬಲ್ ಪ್ರಕಾಶ್ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ. ಪರಿಣಾಮ ಪ್ರಕಾಶ್ ಕೈಗೆ ಗಾಯವಾಗಿದೆ.
ಈ ವೇಳೆ ಬ್ಯಾಟರಾಯನಪುರ ಠಾಣೆ ಇನ್ಸ್ಪೆಕ್ಟರ್ ಮಾರಕಾಸ್ತ್ರಗಳನ್ನು ಕೆಳಗಿಟ್ಟು ಶರಣಾಗುವಂತೆ ಸೂಚಿಸಿ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ ಆರೋಪಿ ಮತ್ತೂಮ್ಮೆ ಹಲ್ಲೆಗೆ ಮುಂದಾದಾಗ ಆತ್ಮರಕ್ಷಣೆಗಾಗಿ ತಮ್ಮ ರಿವಾಲ್ವರ್ನಿಂದ ಆರೋಪಿಯ ಎಡಗಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ನಂತರ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.