ಸರ್ಕಾರದ ಆದೇಶಕ್ಕೆ ಹೈ ತಡೆ
Team Udayavani, Feb 15, 2017, 11:47 AM IST
ಬೆಂಗಳೂರು: ವಸತಿ ಯೋಜನೆ ಫಲಾನುಭವಿಗಳ ಆಯ್ಕೆ ಅಧಿಕಾರವನ್ನು ಗ್ರಾಮ ಸಭೆಯ ಬದಲು ಶಾಸಕರ ನೇತೃತ್ವದ ಜಾಗೃತ ಸಮಿತಿಗೆ ವಹಿಸಿ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಮಂಗಳವಾರ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಗ್ರಾಮ ಸಭೆಯ ಶಾಸನಬದ್ಧ ಅಧಿಕಾರವನ್ನು ಮೊಟಕುಗೊಳಿಸಿ 2015ರಲ್ಲಿ ವಸತಿ ಇಲಾಖೆ ಹೊರಡಿಸಿದ್ದ ಆದೇಶ ರದ್ದುಗೊಳಿಸಬೇಕೆಂದು ಕೋರಿ ಉಡುಪಿಯ ನಂದನಾ ರೆಡ್ಡಿ ಹಾಗೂ ದಾಮೋದರ ಆಚಾರ್ಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎಸ್.ಕೆ. ಮುಖರ್ಜಿ ಹಾಗೂ ನ್ಯಾ. ಆರ್.ಬಿ. ಬೂದಿಹಾಳ ಅವರಿದ್ದ ವಿಭಾಗೀಯಪೀಠ,
ವಸತಿ ಇಲಾಖೆ ಹೊರಡಿಸಿದ್ದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ರಾಜೀವಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಿತು.
ಅರ್ಜಿದಾರ ಪರ ವಕೀಲರು ವಾದ ಮಂಡಿಸಿ, ಸಂವಿಧಾನಾತ್ಮಕವಾಗಿ ಹಾಗೂ ಗ್ರಾಮ ಸ್ವರಾಜ್ ಕಾಯಿದೆಯ ಪ್ರಕಾರ ಯಾವುದೇ ಯೋಜನೆಗಳಿಗೆ ಫಲಾನುಭವಿಗಳ ಆಯ್ಕೆಯ ಹಕ್ಕು ಮತ್ತು ಅಧಿಕಾರ ಗ್ರಾಮ ಸಭೆಯದ್ದು. ಆದರೆ ಸರ್ಕಾರ ಹೊರಡಿಸುವ ಕೆಲವು ಸುತ್ತೋಲೆಗಳು ಗ್ರಾಮ ಸಭೆಯನ್ನು ದುರ್ಬಲಗೊಳಿಸುವ ಪ್ರಯತ್ನ ಮತ್ತು ಸಂವಿಧಾನದತ್ತ ಹಕ್ಕನ್ನು ಕಿತ್ತುಕೊಳ್ಳಲಾಗಿದೆ ಎಂದು ನ್ಯಾಯಪೀಠಕ್ಕೆ ಮನವರಿಕೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.