ಹನಿಟ್ರ್ಯಾಪ್‌: ಮಹಿಳೆ ಸೇರಿ ಐವರ ಬಂಧನ

ಬಾರ್‌ ಲೈಸೆನ್ಸ್‌: ನಿವೃತ್ತ ಪ್ರಾಂಶುಪಾಲರಿಗೆ ವಂಚನೆ | ಮತ್ತೂಂದು ಕೇಸಿನಲ್ಲಿ ಬ್ಯಾಂಕ್‌ ಉದ್ಯೋಗಿಗೆ ದೋಖಾ

Team Udayavani, Nov 5, 2021, 9:24 AM IST

honey trap

ಬೆಂಗಳೂರು: ನಗರದಲ್ಲಿ ನಡೆದ ಎರಡು ಪ್ರತ್ಯೇಕ ಹನಿಟ್ರ್ಯಾಪ್‌ ಪ್ರಕರಣಗಳಲ್ಲಿ ಮಹಿಳೆ ಸೇರಿ ಐವರು ಪೊಲೀಸರ ಅತಿಥಿಯಾಗಿದ್ದಾರೆ. ನಿವೃತ್ತ ಪ್ರಾಂಶುಪಾಲರಿಗೆ ಬಾರ್‌ ಲೈಸೆನ್ಸ್‌ ಕೊಡಿಸುವುದಾಗಿ ನಂಬಿಸಿ ಹನಿ ಟ್ರ್ಯಾಪ್‌ ಮಾಡಿದ್ದ ಮಹಿಳೆ ಸೇರಿ ನಾಲ್ವರು ನಂದಿನಿ ಲೇಔಟ್‌ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶ್ರೀರಾಮಪುರ ನಿವಾಸಿಗಳಾದ ತ್ರಿಶಾ ಅಲಿಯಾಸ್‌ ಜಾನ್ಸಿ (27) ಮತ್ತು ಆಕೆಯ ಪ್ರಿಯಕರ ಮುತ್ತು (32) ಹಾಗೂ ಆತನ ಸಹಚರರಾದ ದಾಮೋದರ್‌ (30), ಪೆದ್ದರೆಡ್ಡಿ (31) ಬಂಧಿತರು.

ಅವರಿಂದ ಲಕ್ಷಾಂತರ ರೂ. ನಗದು ಮತ್ತು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ರಾಜಾಜಿನಗರ ನಿವಾಸಿ ನಿವೃತ್ತ ಪ್ರಾಂಶುಪಾಲರಾದ ಚಂದ್ರಶೇಖರ್‌ ಎಂಬುವವರನ್ನು ಟ್ರ್ಯಾಪ್‌ ಮಾಡಿದ್ದರು. ಆರೋ ಪಿಗಳು ಯಾವುದೇ ಕೆಲಸಕ್ಕೆ ಹೋಗುವುದಿಲ್ಲ. ವೃದ್ಧರು, ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡು ಹನಿ ಟ್ರ್ಯಾಪ್‌ ಮಾಡುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದರು. ಚಂದ್ರಶೇಖರ್‌ ಅವರು ಬಾರ್‌ ಲೈಸೆನ್ಸ್‌ ಪಡೆ ಯಲು ಅರ್ಜಿ ಸಲ್ಲಿಸಿದ್ದರು. ಈ ವಿಚಾರ ತಿಳಿದುಕೊಂಡು ಆರೋಪಿಗಳು ಅವರನ್ನು ಟ್ರ್ಯಾಪ್‌ ಮಾಡಲು ಸಂಚು ರೂಪಿಸಿದ್ದರು.

