ನನ್ನ ಪ್ರಾಣಕ್ಕೆ ಕುತ್ತು ಬಂದರೆ ಎಸಿಪಿ ಹೊಣೆ


Team Udayavani, Nov 26, 2017, 12:39 PM IST

nanna-prana.jpg

ಬೆಂಗಳೂರು: “ಭೂಗತ ಜಗತ್ತಿನ ಹೆಸರಿನಲ್ಲಿ ಅನಾಮಿಕ ವ್ಯಕ್ತಿಗಳಿಂದ ಜೀವ ಬೆದರಿಕೆ ಕರೆಗಳು ಬರುತ್ತಿದ್ದು, ಒಂದು ವೇಳೆ ನನ್ನ ಪ್ರಾಣಕ್ಕೆ ಕುತ್ತು ಬಂದರೆ ಅದಕ್ಕೆ ಆರ್‌ಟಿ ನಗರ ಠಾಣೆಯ ಎಸಿಪಿ ಮುಂಜುನಾಥ್‌ ಬಾಬು ನೇರ ಹೊಣೆಗಾರರಾಗುತ್ತಾರೆ,’ ಎಂದು ಶೆಟ್ಟಿ ಲಂಚ್‌ ಹೋಮ್‌ ಮಾಲೀಕ ರಾಜೀವ್‌ ಶೆಟ್ಟಿ ಹೇಳಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶೆಟ್ಟಿ, “ದಿನ್ನೂರಿನ ತಮ್ಮ ಹೋಟೆಲ್‌ನ ಲ್ಯಾಂಡ್‌ ಲೈನ್‌ ಫೋನ್‌ಗೆ ಭೂಗತ ಲೋಕದ ಹೆಸರಿನಲ್ಲಿ ಅನಾಮಿಕ ಕರೆಗಳು ಬರುತ್ತಿವೆ. ತುಳು ಮತ್ತು ಹಿಂದಿಯಲ್ಲಿ ಮಾತನಾಡುವ ವ್ಯಕ್ತಿಗಳು, ಹೋಟೆಲ್‌ ಬಿಟ್ಟು ತೊಲಗದಿದ್ದರೆ ಗುಂಡಿಕ್ಕಿ ಹತ್ಯೆ ಮಾಡುತ್ತೇವೆ ಎಂದು ಬೆದರಿಸುತ್ತಿದ್ದಾರೆ. ಹೀಗಾಗಿ ನನಗೆ ಪ್ರಾಣ ಭಯ ಶುರುವಾಗಿದೆ,’ ಎಂದು ಕಣ್ಣೀರಿಟ್ಟರು.

ರಾಜಿ ಮಾಡ್ಕೊ ಅಂತಾರೆ: “ಹೀಗೆ ಕರೆ ಮಾಡುವ ಅನಾಮಿಕರಲ್ಲಿ ಕೆಲವರು, ಪ್ರಕರಣವನ್ನು ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಿ ಎಂದು ಒತ್ತಡ ಹಾಕುತ್ತಿದ್ದಾರೆ. ಈ ಮೂಲಕ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ. ರಾಜಿಗೆ ನಾನು ಒಪ್ಪುವುದಿಲ್ಲ. ಒಂದು ವೇಳೆ ರಾಜಿ ನಡೆಯುವುದೇ ಆದರೆ ಮಾಧ್ಯಮಗಳ ಮುಂದೆ ನಡೆಯಲಿ.

ಒಟ್ಟಿನಲ್ಲಿ ನನಗೆ ನ್ಯಾಯ ಸಿಗಬೇಕು,’ ಎಂದು ರಾಜೀವ್‌ ಶೆಟ್ಟಿ ಹೇಳಿದರು. “ಬೆದರಿಕೆ ಕರೆಗಳನ್ನು ನೆನೆದು ನನಗೆ ರಾತ್ರಿ ನಿದ್ದೆ ಬರುತ್ತಿಲ್ಲ. ಜೀವಭಯದಿಂದಾಗಿ ಹೋಟೆಲ್‌ ಕಡೆ ತೆರಳಲು ಕೂಡ ಆಗುತ್ತಿಲ್ಲ. ಹೀಗಾಗಿ ಹೋಟೆಲ್‌ ಉದ್ಯಮದಲ್ಲಿ ನಷ್ಟವಾಗುತ್ತಿದೆ.

ನಾನು ನಿಯಮ ಉಲ್ಲಂ ಸಿದ್ದರೆ ಅಧಿಕಾರಿಗಳು ನನಗೆ ನೋಟಿಸ್‌ ನೀಡಿ ಎಚ್ಚರಿಸಬಹುದಿತ್ತು. ಆದರೆ ಅದನ್ನು ಮಾಡದೇ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಒಂದೊಮ್ಮೆ ನಾನು ತಪ್ಪು ಮಾಡಿದ್ದರೆ ನನಗೆ ಶಿಕ್ಷೆಯಾಗಲಿ,’ ಎಂದ ಅವರು, ತಮಗೆ ಬೆಂಬಲವಾಗಿ ನಿಂತ ಬಂಟರ ಸಂಘ ಮತ್ತು ಹೋಟೆಲ್‌ ಉದ್ಯಮದವರಿಗೆ ಧನ್ಯವಾದ ಹೇಳಿದರು.

ಗೃಹ ಸಚಿವರು ಮಧ್ಯೆ ಪ್ರವೇಶಿಸಲಿ: ಪ್ರಕರಣ ಸಂಬಂಧ ಪೋಲಿಸ್‌ ಆಯುಕ್ತರಿಗೆ ದೂರು ನೀಡಿದರೂ ತಪ್ಪಿತಸ್ಥ ಅಧಿಕಾರಿ ವಿರುದ್ಧ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಪ್ರಕರಣದಲ್ಲಿ ಮಧ್ಯ ಪ್ರವೇಶ ಮಾಡಿ ನ್ಯಾಯದೊರಕಿಸಿ ಕೊಡಬೇಕು.

