Tragic: ಕಿಟಕಿ ಸ್ವಚ್ಛಗೊಳಿಸುವಾಗ ಕಾಲು ಜಾರಿ 5ನೇ ಮಹಡಿಯಿಂದ ಬಿದ್ದು ಗೃಹಿಣಿ ಸಾವು
Team Udayavani, Dec 11, 2023, 10:55 AM IST
ಮಹದೇವಪುರ: ಮನೆಯೊಳಗಿನ ಕಿಟಕಿ ಸ್ವಚ್ಛಗೊಳಿಸುವಾಗ ಮಹಿಳೆಯೊಬ್ಬರು ಕಾಲು ಜಾರಿ 5ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಬನಹಳ್ಳಿಯ ಬಿಡಿಎ ವಿಂಧ್ಯಗಿರಿ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ.
ಗುಜರಾತ್ ಮೂಲದ ಖುಷ್ಬು ಅಶೀಷ್ ತ್ರಿವೇದಿ (31) ಮೃತರು. ಡಿ.8ರಂದು ಬೆಳಗ್ಗೆ 11 ಗಂಟೆಗೆ ಖುಷ್ಬು ಮನೆಯ ಒಳಭಾಗದಿಂದ ಟೇಬಲ್ ಮೇಲೆ ನಿಂತು ಕಿಟಕಿಯ ಧೂಳು ಒರೆಸುತ್ತಿದ್ದರು. ಈ ವೇಳೆ ಕಾಲು ಜಾರಿ ಆಯತಪ್ಪಿ ಕಿಟಕಿಯಿಂದ ಕೆಳಗೆ ಬಿದ್ದಿದ್ದಾರೆ. ತಲೆಗೆ ತೀವ್ರ ಗಾಯವಾಗಿ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಖುಷುº ಅವರನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಆದರೆ, ಮಾರ್ಗ ಮಧ್ಯೆಯೇ ಅವರು ಮೃತಪಟ್ಟಿದ್ದರು ಎಂದು ಪೊಲೀಸರು ಹೇಳಿದರು.
ಖುಷ್ಬು ಅವರು, ಇತ್ತೀಚೆಗಷ್ಟೇ ಗುಜರಾತ್ ಮೂಲದ ಸಾಫ್ಟ್ವೇರ್ ಎಂಜಿನಿಯರ್ ಆಶೀಷ್ ತ್ರಿವೇದಿಯನ್ನು ಮದುವೆಯಾಗಿದ್ದು, ವಿಂಧ್ಯಾಗಿರಿ ಅಪಾರ್ಟ್ ಮೆಂಟ್ನ 5ನೇ ಮಹಡಿಯಲ್ಲಿರುವ ಫ್ಲ್ಯಾಟ್ನಲ್ಲಿ ವಾಸವಾಗಿದ್ದರು. ದುರ್ಘಟನೆ ವೇಳೆ ಪತಿ ಆಶೀಷ್ ತ್ರಿವೇದಿ ಮನೆಯಲ್ಲಿ ಇರಲಿಲ್ಲ.
ಘಟನೆಗೆ ಗ್ರೀಲ್ ಅಳವಡಿಸದಿರುವುದೇ ಕಾರಣ: ಬಿಡಿಎ ನಿರ್ಮಿಸಿರುವ ವಿಂಧ್ಯಾಗಿರಿ ಅಪಾರ್ಟ್ ಮೆಂಟ್ನಲ್ಲಿ 18 ಮಹಡಿಯ 750 ಫ್ಲ್ಯಾಟ್ಗಳಿವೆ. ಅವರ ಕಿಟಕಿಗಳಿಗೆ ಯಾವುದೇ ಗ್ರೀಲ್ಗಳನ್ನು ಅಳವಡಿಸಿಲ್ಲ. ಹೀಗಾಗಿ ಅವಘಡ ಸಂಭವಿಸಿದೆ. ಅಲ್ಲದೆ, ಈ ಅಪಾರ್ಟ್ಮೆಂಟ್ನಲ್ಲಿ ತುರ್ತು ನಿರ್ಗಮನ ದ್ವಾರ, ಪ್ರಥಮ ಚಿಕಿತ್ಸೆ, ಫೈರ್ ಸೇಪ್ಟಿ, ಇತರೆ ಸುರಕ್ಷತಾ ಕ್ರಮಗಳು ಇಲ್ಲ ಎಂಬ ಆರೋಪಗಳು ಕೇಳಿ ಬಂದಿವೆ. ಈ ದುರ್ಘಟನೆಗೆ ವಿಂಧ್ಯಗಿರಿ ವಸತಿ ಸಮುಚ್ಚಯದ ಅಸೋಸಿಯೇಷನ್ನ ನಾರಾಯಣಸ್ವಾಮಿ, ಬಿಡಿಎ ಅಧಿಕಾರಿಗಳಾದ ಎಇಇ ಉದಯ ಕುಮಾರ್, ಇಇ ಮೋಹನ್, ಎಇ ಸುನೀಲ್ ಅವರೇ ನೇರ ಹೊಣೆಯಾಗಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ಸುಭಾಷ್ಎಂಬವರು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
Job Opportunities:ಪಂಜಾಬ್ and ಸಿಂಧ್ ಬ್ಯಾಂಕ್-213 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್ ಆಫ್ ಯುಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.