ಆರೋಪಿಗಳ ಪೈಕಿ ತ್ರಿಶಾ ಅ.1ರಂದು ಚಂದ್ರಶೇಖರ್‌ ಅವರಿಗೆ ಕರೆ ಮಾಡಿ ಬಾರ್‌ ಲೈಸೆನ್ಸ್‌ ಕೊಡಿಸುತ್ತೇವೆ ಎಂದು ಲಗ್ಗೆರೆಯ ಸಾರ್ವಜನಿಕ ಆಸ್ಪತ್ರೆ ಬಳಿ ಬರಲು ಹೇಳಿದ್ದಾಳೆ. ಅದರಂತೆ ಅವರು ಬಂದಾಗ ಆರೋಪಿ ಮುತ್ತು ಮತ್ತು ಇತರೆ ಆರೋಪಿಗಳು ಅವರನ್ನು ತ್ರಿಶಾಳ ಮನೆಗೆ ಕರೆದೊಯ್ದಿದ್ದಾರೆ. ಆಗ ಆಕೆ, ತಾನೇ ಕರೆ ಮಾಡಿದ್ದು ಎಂದು ಬಾರ್‌ ಲೈಸೆನ್ಸ್‌ ಬಗ್ಗೆ ಕೆಲ ಹೊತ್ತು ಮಾತನಾಡಿದ್ದಾರೆ. ನಂತರ ಮುತ್ತು ಮತ್ತು ಇತರರು ಏಕಾಏಕಿ ಮನೆಯೊಳಗೆ ನುಗ್ಗಿ, ಮನೆಯಲ್ಲಿ ಏನು ನಡೆಯುತ್ತಿದೆ ಎಂದು ಚಂದ್ರಶೇಖರ್‌ ಮೇಲೆ ಹಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ:- ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಆರು ಮಂದಿ ಸ್ಥಳದಲ್ಲೇ ಸಾವು!

ಅಲ್ಲದೆ, ಮಾಧ್ಯಮದರವನ್ನು ಕರೆಸುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಬಳಿಕ ಐದು ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾರೆ. ಬಳಿಕ ಮೂರು ಲಕ್ಷ ರೂ. ಸ್ಥಳದಲ್ಲೇ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಬಳಿಕ ಚಂದ್ರಶೇಖರ್‌ ಅವರ ಅಳಿ ಯನಿಗೆ ಕರೆ ಮಾಡಿ ತುರ್ತು 3 ಲಕ್ಷ ರೂ. ತರುವಂತೆ ಹೇಳಿದ್ದು, ಅವರು ಲಗ್ಗೆರೆ ಸೇತುವೆಯ ಬಳಿ ಬೇಕರಿಯೊಂದರ ಬಳಿ ಬಂದಿದ್ದು, ಆರೋಪಿಗಳು ಅವರಿಂದ ಹಣ ಪಡೆದು ಚಂದ್ರಶೇಖರ್‌ರನ್ನು ಬಿಟ್ಟು ಕಳುಹಿಸಿದ್ದಾರೆ. ಅದರಿಂದ ಗಾಬರಿಗೊಂಡ ಚಂದ್ರಶೇಖರ್‌ ಕೂಡಲೇ ನಂದಿನಿ ಲೇಔಟ್‌ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಹನಿಟ್ರ್ಯಾಪ್‌ ಕಿಂಗ್‌ಪಿನ್‌ ಬಂಧನ

ಅವಿವಾಹಿತರು, ವಿಧುರರು, ವೃದ್ಧರನ್ನು ಗುರಿಯಾಸಿಗಿಕೊಂಡು ಹನಿಟ್ರ್ಯಾಪ್‌ ಮಾಡುತ್ತಿದ್ದ ತಂಡದ ಕಿಂಗ್‌ ಪಿನ್‌ ಗೋವಿಂದಪುರ ಠಾಣೆ ಪೊಲೀಸರ ಬಲೆಗೆ ಬಿದ್ದಿ ದ್ದಾನೆ. ಮೊಹಮ್ಮದ್‌(34) ಬಂಧಿತ. ಆರೋಪಿ ತನ್ನ ಸಹಚರರ ಜತೆ ಸೇರಿಕೊಂಡು ಸುಮಾರು 20 ಮಂದಿಗೆ ಹನಿಟ್ರ್ಯಾಪ್‌ ಮಾಡಿ ಹಣ ಸುಲಿಗೆ ಮಾಡು ತ್ತಿದ್ದರು ಎಂಬುದು ಪತ್ತೆಯಾಗಿದೆ. ನಾಪತ್ತೆಯಾಗಿರುವ ನಾಲ್ವರಿಗಾಗಿ ಹುಟುಕಾಟ ನಡೆದಿದೆ ಎಂದು ಪೊಲೀಸರು ಹೇಳಿದರು.