ಅಲ್ಲದೆ  ರಾಜೀವ್‌ ಶೆಟ್ಟಿ ಕುಟುಂಬಕ್ಕೆ ಭದ್ರತೆ ನೀಡಬೇಕು ಎಂದು ಬಂಟರ ಸಂಘ ಬೆಂಗಳೂರು ವಿಭಾಗದ ಗೌರವ ಕಾರ್ಯದರ್ಶಿ ಸಂತೋಷ್‌ ಶೆಟ್ಟಿ ಆಗ್ರಹಿಸಿದ್ದಾರೆ. ತಪ್ಪಿತಸ್ಥ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಬಂಟರ ಸಂಘ, ವಿವಿಧ ಸಂಘಟನೆಗಳ ಜತೆಗೂಡಿ ಹಂತ ಹಂತವಾಗಿ ಹೋರಾಟ ನಡೆಸಲಿದೆ ಎಂದರು.

ಪ್ರಕರಣದ ವಿಚಾರಣೆ ಮಂದಗತಿಯಲ್ಲಿ ನಡೆಯುತ್ತಿದೆ. ವಿಳಂಬವಾದಷ್ಟೂ ಇಡೀ ಪ್ರಕರಣ ದಿಕ್ಕು ತಪ್ಪುವ ಸಾಧ್ಯತೆ ಇದೆ. ಆಗತ್ಯ ಬಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಾಗುವುದು.
-ಡಿ.ಚಂದ್ರಹಾಸ್‌ ರೈ, ಬಂಟರ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

DVG-1

Davanagere: ನಾಪತ್ತೆಯಾಗಿದ್ದ ವ್ಯಕ್ತಿ ಅಣಜಿ ಕೆರೆ ಬಳಿ ಅಸ್ಥಿಪಂಜರವಾಗಿ ಪತ್ತೆ!

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Many leaders left BJP and joined JMM

Jharkhand: ಬಿಜೆಪಿ ತೊರೆದು ಜೆಎಂಎಂ ಸೇರಿದ ಹಲವು ನಾಯಕರು!

Mandya; Kidnapper bites his hand and escapes; A cinematic kind of case

Mandya; ಕಿಡ್ನ್ಯಾಪರ್‌ ಕೈಗೆ ಕಚ್ಚಿ ತಪ್ಪಿಸಿಕೊಂಡ ಬಾಲಕ; ಸಿನಿಮೀಯ ರೀತಿಯ ಪ್ರಕರಣ

Vijayapura: ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು, ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

Vijayapura: ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು, ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

S.-Lad

By Poll: ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್‌ ಪಕ್ಷಕ್ಕೆ ಬಂದ್ರೆ ಸ್ವಾಗತಿಸುವೆ: ಸಂತೋಷ್ ಲಾಡ್‌

ಸತೀಶ್‌ ಜಾರಕಿಹೊಳಿ

Belagavi: ಸಿಪಿವೈ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಮಾಹಿತಿ ಇಲ್ಲ: ಸತೀಶ್‌ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain-Kendriya

Cloud Burst: ಬೆಂಗಳೂರಿನ ಯಲಹಂಕದಲ್ಲಿ ದಾಖಲೆಯ ಮಳೆ; 10 ಬಡಾವಣೆ ಜಲಾವೃತ

Under construction building collapses in Bengaluru

Bengaluru: ಕುಸಿದ ನಿರ್ಮಾಣ ಹಂತದ ಕಟ್ಟಡ; ಮೂವರು ಸಾವು, ಹಲವರು ಸಿಲುಕಿರುವ ಶಂಕೆ

Crime: ನಿಧಾನವಾಗಿ ಮಾತನಾಡಿ ಎಂದಿದ್ದಕ್ಕೆ  ಗಲಾಟೆ; ಪಾನಿಪೂರಿ ವ್ಯಾಪಾರಿ ಹತ್ಯೆ

Crime: ನಿಧಾನವಾಗಿ ಮಾತನಾಡಿ ಎಂದಿದ್ದಕ್ಕೆ  ಗಲಾಟೆ; ಪಾನಿಪೂರಿ ವ್ಯಾಪಾರಿ ಹತ್ಯೆ

Bengaluru Rain: ಪರಿಹಾರ ಕಾರ್ಯಕ್ಕೆ 1,000 ಕೋಟಿ ನೀಡಿ; ಅಶೋಕ್‌

Bengaluru Rain: ಪರಿಹಾರ ಕಾರ್ಯಕ್ಕೆ 1,000 ಕೋಟಿ ನೀಡಿ; ಅಶೋಕ್‌

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

kas-a

Kasaragod ಅಪರಾಧ ಸುದ್ದಿಗಳು

PKL 11: Hattrick defeat for Bengaluru Bulls

PKL 11: ಬುಲ್ಸ್‌ ಗೆ ಹ್ಯಾಟ್ರಿಕ್‌ ಸೋಲು

DVG-1

Davanagere: ನಾಪತ್ತೆಯಾಗಿದ್ದ ವ್ಯಕ್ತಿ ಅಣಜಿ ಕೆರೆ ಬಳಿ ಅಸ್ಥಿಪಂಜರವಾಗಿ ಪತ್ತೆ!

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Agriculture Minister Shivraj Chouhan to the budget announcement implementation committee

ಬಜೆಟ್‌ ಘೋಷಣೆ ಅನುಷ್ಠಾನ ಸಮಿತಿಗೆ ಕೃಷಿ ಸಚಿವ ಶಿವರಾಜ್‌ ಚೌಹಾಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.