ಶ್ರೇಷ್ಠ ಕಲಾವಿದರ ತಯಾರಿಗೆ ಗುರುಕುಲ ಪರಂಪರೆ ಅಗತ್ಯ


Team Udayavani, Apr 22, 2018, 12:17 PM IST

shreshta.jpg

ಬೆಂಗಳೂರು: ಗುರುಕುಲ ಪರಂಪರೆಯು ಸಂಗೀತ ಕಲಿಕೆಗೆ ಉತ್ತಮ ಮಾದರಿಯಾಗಿದ್ದು, ಇದರಿಂದ ಶ್ರೇಷ್ಠ ಕಲಾವಿದರು ಹೊರಹೊಮ್ಮುತ್ತಾರೆ ಎಂದು ಹಿಂದೂಸ್ತಾನಿ ಗಾಯಕ ಪಂಡಿತ್‌ ಗಣಪತಿ ಭಟ್‌ ಹಾಸಣಗಿ ತಿಳಿಸಿದರು.

ನಗರದ ಜೆ.ಸಿ ರಸ್ತೆಯ ಕನ್ನಡ ಭವನದ ನಯನ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದ್ದ ಮನೆಯಂಗಳದಲ್ಲಿ ಮಾತುಕತೆ ಕಾರ್ಯಕ್ರಮಕ್ಕೆ ತಿಂಗಳ ಅತಿಥಿಯಾಗಿ ಆಗಮಿಸಿ ಮಾತನಾಡಿದ ಅವರು, ಸಂಗೀತವನ್ನು ಯಾರೋ ಬೋಧಿಸಿ ಕಲಿಸಲು ಸಾಧ್ಯವಿಲ್ಲ.

ಅದು ನಿರಂತರ ಕಲಿಕೆ ಹಾಗೂ ಉತ್ತಮ ವಾತಾವರಣ ಮಾತ್ರ ಫ‌ಲಿಸುತ್ತದೆ. ಅದರಂತೆಯೇ ನಾನು ಕಳೆದ 50 ವರ್ಷಗಳಿಗಿಂತಲೂ ಹೆಚ್ಚಿನ ನನ್ನ ಸಂಗೀತ ಪಯಣದಲ್ಲಿ ನಿರಂತರ ಕಲಿಕೆ ಹಾಗೂ ಹೊಸ ಹೊಸ ಪ್ರಯತ್ನಗಳನ್ನು ಮಾಡುತ್ತಲೇ ಈ ಸ್ಥಾನ ತಲುಪಿದ್ದೇನೆ ಎಂದು ತಿಳಿಸಿದರು.

ಭಾರತದ ಇತರೆ ಭಾಗಗಳಿಗೆ ಹೋಲಿಸಿದರೆ ಹಿಂದೂಸ್ತಾನಿ ಸಂಗೀತಕ್ಕೆ ಕರ್ನಾಟಕದವರ ಕೊಡುಗೆ ಹೆಚ್ಚಿದೆ. ಇನ್ನು ದೇಶದಲ್ಲಿ ಮೊದಲು ಕರ್ನಾಟಕ ಸರ್ಕಾರ ಧಾರವಾಡದಲ್ಲಿ ಸಂಗೀತ ಕಲಿಕೆಗೆ ಗುರುಕುಲ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟಿದ್ದು, ಇಲ್ಲಿ ಯಾವುದೇ ಪಠ್ಯಪುಸ್ತಕ, ಪರೀಕ್ಷೆಗಳ ಗೋಜು ಇರುವುದಿಲ್ಲ.

ಇದರಿಂದ ಉತ್ತಮ ಸಂಗೀತಗಾರರು ರೂಪುಗೊಳ್ಳುತ್ತಾರೆ ಇದೊಂದು ಸ್ವಾಗತರ್ಹ ನಡೆ ಎಂದರು. ಇಷ್ಟು ದಿನಗಳ ನನ್ನ ಸಂಗೀತ ಪಯಣದಲ್ಲಿ 1985ರಲ್ಲಿ ಪೂಣೆಯಲ್ಲಿ ಭೀಮಸೇನ್‌ ಜೋಷಿಯವರ ಎದುರಲ್ಲಿ ನಡೆದ ಸವಾಯಿ ಗಂಧರ್ವ ಸಮ್ಮೇಳನ ನನ್ನ ಜೀವನಕ್ಕೆ ತಿರುವು ಕೊಟ್ಟಿತು.

ಆ ಕಾರ್ಯಕ್ರಮದಿಂದಲೇ ನಾನು ದೇಶ ವಿದೇಶಗಳಲ್ಲಿ ಪರಿಚಿತನಾದೆ. ಇನ್ನು ಈ ಸಂದರ್ಭದಲ್ಲಿ ಗುರುಗಳಾದ ಬಸವರಾಜ ರಾಜಗುರು ಅವರೊಟ್ಟಿಗೆ ಕಳೆದ ಹಳೆಯ ನೆನಪುಗಳನ್ನು ಅವರು ಮೆಲುಕು ಹಾಕಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎನ್‌.ಆರ್‌.ವಿಶುಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

5

Bengaluru Rain: ಮಳೆಗೆ 4 ಬಡಾವಣೆ ನಿವಾಸಿಗಳ ಗುಳೆ!

3

Bengaluru Airport: ನಗರದಲ್ಲಿ ಶೀಘ್ರವೇ ಏರ್‌ಟ್ಯಾಕ್ಸಿ ಸೇವೆ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.