ಆರೋಪಿಗಳು ಮೊದಲಿಗೆ ಮಿಸ್ಡ್ ಕಾಲ್‌ ಕೊಡುತ್ತಿ ದ್ದರು. ನಂತರ ವಾಟ್ಸ್‌ಆ್ಯಪ್‌ನಲ್ಲಿ ಹಾಯ್‌ ಎಂದು ಪರಿಚಯಿಸಿಕೊಳ್ಳುತ್ತಿದ್ದರು. ಒಂದು ವೇಳೆ ಆ ಕಡೆಯಿಂದ ಕರೆ ಮಾಡಿದ ಕೂಡಲೇ ಅವರಿಗೆ ಕೆಲವೊಂದು ಆಮಿಷವೊಡ್ಡಿ ಟ್ರ್ಯಾಪ್‌ ಮಾಡುತ್ತಿದ್ದರು. ಆರೋಪಿ ಗಳು ಇತ್ತೀಚೆಗೆ ಮಾರತ್ತಹಳ್ಳಿ ನಿವಾಸಿ 50 ವರ್ಷದ ವ್ಯಕ್ತಿಗೆ ವಾಟ್ಸ್‌ಆ್ಯಪ್‌ನಲ್ಲಿ ಯುವತಿಯ ಹೆಸರಿನಲ್ಲಿ ಸಂದೇಶ ಕಳುಹಿಸಿದ್ದರು. ನಂತರ ಉತ್ತರ ಭಾರತದವರು ಬೆಂಗಳೂರಿಗೆ ಬಂದಾಗ ಭೇಟಿಯಾಗುತ್ತೇವೆ ಎಂದು ಹೇಳಿ ಆತ್ಮೀಯತೆ ಬೆಳೆಸಿದ್ದಾರೆ. ಅ.10ರಂದು ಅಪರಿಚಿತ ವ್ಯಕ್ತಿ ನಗರಕ್ಕೆ ಬಂದಿರುವುದಾಗಿ ತಿಳಿಸಿ, ಯುವತಿಯೊಬ್ಬಳ ಕಡೆಯಿಂದ ಕರೆ ಮಾಡಿಸಿ ಭೇಟಿ ಆಗುವುದಾಗಿ ಹೇಳುತ್ತಿದ್ದರು.

ಭೇಟಿಯಾಗಲು ದೂರುದಾರ ವ್ಯಕ್ತಿ ರಾತ್ರಿ ವೀರಣ್ಣಪಾಳ್ಯದ ಹೋಟೆಲ್‌ ಬಳಿ ಬಂದಿದ್ದರು. ನಂತರ ಹೋಟೆಲ್‌ ಒಳಗೆ ತೆರಳುತ್ತಿದ್ದಂತೆ ಯುವತಿ ಸಲುಗೆಯಿಂದ ಮಾತನಾಡಲು ಆರಂಭಿಸಿದ್ದಾಳೆ. ಈ ವೇಳೆ ಹೋಟೆಲ್‌ ರೂಂಗೆ ಪೊಲೀಸರು ಮತ್ತು ಮಾಧ್ಯಮದವರ ಸೋಗಿನಲ್ಲಿ ಎಂಟ್ರಿ ಕೊಟ್ಟ ಆರೋಪಿಗಳು, ನೀನು ಡ್ರಗ್ಸ್‌ ಮಾರಾಟ ಮಾಡುತ್ತಿದ್ದಿಯಾ? ಎಂದು ಬ್ಲ್ಯಾಕ್‌ ಮೇಲ್‌ ಮಾಡಲು ಆರಂಭಿಸಿದ್ದಾರೆ. ನಂತರ ಗೂಗಲ್‌, ಫೋನ್‌ಪೇ ಮೂಲದ 5.91 ಲಕ್ಷ ರೂ. ತಮ್ಮ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಬಳಿಕ ಹೋಟೆಲ್‌ ಕೋಣೆಯಲ್ಲಿ ಕೂಡಿ ಹಾಕಿ ಪರಾರಿಯಾಗಿದ್ದಾರೆ ಎಂದು ದೂರುದಾರರು ತಿಳಿಸಿದ್ದರು. ಈ ಸಂಬಂಧ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್‌ ಸಿಕ್ಕಿ ಬಿದ್ದಿದ್ದಾನೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.