ಚುನಾವಣಾ ಕಣಕ್ಕೆ ಹಿಂದೂಪರ ಸಂಘಟನೆಗಳು
Team Udayavani, Oct 27, 2017, 7:40 AM IST
ಬೆಂಗಳೂರು: ಹಿಂದೂಗಳ ರಕ್ಷಣೆಗಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲ ಹಿಂದೂಪರ ಸಂಘಟನೆಗಳು ಒಂದೇ ವೇದಿಕೆಯಡಿ ಕಣಕ್ಕಿಳಿಯಲು ನಿರ್ಧರಿಸಿವೆ.
ಇದರ ಮೊದಲ ಹೆಜ್ಜೆಯಾಗಿ ಆರ್ಎಸ್ಎಸ್ ಕಾರ್ಯಕರ್ತರು ಕಟ್ಟಿದ ಜನಸ್ಪಂದನ ಸಂಘಟನೆ ಈಗ ಅಖೀಲ ಭಾರತ ಹಿಂದೂ
ಮಹಾಸಭಾದಲ್ಲಿ ವಿಲೀನಗೊಂಡಿದೆ. ಮುಂದಿನ ದಿನಗಳಲ್ಲಿ ಕರಾವಳಿ, ಉತ್ತರ ಕರ್ನಾಟಕದಲ್ಲಿನ ಇನ್ನಷ್ಟು ಹಿಂದೂ ಸಂಘಟನೆಗಳು ಮಹಾಸಭಾದಲ್ಲಿ ವಿಲೀನಗೊಳ್ಳಲಿದ್ದು, ಬರುವ ಚುನಾವಣೆಯಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಒಂದೇ ವೇದಿಕೆಯಲ್ಲಿ ಹಿಂದೂ ಕಾರ್ಯಕರ್ತರು ಸ್ಪರ್ಧಿಸಲಿದ್ದಾರೆ ಎಂದು ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ನಾ.ಸುಬ್ರಮಣ್ಯರಾಜು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಹಿಂದೂ ಧರ್ಮದ ಮೇಲೆ ಹಲವು ರೀತಿಯ ಆಕ್ರಮಣಗಳು ನಡೆಯುತ್ತಿವೆ. ಸರ್ಕಾರ ಜನರ ಹಿತಕ್ಕಾಗಿ ಕಾರ್ಯ ನಿರ್ವಹಿಸುವುದನ್ನು ಬಿಟ್ಟು, ಸಮಾಜದ ಸ್ವಾಸ್ಥ್ಯ ಹಾಳು ಮಾಡುವಂತಹ ಕೆಲಸಗಳಲ್ಲಿ ನಿರತವಾಗಿದೆ. ಟಿಪ್ಪು ಜಯಂತಿ ಆಚರಣೆ ಮೂಲಕ ಜನರ ಭಾವನೆಗಳನ್ನು ಕೆದಕುವ ಕೆಲಸ ಮಾಡುತ್ತಿದೆ. ಮತ್ತೂಂದೆಡೆ ವೀರಶೈವ, ಅಹಿಂದ ಹೆಸರುಗಳಲ್ಲಿ ವೋಟ್ಬ್ಯಾಂಕಿಗಾಗಿ ಹಿಂದೂ ಧರ್ಮದ ನಡುವೆ ಬಿರುಕು ಮೂಡಿಸುವುದು, ಲವ್ ಜಿಹಾದ್ ಮೂಲಕ ಹಿಂದೂ ಹೆಣ್ಣು ಮಕ್ಕಳ ಮತಾಂತರ, ರೋಹಿಂಗ್ಯಾ ಮುಸ್ಲಿಂ ಸಮುದಾಯಗಳ ವಿಚಾರದಲ್ಲಿ ಮೌನ ವಹಿಸಿರುವುದು, ಹಿಂದೂಗಳ ಕಗ್ಗೊಲೆ ಪ್ರಕರಣಗಳಲ್ಲಿ ಯಾವುದೇ ಕ್ರಮ ಕೈಗೊಳ್ಳದಿರುವುದು ಸೇರಿ ಈ ಎಲ್ಲ ಶಕ್ತಿಗಳ ವಿರುದ್ಧ ಹೋರಾಡಲು ಹಿಂದೂಪರ ಸಂಘಟನೆಗಳ ವಿಲೀನ ಮುನ್ನುಡಿ ಆಗಲಿದೆ ಎಂದರು.
ಬಿಜೆಪಿ ಈ ಹಿಂದೆ ಅಧಿಕಾರದಲ್ಲಿತ್ತು. ಆದರೆ, ಭ್ರಷ್ಟಾಚಾರ, ಆಂತರಿಕ ಕಲಹಗಳಲ್ಲೇ ಕಾಲಹರಣ ಮಾಡಿತು. ಈ ಮಧ್ಯೆ,
ಹಿಂದೂಗಳಿಗೆ ನ್ಯಾಯ ಸಿಗಲಿಲ್ಲ. ಆದ್ದರಿಂದ ಈ ರಾಜಕೀಯ ಪಕ್ಷಗಳಿಂದ ಹೊರತಾದ ಹಿಂದೂಪರ ಸಂಘಟನೆಗಳು ಒಟ್ಟಾಗಿ
ಬರುವ ಚುನಾವಣೆಯಲ್ಲಿ ಹೋರಾಟ ನಡೆಸಲಿದ್ದಾರೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಜನಸ್ಪಂದನ ಸಂಸ್ಥಾಪಕ ನಾರಾಯಣ ಶರ್ಮ, ಆರೆಸ್ಸೆಸ್ ಮುಖಂಡ ಕೈ.ಪೊ. ಶೇಷಾದ್ರಿ, ಪದಾಧಿಕಾರಿಗಳಾದ ಶ್ರೀಧರ್, ಸುಬ್ರಮಣ್ಯ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
BJP vs Congress ; ಕೇಸ್ ಮೇಲೆ ಕೇಸ್
CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್ ಆರೋಪ
Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ ಸಂಸದ ಯದುವೀರ್ ಭೇಟಿ
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ
MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ
Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.