High Court: ಅರ್ಜಿ ವಿಲೇವಾರಿ ವಿಳಂಬ: ಅಪರಾಧಿಗೆ ಜೀವದಾನ


Team Udayavani, Aug 29, 2023, 2:25 PM IST

High Court: ಅರ್ಜಿ ವಿಲೇವಾರಿ ವಿಳಂಬ: ಅಪರಾಧಿಗೆ ಜೀವದಾನ

ಬೆಂಗಳೂರು: ತನ್ನ ಇಬ್ಬರು ಪತ್ನಿಯರು ಹಾಗೂ ಒರ್ವ ಪುತ್ರಿಯನ್ನು ಕೊಲೆ ಮಾಡಿ ಕಳೆದ 30 ವರ್ಷಗಳಿಂದ ಜೈಲು ವಾಸ ಅನುಭವಿಸುತ್ತಿರುವ ಕಲಬುರಗಿ ಜಿಲ್ಲೆಯ ಅಫ್ಜಲ್‌ಪುರದ ಅಪರಾಧಿ ಸಾಯಿಬಣ್ಣನಿಗೆ ಜೀವದಾನ ನೀಡಿರುವ ಹೈಕೋರ್ಟ್‌, ಅಪರಾಧಿಗೆ 70 ವರ್ಷ ವಯಸ್ಸಾಗಿದೆ ಎನ್ನುವ ಕಾರಣಕ್ಕೆ ಅಧೀನ ನ್ಯಾಯಾಲಯ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿದೆ.

ಇದರಿಂದ ಗಲ್ಲು ಶಿಕ್ಷೆ ವಿಧಿಸಲ್ಪಟ್ಟು ಕಳೆದ ಮೂರು ದಶಕಗಳಿಂದ ಸೆರೆವಾಸ ಅನುಭವಿಸುತ್ತಿರುವ ಸಾಯಿಬಣ್ಣ ಈಗ ಜೀವವಿರುವರೆಗೂ ಜೈಲಿನಲ್ಲೇ ಕಾಲ ಕಳೆಯಬೇಕಾಗಿದೆ. ಗಲ್ಲು ಶಿಕ್ಷೆ ಪ್ರಶ್ನಿಸಿ ಸಾಯಿಬಣ್ಣ ಅಲಿಯಾಸ್‌ ನಿಂಗಪ್ಪ ನಾಟಿಕರ್‌ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾ. ಜಿ.ನರೇಂದರ್‌ ಮತ್ತು ನ್ಯಾ.ಸಿ.ಎಂ.ಪೂಣಚ್ಚ ಅವರಿದ್ದ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ತೀರ್ಪು ನೀಡಿದೆ. ಇಡೀ ಪ್ರಕರಣದ ವಿವರಗಳು ಮತ್ತು ಸಂದರ್ಭಗಳನ್ನು ಪರಿಗಣಿಸಿದರೆ ಅರ್ಜಿದಾರನು ಈಗಾಗಲೇ 30ವರ್ಷಕ್ಕೂ ಅಧಿಕ ಸೆರೆವಾಸ ಅನುಭವಿಸಿದ್ದಾನೆ. ನಮ್ಮ ಪ್ರಕಾರ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಲು ಸ್ವಾತಂತ್ರÂ ನೀಡುವುದರ ಜತೆಗೆ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸಿದರೆ ನ್ಯಾಯ ಸಂದಾಯವಾಗುತ್ತದೆ ಎಂದು ನ್ಯಾಯಪೀಠ ಹೇಳಿದೆ.

