ಜನತಾ ಜಲಧಾರೆ : ನಗರದ ಕೆರೆ ನುಂಗಿದವರನ್ನು ಖಾಲಿ ಮಾಡಿಸುತ್ತೇನೆ : ಎಚ್‌ಡಿಕೆ ವಾಗ್ದಾಳಿ


Team Udayavani, May 10, 2022, 10:58 PM IST

hdk

ಬೆಂಗಳೂರು: ಜೆಡಿಎಸ್‌ ಪಕ್ಷ ಅಧಿಕಾರಕ್ಕೆ ಬಂದರೆ ಕೆರೆ-ಕೋಡಿಗಳನ್ನು ನುಂಗಿದವರನ್ನು ಖಾಲಿ ಮಾಡಿಸಿ ಆ ಕೆರೆಗಳಿಗೆ ಗತವೈಭವ ತಂದು ನದಿ ನೀರನ್ನು ತುಂಬಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ನಗರದ ಮಹಾಲಕ್ಷ್ಮೀಲೇಔಟ್‌ನಲ್ಲಿ ಮಂಗಳವಾರ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ನಗರದ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತುಕೊಟ್ಟು, ಜಲಮೂಲಗಳನ್ನು ರಕ್ಷಣೆ ಮಾಡುತ್ತೇವೆ. ಕೆರೆ -ಕೋಡಿಗಳನ್ನು ನುಂಗಿದವರನ್ನು ಖಾಲಿ ಮಾಡಿಸುತ್ತೇನೆ. ಯಾರ ಮನೆ ಬಾಗಲಿಗೂ ನನ್ನನ್ನೂ ಕಳಿಸಬೇಡಿ, ನನ್ನ ಮನೆ ಬಾಗಿಲಿಗೂ ಯಾರು ಬರುವುದಕ್ಕೆ ಬಿಡಬೇಡಿ. ಸ್ವತಂತ್ರ ಸರ್ಕಾರ ನೀಡಿ. ಇದು ನನ್ನ ಕೊನೆ ಹೋರಾಟ, ಒಂದೇಒಂದು ಅವಕಾಶ ಕೊಡಿ ಎಂದು ಅವರು ಮನವಿ ಮಾಡಿದರು.

ನಾನು 25 ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡದೇ ಇದ್ದಿದ್ದರೆ ಎಂಟು ಸಾವಿರ ಕೋಟಿ ರೂ. ಕಮಿಷನ್‌ ಸಿಗುತ್ತಿತ್ತು. ನಾನು ಬೆಂಗಳೂರಿನಲ್ಲಿ ಚರಂಡಿ ಕ್ಲೀನ್‌ ಮಾಡುವುದಕ್ಕೆ, ವೈಟ್‌ ಟ್ಯಾಪಿಂಗ್‌ ಮಾಡುವುದಕ್ಕೆ ಅದೇ ಹಣವನ್ನು ಕೊಟ್ಟು ಕಮಿಷನ್‌ ಪಡೆದಿದ್ದರೆ ಬಿಜೆಪಿ, ಕಾಂಗ್ರೆಸ್‌ಗಿಂತ ಚೆನ್ನಾಗಿ ಚುನಾವಣೆ ಮಾಡಬಹುದಿತ್ತು. ನಮ್ಮ ಶಾಸಕರಿಗೆ ಆ ಹಣವನ್ನು ಹಂಚಿ ಕೊಳ್ಳೆ ಹೊಡೆಯಬಹುದಿತ್ತು. ಈಗ ಬಿಜೆಪಿಯವರು 40% ಕಮಿಷನ್‌ ಹೊಡೆಯುತ್ತಿದ್ದಾರೆ, ಅವರಿಗೆ ನಾಚಿಕೆ ಆಗಬೇಕು ಎಂದು ಕುಮಾರಸ್ವಾಮಿ ವಾಗ್ಧಾಳಿ ನಡೆಸಿದರು.
ರಾಜ್ಯದ ನೀರಾವರಿ ಯೋಜನೆಗಳನ್ನು ಬದ್ಧತೆಯಿಂದ ಜಾರಿ ಮಾಡುವುದು ನಮ್ಮ ಗುರಿ. ನೆನೆಗುದಿಗೆ ಬಿದ್ದಿರುವ ಎಲ್ಲ ಯೋಜನೆಗಳನ್ನು ಅನುಷ್ಠಾನಕ್ಕೆ ತರುತ್ತೇವೆ. ದೇವೇಗೌಡರು ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ದೊಡ್ಡ ಕೊಡುಗೆ ನೀಡಿದ್ದಾರೆ. ಮೆಟ್ರೋ ರೈಲು, ಐಟಿಗೆ ಉತ್ತೇಜನ, 9 ಟಿಎಂಸಿ ಕುಡಿಯುವ ನೀರು ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಕೊಟ್ಟರು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಇದನ್ನೂ ಓದಿ : ಕೊಲ್ಲೂರು ದೇವಸ್ಥಾನ: ದಾಖಲೆಯ 1.53 ಕೋಟಿ ರೂ. ಹುಂಡಿ ಹಣ ಸಂಗ್ರಹ

