ಎಚ್‌ಎಎಲ್‌ ಯುದ್ಧ ವಿಮಾನ ಮೊದಲ ಬಾರಿಗೆ ಪ್ರದರ್ಶನ 


Team Udayavani, Feb 11, 2023, 1:00 PM IST

tdy-9

ಬೆಂಗಳೂರು: ಪ್ರತಿಷ್ಠಿತ ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿ., (ಎಚ್‌ಎಎಲ್‌) ಇದೇ ಮೊದಲ ಬಾರಿಗೆ “ಏರೋ ಇಂಡಿಯಾ ಶೋ- 2023’ರಲ್ಲಿ ತರಬೇತಿ ಯುದ್ಧ ವಿಮಾನ “ಹಿಂದೂಸ್ತಾನ್‌ ಲೀಡ್‌ ಇನ್‌ ಫೈಟರ್‌ ಟ್ರೈನರ್‌- 42′ (ಎಚ್‌ಎಲ್‌ಎಫ್ಟಿ) ಪ್ರದರ್ಶಿಸಲಿದೆ.

ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ಮುಂದಿನ ತಲೆಮಾರಿನ ಸೂಪರ್‌ಸಾನಿಕ್‌ ತರಬೇತಿ ಯುದ್ಧವಿಮಾನವು “ಆತ್ಮನಿರ್ಭರ’ ಪರಿಕಲ್ಪನೆ ಅಡಿ ತನ್ನ ಸಾಮರ್ಥ್ಯ ಪ್ರದರ್ಶನ ಮಾಡಲಿದೆ. ಸಂಪೂರ್ಣ ಸಾಮರ್ಥ್ಯದೊಂದಿಗೆ ಇದೇ ಮೊದಲ ಬಾರಿಗೆ ಇದು ಪ್ರದರ್ಶನ ನೀಡುತ್ತಿದೆ.

ಈ ಎಚ್‌ಎಲ್‌ಎಫ್ಟಿ-42 ಎಲೆಕ್ಟ್ರಾನಿಕ್‌ ವಾರ್‌ಫೇರ್‌, ಇನ್‌ಫ್ರಾರೆಡ್‌ ಸರ್ಚ್‌ ಆಂಡ್‌ ಟ್ರ್ಯಾಕ್‌ (ಐಆರ್‌ಎಸ್‌ಟಿ) ಮತ್ತಿತರ ಸುಧಾರಿತ ತಂತ್ರಜ್ಞಾನಗಳನ್ನು ಒಳಗೊಂಡಿದೆ. ಇದರ ಜತೆಗೆ ಆತ್ಮನಿರ್ಭರ ಪರಿಕಲ್ಪನೆಯಲ್ಲಿ “ಪ್ರಚಂಡ’ ಹೆಲಿಕಾಪ್ಟರ್‌ ತಂಡ ಸೇರಿದಂತೆ ವಿವಿಧ ಪ್ರಕಾರಗಳ 15 ಹೆಲಿಕಾಪ್ಟರ್‌ಗಳ ಪ್ರದರ್ಶನ ಕೂಡ ಈ ಬಾರಿಯ “ಏರೋ ಇಂಡಿಯಾ ಶೋ’ದ ಪ್ರಮುಖ ಆಕರ್ಷಣೆ ಆಗಿರಲಿದೆ. ಇದರಲ್ಲಿ ಸುಧಾರಿತ ಲಘು ಹೆಲಿಕಾಪ್ಟರ್‌ (ಎಎಲ್‌ಎಚ್‌), ಹಗುರ ಯುದ್ಧ ವಿಮಾನ (ಎಲ್‌ಸಿಎಚ್‌), ಲಘು ಬಹುಪಯೋಗಿ ಹೆಲಿಕಾಪ್ಟರ್‌ (ಎಲ್‌ಯುಎಚ್‌) ಹೆಲಿಕಾಪ್ಟರ್‌ ಗಳು ಇರಲಿವೆ. ಇನ್ನು ಎರಡು ಆಸನವುಳ್ಳ ಲಘು ಯುದ್ಧ ವಿಮಾನ (ಎಲ್‌ಸಿಎ), ಹಾಕ್‌- ಐ, ಇಂಟರ್‌ಮೀಡಿಯಟ್‌ ಜೆಟ್‌ ಟ್ರೈನರ್‌ (ಐಜೆಟಿ), ಹಿಂದೂಸ್ತಾನ್‌ ಟರ್ಬೋ ಟ್ರೈನರ್‌- 40 (ಎಚ್‌ಟಿಟಿ) ಯುದ್ಧ ವಿಮಾನ ಕೂಡ ಪ್ರದರ್ಶನ ನೀಡಲಿವೆ. ಈ ಮಧ್ಯೆ ಮಳಿಗೆಗಳಲ್ಲಿ ಎಚ್‌ಎಎಲ್‌ ಮಳಿಗೆಯು ಈವರೆಗೆ ವೈಮಾನಿಕ ಕ್ಷೇತ್ರದಲ್ಲಿ ತನ್ನ ಕೊಡುಗೆಗಳನ್ನು ಪ್ರದರ್ಶಿಸಲಿದೆ. ಎಚ್‌ಎಲ್‌ ಎಫ್ಟಿ- 42, ಎಲ್‌ಸಿಎ ಮಾಕ್‌- 2, ಭಾರತೀಯ ಬಹುಪಯೋಗಿ ಹೆಲಿಕಾಪ್ಟರ್‌ (ಐಎಂಆರ್‌ಎಚ್‌), ಎಎಲ್‌ಎಚ್‌, ದೇಶೀಯ ನಿರ್ಮಿತ ತೇಜಸ್‌, ಮಾನವರಹಿತ ವಾಹನ ಮತ್ತಿತರ ತಂತ್ರಜ್ಞಾನಗಳು ಕೂಡ ಇಲ್ಲಿ ವೀಕ್ಷಕರನ್ನು ಆಕರ್ಷಿಸಲಿವೆ ಎಂದು ಪ್ರಕಟಣೆ ತಿಳಿಸಿದೆ.