ಅರ್ಜಿದಾರ ಸಲ್ಲಿಸಿದ್ದ ಕ್ಷಮಾದಾನ ಅರ್ಜಿ ಮೊದಲಿಗೆ ಸರ್ಕಾರದಲ್ಲಿ 2005ರ ಮೇ 31ರಿಂದ 2007ರ ಜ.9ರವರೆಗೆ ಅಂದರೆ ಒಂದು ವರ್ಷ 9 ತಿಂಗಳು 9 ದಿನ ವಿಳಂಬವಾಗಿದೆ. 2ನೇದಾಗಿ ರಾಜ್ಯಪಾಲರ ಸಚಿವಾಲಯದಲ್ಲಿ 2007ರ ಜ.12 ರಿಂದ 2007ರ ಫೆ.2ರವರೆಗೆ ವಿಳಂಬವಾಗಿದೆ. ಮೂರನೆಯ ದಾಗಿ ಕೇಂದ್ರ ಸರ್ಕಾರಕ್ಕೆ ಸಂವಹನ ಕಳುಹಿಸಿಕೊಡುವಲ್ಲಿ 24 ದಿನ ವಿಳಂಬವಾಗಿದೆ. ನಾಲ್ಕನೆಯದಾಗಿ ರಾಷ್ಟ್ರಪತಿ ಬಳಿ ಅರ್ಜಿ 2007ರ ಫೆ.28ರಿಂದ 2013ರ ಜ.3ರವರೆಗೆ ಇತ್ಯರ್ಥವಾಗದೆ ಉಳಿದಿತ್ತು. ಒಟ್ಟಾರೆ ನಾಲ್ಕು ಹಂತಗಳಲ್ಲಿ ಕ್ಷಮಾದಾನ ಅರ್ಜಿ ಪರಿಗಣಿಸುವುದು 7 ವರ್ಷ 8 ತಿಂಗಳು ವಿಳಂಬವಾಗಿದೆ. ಆದರೆ, ಅದಕ್ಕೆ ಯಾವುದೇ ಕಾರಣ ನೀಡಿಲ್ಲ  ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಅಲ್ಲದೆ, ಅಪರಾಧಿಯನ್ನು 2003ರ ಜ.10ರಿಂದ 2019ರ ಮೇ 20ರವರೆಗೆ ಬೆಳಗಾವಿಯ ಒಂದೇ ಕೊಣೆಯಲ್ಲಿ ಏಕಾಂಕಿ ಯಾಗಿ ಇರಿಸಲಾಗಿದೆ. ಅದರಂತೆ ಆತ 16 ವರ್ಷ ಏಕಾಂಗಿ ಸೆರೆವಾಸ ಅನುಭವಿಸಿದಂತಾಗಿದೆ. ಅದೇ ರೀತಿ ಕಾರಾಗೃಹ ಅಧಿಕಾರಿಗಳು ಸಲ್ಲಿಸಿರುವ ಆರೋಗ್ಯ ವರದಿ ಪ್ರಕಾರ ಅರ್ಜಿ ದಾರನಿಗೆ ಎದೆಯ ಎರಡೂ ಭಾಗ ನೋವಿದೆ. ಭಯದಿಂದ ತತ್ತರಿಸಿದ್ದಾನೆ ಮತ್ತು ಬೇಧಿಯಿಂದ ಬಳಲಿ ಆಯಾಸವಾಗಿದೆ ಎಂದು ತಿಳಿಸಲಾಗಿದೆ. ಏಕಾಂಗಿ ಸೆರೆವಾಸದಿಂದ ಹೀಗಾಗಿರ ಬಹುದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಅರ್ಜಿದಾರರ ಪರ ವಕೀಲರು, ಅರ್ಜಿದಾರನ ಕ್ಷಮಾದಾನ ಅರ್ಜಿ ಇತ್ಯರ್ಥವಾಗುವುದು 7 ವರ್ಷಕ್ಕೂ ಹೆಚ್ಚು ವಿಳಂಬ ವಾಗಿದೆ ಮತ್ತು ಕಾನೂನಿನಲ್ಲಿ ಸಮ್ಮತಿ ಇಲ್ಲದಿದ್ದರೂ ಏಕಾಂಗಿ ಸೆರೆವಾಸ ವಿಧಿಸಲಾಗಿದೆ. ಹಾಗಾಗಿ ಅವರಿಗೆ ನೀಡಿರುವ ಗಲ್ಲು ಶಿಕ್ಷೆ ರದ್ದುಗೊಳಿಸಬೇಕು ಎಂದು ಕೋರಿದ್ದರು.

