Arrested: ಭಜನೆ ಕೇಸ್‌; ಹಲ್ಲೆ ಮಾಡಿದ ಅಪ್ರಾಪ್ತ ಸೇರಿ 6 ಮಂದಿ ಬಂಧನ


Team Udayavani, Mar 20, 2024, 9:56 AM IST

Arrested: ಭಜನೆ ಕೇಸ್‌; ಹಲ್ಲೆ ಮಾಡಿದ ಅಪ್ರಾಪ್ತ ಸೇರಿ 6 ಮಂದಿ ಬಂಧನ

ಬೆಂಗಳೂರು: ಬೆಂಗಳೂರಿನ ನಗರ್ತಪೇಟೆಯ ಅಂಗಡಿಯಲ್ಲಿ ಹನುಮಾನ್‌ ಚಾಲೀಸಾ ಹಾಕಿದ ಮೊಬೈಲ್‌ ಅಂಗಡಿ ಮಾಲೀಕನಿಗೆ ಹಲ್ಲೆ ನಡೆಸಿದ ಅಪ್ರಾಪ್ತ ಸೇರಿ ದಂತೆ ಆರು ಮಂದಿಯನ್ನು ಹಲಸೂರು ಗೇಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಬ್ಬನ್‌ಪೇಟೆ ನಿವಾಸಿ ಸುಲೇಮಾನ್‌, ಶಹನವಾಜ್‌, ರೋಹಿತ್‌, ಡ್ಯಾನಿಷ್‌, ತರುಣ್‌ ಅಲಿಯಾಸ್‌ ದಡಿಯಾ ಹಾಗೂ ಮತ್ತೋರ್ವ ಅಪ್ರಾಪ್ತ ಬಾಲಕನನ್ನು ಬಂಧಿಸಲಾಗಿದೆ. ಬಂಧಿತ ಐವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು ಸದ್ಯ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ. ಅಪ್ರಾಪ್ತನೊಬ್ಬನನ್ನು ಬಾಲ ಮಂದಿರಕ್ಕೆ ಕಳುಹಿಸಲಾಗಿದೆ ಎಂದು ಹಲಸೂರು ಗೇಟ್‌ ಠಾಣೆ ಪೊಲೀಸರು ತಿಳಿಸಿದ್ದಾರೆ.

ಕೃತ್ಯ ನಡೆದ ಸ್ಥಳದಲ್ಲಿದ್ದ ಸಿಸಿ ಕ್ಯಾಮೆರಾ ದೃಶ್ಯ ಆಧರಿಸಿ ಮೂವರು ಆರೋಪಿಗಳನ್ನು ಮೊದಲು ಬಂಧಿಸಲಾಗಿತ್ತು. ನಂತರ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ವಿಚಾರಣೆ ವೇಳೆ ಹಲ್ಲೆ ನಡೆಸಿರುವುದರನ್ನು ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸ್‌ ಮೂಲ ತಿಳಿಸಿವೆ.

ತನಿಖೆಯಲ್ಲಿ ತಿಳಿದು ಬಂದಿದ್ದು ಏನು ?: ಭಾನುವಾರ ಸಂಜೆ 6.15ರಲ್ಲಿ ಆರು ಆರೋಪಿಗಳು ನಗರ್ತ ಪೇಟೆಯಲ್ಲಿ ಮಸೀದಿ ಕಡೆಗೆ ಹೋಗುತ್ತಿದ್ದರು. ಮಾರ್ಗ ಮಧ್ಯೆ ಕೃಷ್ಣಾ ಟೆಲಿಕಾಂ ಮುಂದೆ ಹಾದು ಹೋಗಿದ್ದರು. ಅಲ್ಲಿ ಮುಖೇಶ್‌ ತನ್ನ ಮೊಬೈಲ್‌ ಅಂಗಡಿಯಲ್ಲಿ ಜೋರಾದ ಶಬ್ಧದಲ್ಲಿ ಭಕ್ತಿಗೀತೆ ಹಾಕಿದ್ದ. ಇದನ್ನು ಕೇಳಿದ ಆರೋಪಿಗಳು ಆತನ ಅಂಗಡಿಗೆ ತೆರಳಿ ಸೌಂಡ್‌ ಕಡಿಮೆ ಮಾಡುವಂತೆ ಸೂಚಿಸಿದ್ದರು.

