
ಎಚ್ಡಿಕೆ ಸಿಎಂ ಆಗೋದು ತಡೆಯೋಕೆ ಆಗಲ್ಲ: ದೇವೇಗೌಡ
Team Udayavani, Nov 30, 2017, 6:15 AM IST
-620x398.jpg)
ಬೆಂಗಳೂರು: ಈ ರಾಜ್ಯದಲ್ಲಿ ಮುಂದಿನ ಬಾರಿ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತಿಳಿಸಿದ್ದಾರೆ.
ಇಡೀ ರಾಜ್ಯದಲ್ಲಿ ಕುಮಾರಸ್ವಾಮಿ ಬೇಕು ಎಂಬ ಕೂಗು ಎದ್ದಿದೆ. ಹೀಗಾಗಿ, ಯಾರು ಏನೇ ಹೇಳಿದರೂ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದು ಶತಸಿದ್ಧ ಎಂದು ಹೇಳಿದ್ದಾರೆ.
ನಗರದ ಪುರಭವನದಲ್ಲಿ “ಟೈಗರ್ ಆ್ಯಪ್’ ಮತ್ತು ಎಚ್ಡಿಕೆ ರಕ್ತದಾನ ಸಮಿತಿ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಅವರು, ಇಪ್ಪತ್ತು ತಿಂಗಳು ಮುಖ್ಯಮಂತ್ರಿಯಾಗಿ ಜನರ ಮನಸ್ಸು ಗೆದ್ದಿದ್ದ ಕುಮಾರಸ್ವಾಮಿ ಮತ್ತೂಮ್ಮೆ ಮುಖ್ಯಮಂತ್ರಿಯಾಗಬೇಕು ಎಂಬುದು ರಾಜ್ಯದ ಜನರ ಆಶಯವಾಗಿದೆ ಎಂದು ತಿಳಿಸಿದರು.
ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗಲಿದ್ದು ಅದು ನಾನು ಕೊಡುವ ಭಾಗ್ಯವಲ್ಲ. ರಾಜ್ಯದ ಜನರೇ ಕೊಡುವ ಭಾಗ್ಯ ಎಂದರು.
ಈ ರಾಜ್ಯದಲ್ಲಿ ಕಳೆದ ಹತ್ತು ವರ್ಷದಲ್ಲಿ ಅಧಿಕಾರ ನಡೆಸಿದ ಯಾರ್ಯಾರು ಏನು ಮಾಡಿದ್ದಾರೆ ಎಂಬುದು ಹೊರಗೆ ತೆಗೆಯುವ ಕಾಲ ಈಗ ಬಂದಿದೆ. ಮುಂದಿನ ದಿನಗಳಲ್ಲಿ ಎಲ್ಲವೂ ಬಹಿರಂಗವಾಗಲಿದೆ ಎಂದು ಮಾರ್ಮಿಕವಾಗಿ ನುಡಿದರು.
ಟ್ಯಾಕ್ಸಿ ಕ್ಯಾಬ್ ಸೇವೆ ಆರಂಭಿಸಿರುವುದು ಶ್ರೇಷ್ಠ ಕೆಲಸ. ಚಾಲಕರಿಗೆ ಕಿರುಕುಳ ತಪ್ಪಿಸಿ ಸೌಲಭ್ಯ ಕಲ್ಪಿಸಲು ಆರಂಭಿಸಿರುವುದು ಒಳ್ಳೆಯದು. ಕುಮಾರಸ್ವಾಮಿ ದೇವೇಗೌಡರ ಮಗ ಎಂಬುದು ಎಲ್ಲರಿಗೂ ಗೊತ್ತಿದೆ. ಪುತ್ರ ವಾತ್ಸಲ್ಯದಿಂದ ಕಾರ್ಯಕ್ರಮಕ್ಕೆ ಬಂದಿದ್ದಾರೆ ಎಂದು ಟೀಕೆ ಬರಬಹುದು. ಆದರೆ, ನಾನು ಅದಕ್ಕೆ ಭಯ ಪಡೋಲ್ಲ ಎಂದು ಹೇಳಿದರು.
ಮುಂದಿನ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರಲಿದ್ದು ದುಡಿಯುವ ಕೈಗಳಿಗೆ ಆರ್ಥಿಕ ಶಕ್ತಿ ಕಲ್ಪಿಸಲಿದೆ. ಕೂತು ತಿನ್ನುವರರನ್ನು ಹಿಂದೆ ಸರಿಸಿ ಕೆಲಸ ಮಾಡುವವರಿಗೆ ಉದ್ಯೋಗ ಕಲ್ಪಿಸಲಿದ್ದೇವೆ ಎಂದು ತಿಳಿಸಿದರು.
ಟ್ಯಾಕ್ಸಿಯ ಸಿಂಬಲ್ನಲ್ಲಿ ಹುಲಿ ಮುಖ ಇದೆ. ಆದರೆ, ಇದು ಯಾರನ್ನೂ ತಿನ್ನಲ್ಲ. ಲೂಟಿ ಮಾಡುವ ರಾಜಕಾರಣಿಗಳತ್ತ ಕಣ್ಣಿಡಲಿದೆ ಎಂದು ಚಟಾಕಿ ಹಾರಿಸಿದರು.
ಕಾರ್ಯಕ್ರಮದ ನಂತರ ನಮ್ಮ ಟೈಗರ್ ಟ್ಯಾಕ್ಸಿಯಲ್ಲಿ ಕುಳಿತು ನೂತನ ಕ್ಯಾಬ್ ಸೇವೆಗೆ ಚಾಲನೆ ನೀಡಿದರು. ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಓಲಾ ಹಾಗೂ ಊಬರ್ ಸಂಸ್ಥೆಗಳ ವಿರುದ್ಧ ಸಿಡಿದೆದ್ದ ಚಾಲಕರು ಎಚ್.ಡಿ.ಕುಮಾರಸ್ವಾಮಿ ನೆರವಿನೊಂದಿಗೆ ಟೈಗರ್ ಟ್ಯಾಕ್ಸಿ ಸೇವೆ ಆರಂಭಿಸಿದ್ದು, ಇದಕ್ಕಾಗಿ ಆ್ಯಪ್ ಸಹ ಸಿದ್ಧಪಡಿಸಿದ್ದಾರೆ. ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ನೀಡುವ ಉದ್ದೇಶದಿಂದ ಕೈಗೆಟಕುವ ದರ ಹಾಗೂ ಉತ್ತಮ ಸೇವೆ ಘೋಷವಾಕ್ಯದಡಿ ಕಾರ್ಯಾರಂಭ ಮಾಡಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.