ಸುಧಾರಿತ ಲಘು ಹೆಲಿಕಾಪ್ಟರ್‌ ಮಾರಿಷಸ್‌ಗೆ ಹಸ್ತಾಂತರ : ಎಚ್‌ಎಎಲ್‌ ಯಶಸ್ವಿಯಾಗಿ ತಯಾರಿಸಿದ ಸುಧಾರಿತ ಲಘು ಹೆಲಿಕಾಪ್ಟರ್‌ (ಎಎಲ್‌ಎಚ್‌) ಅನ್ನು ಶುಕ್ರವಾರ ಮಾರಿಷಿಸ್‌ಗೆ ಹಸ್ತಾಂತರಿಸಿತು. ಮಾರಿಷಿಸ್‌ ಸರ್ಕಾರದ ಹೆಲಿಕಾಪ್ಟರ್‌ ವಿಭಾಗದಲ್ಲಿ ಎಚ್‌ ಎಎಲ್‌ನ ಪ್ರಧಾನ ವ್ಯವಸ್ಥಾಪಕ ನಿಖೀಲ್‌ ದ್ವಿವೇದಿ ಎಎಲ್‌ಎಚ್‌ಗೆ ಸಂಬಂಧಿಸಿದ ಪ್ರಮಾಣಪತ್ರವನ್ನು ಮಾರಿಷಿಸ್‌ ಪೊಲೀಸ್‌ ಆಯುಕ್ತ ಎ.ಕೆ. ದೀಪ್‌ ಅವರಿಗೆ ಹಸ್ತಾಂತರಿಸಿದರು.

ಈ ವೇಳೆ ಎಚ್‌ಎಎಲ್‌ ನ ನಿರ್ದೇಶಕ (ಕಾರ್ಯಾಚರಣೆ) ಇ.ಪಿ. ಜಯದೇವ ಇತರರಿದ್ದರು.

ಈ ವೇಳೆ ಮಾತನಾಡಿದ ಇ.ಪಿ. ಜಯದೇವ, “ನಿಗದಿತ ಅವಧಿಗೂ ಮೊದಲೇ ಎಎಲ್‌ಎಚ್‌ ಅನ್ನು ಮಾರಿಷಿಸ್‌ಗೆ ಹಸ್ತಾಂತರಿಸಲಾಗಿದೆ. ರಕ್ಷಣಾ ರಫ್ತು ವಿಸ್ತರಿಸುವುದು ಭಾರತದ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ದಾಪುಗಾಲು ಇಡುತ್ತಿದೆ. ಮಾರಿಷಿಸ್‌ಗೆ ಎಎಲ್‌ಎಚ್‌ ಹಸ್ತಾಂತರ ಅದರ ಒಂದು ಭಾಗವಾಗಿದೆ. ಈ ಮೂಲಕ ನೆರೆ ರಾಷ್ಟ್ರಗಳೊಂದಿಗಿನ ಸಂಬಂಧ ಮತ್ತಷ್ಟು ಗಟ್ಟಿಗೊಳ್ಳಲಿದೆ’ ಎಂದು ತಿಳಿಸಿದರು.

ಟಾಪ್ ನ್ಯೂಸ್

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Bhairadevi Review; ಅಘೋರಿ ಹಿಂದೆ ಘೋರ ಕಥನ

Bhairadevi Review; ಅಘೋರಿ ಹಿಂದೆ ಘೋರ ಕಥನ

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ಮೃತ್ಯು

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ

3-gangavathi-3

Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-bng

Bengaluru: ಬಿಡಿಎಗೆ ವಂಚನೆ: 19 ಮಂದಿ ವಿರುದ್ಧ ಕೇಸ್‌

Bengalru-Bomb

Bomb Threat: ಬೆಂಗಳೂರು ನಗರದ ಪ್ರತಿಷ್ಠಿತ ಮೂರು ಕಾಲೇಜುಗಳಿಗೆ ಬಾಂಬ್‌ ಬೆದರಿಕೆ!

Manipal Hospital has set a new Guinness World Record by performing 3,319 CPRs in just 24 hours!

24 ಗಂಟೆಗಳಲ್ಲಿ 3,319 ಸಿಪಿಆರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ಮಣಿಪಾಲ್‌ ಆಸ್ಪತ್ರೆ

7-bng

Bengaluru ನಗರದಲ್ಲಿ ಸಂಭ್ರಮದ ನವರಾತ್ರಿ, ವಿಶೇಷ ಪೂಜೆ

6-darshan

Darshan Bail: ಇಂದು ದರ್ಶನ್‌ ಜಾಮೀನು ಅರ್ಜಿ ವಿಚಾರಣೆ: ಕುತೂಹಲ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Gopilola Movie Review

Gopilola Movie Review: ಹೆಣ್ಣು ಮಣ್ಣಿನ ಮಧ್ಯೆ ಗೋಪಿ ಆಟ

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

5-bng

Bengaluru: ಬಿಡಿಎಗೆ ವಂಚನೆ: 19 ಮಂದಿ ವಿರುದ್ಧ ಕೇಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.