ಪ್ರಕರಣದಲ್ಲಿ ಹೈಕೋರ್ಟ್‌ಗೆ ನೆರವು ನೀಡಲು ಅಮಿಕಸ್‌ ಕ್ಯೂರಿ ಆಗಿ ನೇಮಕಗೊಂಡಿದ್ದ ಹಿರಿಯ ನ್ಯಾಯವಾದಿ ವಿಕ್ರಂ ಹುಯಿಲಗೋಳ. ಏಕಾಂಗಿ ಸೆರೆವಾಸ ವಿಧಿಸಿರುವುದು ನಿಜವಾಗಿದೆ. ಹಾಗಾಗಿ ಗಲ್ಲು ಶಿಕ್ಷೆಯನ್ನು  ಕಡಿತಗೊಳಿಸುವಂತೆ ಕೋರಲು ಆತನಿಗೆ ಹಕ್ಕಿದೆ. ಕ್ಷಮಾದಾನ ಅರ್ಜಿ ಪರಿಗಣಿಸು ವುದು ಮತ್ತು ವಿಲೇವಾರಿಯಲ್ಲಿ ವಿಳಂಬವಾಗಿರುವುದನ್ನು ಗಾಯವೆಂದು ಪರಿಗಣಿಸಬಹುದಾಗಿದೆ ಎಂದಿದ್ದರು. ಆದರೆ, ಶಿಕ್ಷೆ ಕಡಿತದ ಅರ್ಜಿಯನ್ನು ವಜಾಗೊಳಿಸಬೇಕೆಂದು ಪ್ರಾಸಿಕ್ಯೂಷನ್‌ ಕೋರಿತ್ತು.

ಅನೈತಿಕ ಸಂಬಂಧ: ಕೊಲೆ:

ಅನೈತಿಕ ಸಂಬಂಧ ಶಂಕೆ ವ್ಯಕ್ತಪಡಿಸಿ ಸಾಯಿಬಣ್ಣ 1988ರಲ್ಲಿ ಪತ್ನಿ ಮಾಲಕವ್ವಳನ್ನು ಕೊಲೆ ಮಾಡಿ ತಾನೇ ಬಂದು ಪೊಲೀಸರಿಗೆ ಶರಣಾಗಿದ್ದನು. ಆನಂತರ ಜೈಲಿನಲ್ಲಿರುವಾಗ ಸಹಕೈದಿ ದತ್ತು ಎಂಬಾತನೊಂದಿಗೆ ಆತನ ಸ್ನೇಹ ಬೆಳೆಯಿತು. ಜಾಮೀನು ಪಡೆದು ಸಹ ಕೈದಿ ದತ್ತುವಿನ ಪುತ್ರಿ ನಾಗಮ್ಮಗಳನ್ನು ವಿವಾಹವಾಗಿದ್ದನು. 2ನೇ ಪತ್ನಿ ನಾಗಮ್ಮಳಿಗೆ ವಿಜಯಲಕ್ಷಿ$¾ ಎಂಬ ಮಗು ಜನಿಸಿತ್ತು. ಈ ಮಧ್ಯೆ ಮೊದಲ ಪತ್ನಿ ಕೊಲೆ ಕೇಸಿನಲ್ಲಿ ಸಾಯಿಬಣ್ಣನಿಗೆ ಜೀವಾವಧಿ ಶಿಕ್ಷೆ ಆಗಿತ್ತು. 1994ರಲ್ಲಿ ಪೆರೋಲ್‌ ಪಡೆದು ಹೊರಬಂದಿದ್ದ ಸಾಯಿಬಣ್ಣ 2ನೇ ಪತ್ನಿ ಹಾಗೂ ಮಗುವನ್ನು ಕೊಲೆ ಮಾಡಿ ಮತ್ತೆ ಜೈಲು ಸೇರಿದ್ದ. ಕಲಬುರಗಿ ಸೆಷನ್ಸ್‌  ಕೋರ್ಟ್‌, ಸಾಯಿಬಣ್ಣಿಗೆ ಗಲ್ಲು ಶಿಕ್ಷೆಯನ್ನು ವಿಧಿಸಿತ್ತು. ನಂತರ ಹೈಕೋರ್ಟ್‌ ಮತ್ತು ಸುಪ್ರೀಂಕೋರ್ಟ್‌ ಕೂಡ ಆ ಮರಣದಂಡನೆ ಶಿಕ್ಷೆಯನ್ನು ಎತ್ತಿಹಿಡಿದಿತ್ತು. ಆದರೆ ಕ್ಷಮಾದಾನ ಅರ್ಜಿ ವಿಲೇವಾರಿಯಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ಗಲ್ಲು ಶಿಕ್ಷೆ ವಿನಾಯ್ತಿಗೆ ಹೈಕೋರ್ಟ್‌ಗೆ ಮೊರೆ ಹೋಗಿದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.