ಸಚಿವ ಗೋಪಾಲಯ್ಯ ವಿರುದ್ಧ ವಾಗ್ಧಾಳಿ:
ಮಹಾಲಕ್ಷ್ಮೀಲೇಔಟ್‌ ಶಾಸಕ ಹಾಗೂ ಅಬಕಾರಿ ಸಚಿವ ಕೆ. ಗೋಪಾಲಯ್ಯ ವಿರುದ್ಧ ಪರೋಕ್ಷ ವಾಗ್ಧಾಳಿ ನಡೆಸಿದ ಕುಮಾರಸ್ವಾಮಿ, ಈ ಕ್ಷೇತ್ರದಲ್ಲಿ ಒಬ್ಬ ಮಹಾನುಭಾವ ಇದ್ದ. ಆತನಿಗೆ ಎರಡು ಬಾರಿ ಟಿಕೆಟ್‌ ಕೊಟ್ಟೆ. ನನಗೆ ಟೋಪಿ ಹಾಕಿ ಹೋದ. ಸ್ವಾಮೀಜಿ ಒಬ್ಬರು, ಅಂತ ಏನೋ ತಪ್ಪು ಮಾಡಿಕೊಂಡಿದ್ದಾನೆ, ಒಂದು ಬಾರಿ ಟಿಕೇಟ್‌ ಕೊಡಿ ಎಂದರು. ಅವರ ಸಲಹೆ ಮೇರೆಗೆ ಟಿಕೆಟ್‌ ಕೊಟ್ಟೆ. ಆಮೇಲೆ ಸಾವಿರಾರು ಕೋಟಿ ರೂ. ಅನುದಾನ ಕೊಟ್ಟೆ ಈ ಕ್ಷೇತ್ರಕ್ಕೆ ಎಂದರು ಅಬಕಾರಿ ಇಲಾಖೆಯಲ್ಲಿ ಟಾರ್ಗೆಟ್‌ ಹಾಕಿಕೊಂಡು ಲೂಟಿ ಮಾಡಲಾಗುತ್ತಿದೆ. ವೈನ್‌ ಸ್ಟೋಭಿಗಳಿಂದ ವಸೂಲಿ ಮಾಡಲಾಗುತ್ತಿದೆ. ಪಾಪದ ಹಣವನ್ನು ಲೂಟಿ ಮಾಡಿ ಮೆರೆಯುತ್ತಿದ್ದಾರೆ. ಅದೇ ಹಣವನ್ನು ಮುಂದಿನ ಚುನಾವಣೆಯಲ್ಲಿ ಮತದಾರರಿಗೆ ಹಂಚುತ್ತಾರೆ ಎಂದು ಅವರು ದೂರಿದರು.

ಕಾರ್ಯಕ್ರಮದಲ್ಲಿ ಪಕ್ಷದ ಕೋರ್‌ ಕಮಿಟಿ ಅಧ್ಯಕ್ಷ ಬಂಡೆಪ್ಪ ಖಾಶೆಂಪೂರ್‌, ವಿಧಾನ ಪರಿಷತ್‌ ಸದಸ್ಯ ಭೋಜೇಗೌಡ, ಮಾಜಿ ಸದಸ್ಯ ಟಿ.ಎ.ಶರವಣ, ಪಕ್ಷದ ಹಿರಿಯ ಮುಖಂಡ ರಾಜಣ್ಣ, ಪಕ್ಷದ ನಗರದ ಘಟಕದ ಅಧ್ಯಕ್ಷ ಪ್ರಕಾಶ ಮುಂತಾದವರು ವೇದಿಕೆಯಲ್ಲಿದ್ದರು.

“ಬಿಜೆಪಿ ಬಿಬಿಎಂಪಿ ಚುನಾವಣೆ ಮಾಡಲ್ಲ. ಅವರಿಗೆ ಅಷ್ಟು ಧೈರ್ಯ ಇಲ್ಲ. ನ್ಯಾಯಾಲಯ ಆದೇಶ ಮಾಡಿದೆ. ಆದರೂ ಅವರು ಕೋರ್ಟ್‌ ಆದೇಶವನ್ನು ಪಾಲಿಸುತ್ತಾರೆ ಎಂಬ ನಂಬಿಕೆ ಇಲ್ಲ.
– ಸಿ.ಎಂ. ಇಬ್ರಾಹೀಂ, ಜೆಡಿಎಸ್‌ ರಾಜ್ಯಾಧ್ಯಕ್ಷ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.