ಪರೇಶ್‌ ಹತ್ಯೆ ಸಿಬಿಐ ತನಿಖೆ


Team Udayavani, Dec 14, 2017, 6:00 AM IST

ramalinga-reddy–12017.jpg

ಬೆಂಗಳೂರು :ರಾಜ್ಯಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿರುವ ಹೊನ್ನಾವರದ ಪರೇಶ್‌ ಮೇಸ್ತ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಬುಧವಾರ ಪರಪ್ಪನ ಅಗ್ರಹಾರದ ಕೇಂದ್ರಕಾರಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಪರೇಶ್‌ ತಂದೆ ನೀಡಿರುವ ಮನವಿಯ ಆಧಾರದಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ ಎಂದು ಹೇಳಿದರು.

ಪರೇಶ್‌ ಮೇಸ್ತ¤ ಸಾವಿನ ನಂತರ ಕರಾವಳಿ ಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಮೇಸ್ತ¤ ತಂದೆಯ ಕೋರಿಕೆ ಮೇರಿಗೆ ಪ್ರಕರಣವನ್ನು ಸಿಬಿಐಗೆ ನೀಡುತ್ತಿದ್ದೇವೆ. ಬಿಜೆಪಿ ನಾಯಕರ ಅಥವಾ ಹಿಂದು ಸಂಘಟನೆಗಳ ಒತ್ತಡಕ್ಕೆ ಮಣಿಸಿದ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈ ಹಿಂದಿನ ಐಎಎಸ್‌ ಅಧಿಕಾರಿ ಡಿ.ಕೆ.ರವಿ ಸಾವಿನ ಪ್ರಕರಣ, ತೀರ್ಥಹಳ್ಳಿಯ ನಂದಿತಾ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿದ್ದೆವು. ಈ ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸ್ಪಷ್ಟ ವರದಿ ನೀಡಿದೆ ಎಂಬ ಮಾಹಿತಿ ನೀಡಿದರು.

ಡಿ.ಕೆ.ರವಿ ಪ್ರಕರಣದಲ್ಲಿ ಸರ್ಕಾರದ ಮೇಲೆ ಆರೋಪ ಮಾಡಿರುವ ಬಿಜೆಪಿಯವರು, ರವಿಯವರನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. ನಂದಿತಾ ಪ್ರಕರಣದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ ವಿರುದ್ಧ ಆರೋಪ ಮಾಡಿ,  ಅವರೇ ಮರಣೋತ್ತರ ವರದಿಯನ್ನು ತಿದ್ದುಪಡಿ ಮಾಡಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದರು. ಚುನಾವಣೆ ಸಮೀಪಿಸುತ್ತಿರುವುದರಿಂದ ಬಿಜೆಪಿಯವರು  ಪರೇಶ್‌ ಸಾವಿನ ಪ್ರಕರಣವನ್ನು ಜೀವಂತವಾಗಿಡಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ವಿರೋಧ ಪಕ್ಷದವರಿಗೆ ಅನುಭವ  ಹಾಗೂ ಕಾಮನ್ಸೆನ್ಸ್‌ ಇಲ್ಲ. ಪರೇಶ್‌ ಸಾವಿನ ಪ್ರಕರಣದ ಎಫ್ಎಸ್‌ಎಲ್‌ ಅಂತಿಮ ವರದಿ ಬರಲಿ, ಆರೋಪಿಗಳು ಯಾರೇ ಆಗಲಿ ಬಂಧಿಸಲಿದ್ದೇವೆ ಎಂಬ ಎಚ್ಚರಿಕೆ ನೀಡಿದರು.

ಉತ್ತರವೀಗ ಶಾಂತ
ಕಳೆದೊಂದು ವಾರದಿಂದ ಹೊತ್ತಿ ಉರಿಯುತ್ತಿದ್ದ ಉತ್ತರ ಕನ್ನಡ ಜಿಲ್ಲೆ ಇದೀಗ ಶಾಂತವಾಗಿದೆ. ಹೊನ್ನಾವರ, ಕುಮಟಾ, ಶಿರಸಿಯಲ್ಲಿ  ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್‌ ಎಲ್ಲ ಸಮುದಾಯಗಳ ಶಾಂತಿ ಸಭೆ ನಡೆಸಿರುವುದು ಫ‌ಲ ನೀಡಿದೆ. ಜಿಲ್ಲಾ ಪೊಲೀಸ್‌ ಗುಪ್ತದಳಕ್ಕೆ ಬಂದ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ ಶಾಂತ ವಾತಾವರಣವಿದೆ. ಜನ ಮುಕ್ತವಾಗಿ ಪಟ್ಟಣಗಳಲ್ಲಿ ಸಂಚರಿಸಲು ತೊಡಗಿದ್ದಾರೆ. ಕಾರವಾರ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಮುಂಡಗೋಡ, ಸಿದ್ದಾಪುರ ಪಟ್ಟಣಗಳು ಶಾಂತವಾಗಿವೆ. ಎಲ್ಲೆಡೆ ಪೊಲೀಸ್‌ ಬಂದೋಬಸ್ತ್ ಮುಂದುವರಿದಿದೆ. ಆಯಕಟ್ಟಿನ ಜಾಗಗಳಲ್ಲಿ ನಿಗಾ ವಹಿಸಲಾಗಿದೆ.

ಕುರಿತು ಸರ್ಕಾರ ಬಿಡುಗಡೆ ಮಾಡಿದ ಪ್ರಶ್ನೋತ್ತರಗಳಿರುವ ಫೊರೆನ್ಸಿಕ್‌ ವರದಿ ನಿಜವಾದ ವರದಿಯಲ್ಲ. ಕೊಲೆ ಪ್ರಕರಣ ಮುಚ್ಚಿಹಾಕಿ ಇದೊಂದು ಆಕಸ್ಮಿಕ ಸಾವು ಎಂದು ಬಿಂಬಿಸಲು ಸರ್ಕಾರ ವರದಿಯನ್ನೇ ತಿರುಚಿದೆ.
– ಶೋಭಾ ಕರಂದ್ಲಾಜೆ, ಮಾಜಿ ಸಚಿವೆ

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.