ಹಾಲಪ್ಪ ಜತೆ ಬಿಎಸ್‌ವೈ ಸಂಧಾನ


Team Udayavani, Apr 3, 2018, 6:15 AM IST

BSY–88885.jpg

ಬೆಂಗಳೂರು: ಸಾಗರ ವಿಧಾನಸಭೆ ಕ್ಷೇತ್ರದ ಟಿಕೆಟ್‌ ವಿಚಾರವಾಗಿ ಎರಡು ದಿನಗಳಿಂದ ಪಕ್ಷದ ಮುಖಂಡರ ಸಂಪರ್ಕಕ್ಕೂ ಸಿಗದೆ ಮುನಿಸಿಕೊಂಡಿದ್ದ ಮಾಜಿ ಸಚಿವ ಹರತಾಳು ಹಾಲಪ್ಪ ಅವರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಸೋಮವಾರ ಸಂಧಾನ ಮಾತುಕತೆ ನಡೆಸಿದರು.

ಸಂಸದೆ ಶೋಭಾ ಕರಂದ್ಲಾಜೆ ಮಧ್ಯಸ್ಥಿಕೆಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಸಾಗರ ಕ್ಷೇತ್ರದ ಸ್ಥಿತಿಗತಿ, ಲೆಕ್ಕಾಚಾರದ ಬಗ್ಗೆ ಹಾಲಪ್ಪ ಆವರಿಗೆ ಮನವರಿಕೆ ಮಾಡಿಕೊಟ್ಟು ನಿಮಗೆ ಟಿಕೆಟ್‌ ಕೊಟ್ಟರೆ ಗೆಲುವು ಕಷ್ಟ ಎಂಬುದು ಪಕ್ಷ ನಡೆಸಿದ ಆಂತರಿಕ ಸಮೀಕ್ಷೆಯಲ್ಲಿ ಗೊತ್ತಾಗಿದೆ. ಹೀಗಾಗಿ, ಸ್ಪರ್ಧೆ ಮಾಡದೆ ಪಕ್ಷದ ಅಭ್ಯರ್ಥಿ ಯಾರೇ ಆದರೂ ಕೆಲಸ ಮಾಡಿ , ಮುಂದೆ ಭವಿಷ್ಯ ಇದೆ ಎಂದು ಭರವಸೆ ನೀಡಿದರು.

ಕಷ್ಟ ಕಾಲದಲ್ಲಿ ನಿಮ್ಮ ಜತೆ ಪಕ್ಷ ನಿಂತಿತ್ತು.  ಇದೀಗ ನೀವು ಬೇರೆ ಪಕ್ಷಕ್ಕೆ ಹೋದರೆ  ಮತದಾರರಿಗೆ ಬೇರೆ ಸಂದೇಶ ರವಾನೆಯಾಗುತ್ತದೆ. ರಾಜಕೀಯವಾಗಿಯೂ ನಿಮಗೆ ಹಿನ್ನೆಡೆಯಾಗುತ್ತದೆ ಎಂಬ ಕಿವಿಮಾತು ಸಹ ಯಡಿಯೂರಪ್ಪ ಹೇಳಿದರು ಎನ್ನಲಾಗಿದೆ.

ಆದರೆ, ಯಾವುದರ ಬಗ್ಗೆಯೂ ಸ್ಪಷ್ಟವಾಗಿ ಮಾತನಾಡಿದ ಹಾಲಪ್ಪ, ಮೌನವಾಗಿದ್ದು ಪಕ್ಷದ ಕೆಲಸ ಮಾಡುತ್ತೇನೆ ಎಂದು ಹೇಳಿ ವಾಪಸ್ಸಾದರು. ಹೀಗಾಗಿ, ಹಾಲಪ್ಪ ಬಹುತೇಕ ಪಕ್ಷದಲ್ಲೇ ಉಳಿಯಬಹುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಮಾತುಕತೆ ಬಳಿಕ ಪ್ರತಿಕ್ರಿಯೆ ನೀಡಿದ ಹಾಲಪ್ಪ, ಮಾತುಕತೆಯಿಂದ ನನಗೆ ಸಂತೋಷವಾಗಿದ್ದು, ಬಿ.ಎಸ್‌.ಯಡಿಯೂರಪ್ಪ ಅವರು ಮಾತನಾಡಿದ ಬಳಿಕ ನಾನು ಮಾತನಾಡುತ್ತೇನೆ. ಆದರೆ ಟಿಕೆಟ್‌ ಬಗ್ಗೆ ಏನೂ ಹೇಳುವುದಿಲ್ಲ ಎಂದಷ್ಟೇ ಹೇಳಿದರು.

ಬಿಜೆಪಿ ಪರ ಪ್ರಚಾರ ನಡೆಸುವಿರಾ? ಬೇರೆ ಪಕ್ಷ ಸೇರುವಿರಾ ಎಂಬ ಪ್ರಶ್ನೆಗೆ  ಎಂಬ ಪ್ರಶ್ನೆಗೆ ಉತ್ತರಿಸದ ಹಾಲಪ್ಪ, ಕಾಂಗ್ರೆಸ್‌ನ ಹಲವು ನಾಯಕರ ಪರಿಚಯವಿದೆ. ಕಾಗೋಡು ತಿಮ್ಮಪ್ಪ ಅವರು ದೂರವಾಣಿ ಮೂಲಕ ವಿಚಾರಿಸಿದರು. ಟಿಕೆಟ್‌ ವಿಚಾರಕ್ಕೆ ಬೇಸರವಾಗಿತ್ತು. ದೇವಸ್ಥಾನಕ್ಕೆ ಹೋಗಿ ಬಂದ ಬಳಿಕ ಬೇಸರ ಕಡಿಮೆಯಾಗಿದೆ. ನಾನು ಬೇರೆಯವರಂತೆ ಮುತ್ಸದ್ಧಿ ರೀತಿ ಮಾತನಾಡುವುದಿಲ್ಲ ಎಂದು ತಿಳಿಸಿದರು.

ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಹಾಲಪ್ಪ ಬದ್ಧರಾಗಿರಲಿದ್ದಾರೆ. ಅವರ ಕಷ್ಟ ಸುಖಗಳಲ್ಲಿ ನಾವು ಜೊತೆಯಲ್ಲಿದ್ದೇವೆ. ಅವರು ನಮ್ಮನ್ನು ಬಿಟ್ಟು ಹೋಗುವುದಿಲ್ಲ ಎಂಬ ನಂಬಿಕೆ ಇದೆ. ಮಂಗಳವಾರದಿಂದ ಕ್ಷೇತ್ರದಲ್ಲಿ ಹಾಲಪ್ಪ ಪ್ರಚಾರ ಕಾರ್ಯ ಆರಂಭಿಸಲಿದ್ದಾರೆ.
– ಸಂಸದೆ ಶೋಭಾ ಕರಂದ್ಲಾಜೆ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.