ಈ ವೇಳೆ ಆಕ್ರೋಶಗೊಂಡ ಮುಖೇಶ್‌ ನಾನು ಯಾಕೆ ಸೌಂಡ್‌ ಕಡಿಮೆ ಮಾಡಲಿ? ನನ್ನ ಅಂಗಡಿ, ನನ್ನ ಇಷ್ಟ ಎಂದು ಹೇಳಿದ್ದಾನೆ. ಮಸೀದಿಯಲ್ಲಿ ಆಜಾನ್‌ ಕೂಗುತ್ತಾರೆ. ಹೀಗಾಗಿ ಶಬ್ಧ ಕಡಿಮೆ ಮಾಡುವಂತೆ ಹೇಳಿದ್ದರು. ಆಗ ತಾನು ಕಡಿಮೆ ಮಾಡಲ್ಲ ಸ್ಪೀಕರ್‌ ಸೌಂಡ್‌ ಜೋರಾಗಿ ಇಟ್ಟರೆ ಜನರಿಗೆ ಗೊತ್ತಾಗುವುದು ಎಂದು ಮುಖೇಶ್‌ ಮಾತಿನ ತಿರುಗೇಟು ನೀಡಿದ್ದ. ಈ ವಿಚಾರವಾಗಿ ಮುಖೇಶ್‌ ಮತ್ತು ಆರೋಪಿಗಳ ನಡುವೆ ಮಾತಿನ ಚಕಮಕಿ ನಡೆದಿದೆ.

ಆರೋಪಿಗಳಲ್ಲಿ ಪೈಕಿ ಓರ್ವ ಮುಖೇಶ್‌ ಕೊರಳ ಪಟ್ಟಿ ಹಿಡಿದು ಒಂದೇಟು ಹೊಡೆದು ಎಚ್ಚರಿಕೆ ಕೊಟ್ಟಿದ್ದ. ಇದಕ್ಕೆ ಮುಖೇಶ್‌ ಪ್ರತಿರೋಧ ತೋರಿದಾಗ ಆರೋಪಿಗಳ ಗುಂಪು ಮುಖೇಶ್‌ನನ್ನು ಹೊರಗೆ ಏಳೆದುಕೊಂಡು ಹೋಗಿ ಹಲ್ಲೆ ಮಾಡಿದೆ ಎಂಬುದು ಆರೋಪಿಗಳ ವಿಚಾರಣೆ ನಡೆಸಿದಾಗ ಪೊಲೀಸ್‌ ತನಿಖೆಯಲ್ಲಿ ಕಂಡು ಬಂದಿದೆ.

ಇನ್ನು ಮುಖೇಶ್‌ ಕಳೆದ ಮೂರು ತಿಂಗಳ ಹಿಂದೆ ಮೊಬೈಲ್‌ ಅಂಗಡಿ ತೆರೆದಿದ್ದ. ಈ ಹಿಂದೆಯೂ ಚಾರ್ಜರ್‌ ವಿಚಾರಕ್ಕೆ ಕೆಲವು ಹುಡುಗರು ಹಾಗೂ ಮುಖೇಶ್‌ ನಡುವೆ ಸಣ್ಣ ಜಗಳ ನಡೆದಿತ್ತು ಎಂದು ತಿಳಿದು ಬಂದಿದೆ.

ಅಪರಾಧ ಹಿನ್ನೆಲೆಯುಳ್ಳ ಆರೋಪಿಗಳು? :

ಪ್ರಮುಖ ಆರೋಪಿ ಸುಲೇಮಾನ್‌ ಬಾಡಿಗೆ ವಾಹನದಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ. ಸುಲೈಮಾನ್‌ 2018, 2023ರಲ್ಲಿ ಅಪಹರಣ, ಸುಲಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ. ಷಹನವಾಜ್‌ ಕೆಲಸ ಇಲ್ಲದೇ, ಸಣ್ಣ-ಪುಟ್ಟ ಕೆಲಸ ಹುಡುಕುತ್ತಿದ್ದ. ರೋಹಿತ್‌ ಮೆಡಿಕಲ್‌ ಸ್ಟೋರ್‌ಗಳಿಗೆ ಔಷಧ ಪೂರೈಕೆ ಮಾಡುವ ಕೆಲಸ ಮಾಡುತ್ತಿದ್ದ. ತರುಣ್‌ ಖಾಸಗಿ ಆಸ್ಪತ್ರೆಯೊಂದರಲ್ಲಿ ವಾರ್ಡ್‌ ಬಾಯ್‌ ಆಗಿದ್ದ. ಡ್ಯಾನಿಷ್‌ ಸಣ್ಣ-ಪುಟ್ಟ ಕೆಲಸ ಮಾಡುತ್ತಿದ್ದ. ಸುಲೇಮಾನ್‌ ಮತ್ತು ಗ್ಯಾಂಗ್‌ ಇತ್ತೀಚೆಗೆ ಹೋಟೆಲ್‌ವೊಂದರ ಮಾಲೀಕ ಸತೀಶ್‌ ಎಂಬುವವರ ಮೇಲೆ ಇದೇ ಗ್ಯಾಂಗ್‌ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಆರೋಪಿಗಳ ಪೈಕಿ ಕೆಲವರು ಸತೀಶ್‌ ಅವರ ಹೋಟೆಲ್‌ಗೆ ಹೋಗಿ ಉಚಿತವಾಗಿ ಉಪಹಾರ ಕೊಡುವಂತೆ ದಮ್ಕಿ ಹಾಕಿರುವ ಆರೋಪ ಕೇಳಿ ಬಂದಿದೆ.

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.