ಎಚ್ಚೆತ್ತುಕೊಳ್ಳದಿದ್ದರೆ ನೀರಿಗೆ ಪರದಾಟ ತಪ್ಪಲ್ಲ


Team Udayavani, Apr 18, 2019, 3:00 AM IST

yechcethu

ಬೆಂಗಳೂರು: ನೀರಿನ ಸಂರಕ್ಷಣೆ ವಿಚಾರದಲ್ಲಿ ಈ ಕೂಡಲೇ ಬೆಂಗಳೂರಿನ ಜನ ಎಚ್ಚೆತ್ತುಕೊಳ್ಳದಿದ್ದರೆ, ಭವಿಷ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದ ಪರದಾಡಬೇಕಾಗುತ್ತದೆ ಎಂದು ಜಲಮಂಡಳಿ ನಿವೃತ್ತ ಮುಖ್ಯ ಇಂಜಿನಿಯರ್‌ ಡಾ.ಪಿ.ಎನ್‌.ರವೀಂದ್ರ ಹೇಳಿದರು.

ಕರ್ನಾಟಕ ಸೀನಿಯರ್‌ ಇಂಜಿನಿಯರ್ ಫೋರಂ ವತಿಯಿಂದ ಬುಧವಾರ ಕಮಲನಗರದ ಕರ್ನಾಟಕ ಇಂಜಿನಿಯರ್‌ ಅಕಾಡೆಮಿಯಲ್ಲಿ ಆಯೋಜಿಸಿದ್ದ “ಬೆಂಗಳೂರು ನೀರು ಪೂರೈಕೆ- ಸಮಸ್ಯೆಗಳು, ಸವಾಲುಗಳು ಮತ್ತು ಪರಿಹಾರಗಳು’ ಕುರಿತ ತಾಂತ್ರಿಕ ಉಪನ್ಯಾಸದಲ್ಲಿ ಮಾತನಾಡಿದ ಅವರು, ಈ ಹಿಂದೆ ಇದ್ದ ಬೆಂಗಳೂರಿನ ಪ್ರಮುಖ ಜಲ ಮೂಲಗಳು ಬರಿದಾಗಿವೆ.

ನಗರದ ಬಹುಪಾಲು ನೀರಿಗೆ ಕಾವೇರಿ ನದಿಯನ್ನೇ ಅವಲಂಬಿಸಲಾಗಿದೆ. ಇನ್ನೊಂದೆಡೆ ಬೆಂಗಳೂರಿಗೆ ವಲಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು, ವರ್ಷದಿಂದ ವರ್ಷಕ್ಕೆ ಲಕ್ಷ ಪ್ರಮಾಣದಲ್ಲಿ ಜನಸಂಖ್ಯೆ ಹೆಚ್ಚಳವಾಗುತ್ತಿದೆ. ಅಂತೆಯೇ ಅವರಿಗೂ ನೀರಿನ ಅವಶ್ಯಕತೆ ಇದ್ದು, ನೀರಿಗೆ ಬೇಡಿಕೆಯೂ ಹೆಚ್ಚಾಗುತ್ತಿದೆ.

ಆದರೆ, ಈ ಬೇಡಿಕೆಗೆ ತಕ್ಕಂತೆ ಜಲಮಂಡಳಿಗೆ ನೀರು ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ನೀರಿನ ಸಂರಕ್ಷಣೆ ಕುರಿತು ನಗರವಾಸಿಗಳು ಎಚ್ಚೆತ್ತುಕೊಳ್ಳುವುದು ಹಾಗೂ ಸರ್ಕಾರ ಬದಲಿ ಜಲ ಮೂಲಗಳನ್ನು ವ್ಯವಸ್ಥೆ ಮಾಡಿಕೊಳ್ಳುವ ಅವಶ್ಯಕತೆ ಹೆಚ್ಚಿದೆ ಎಂದರು.

ಲಭ್ಯವಿರುವ ನೀರನ್ನು ಪ್ರಜ್ಞಾಪೂರ್ವಕ ಬಳಕೆ, ಮನೆಗಳಿಗೆ ಮಳೆನೀರು ಕೊಯ್ಲು ಅಳವಡಿಸಿಕೊಂಡು ಅಂತರ್ಜಲ ಪ್ರಮಾಣ ಹೆಚ್ಚಿಸಿಕೊಳ್ಳುವುದು ಹಾಗೂ ಮಳೆ ನೀರನ್ನು ನಿತ್ಯ ಚಟುವಟಿಕೆಗೆ ಬಳಕೆ ಮಾಡುವುದು. ಶುದ್ಧೀಕರಿಸಿದ ನೀರಿನ ಮರುಬಳಕೆಗೆ ಮುಂದಾಗುವುದು ಪ್ರಮುಖ ನೀರು ಸಂರಕ್ಷಣಾ ಮಾರ್ಗಗಳಾಗಿವಿವೆ ಎಂದು ಸಲಹೆ ನೀಡಿದರು.

ವರ್ಷದಿಂದ ವರ್ಷಕ್ಕೆ ನೀರಿನ ಗುಣಮಟ್ಟದ ಕಡಿಮೆಯಾಗುತ್ತಿದೆ. ಇದಕ್ಕೆ ಪರಿಸರ ಹಾಗೂ ಜೈವಿಕ ಮಾಲಿನ್ಯ ಕಾರಣ. ಅದರಲ್ಲೂ ಬೇಸಿಗೆ ಸಮಯದಲ್ಲಿ ನದಿಗಳು ಹೆಚ್ಚು ಮಲಿನವಾಗುತ್ತಿದ್ದು, ಇದಕ್ಕೆ ಜನರೇ ಕಾರಣರಾಗಿದ್ದಾರೆ. ಹವಾಮಾನ ವೈಪರಿತ್ಯದಿಂದ ಮಳೆ ಪ್ರಮಾಣವೂ ಕಡಿಮೆಯಾಗುತ್ತಿದ್ದು, ಅಂತರ್ಜಲ ಕುಸಿಯುತ್ತಿದೆ.

ಜನ ನೀರಿನ ಸಂರಕ್ಷಣೆಗೆ ಒತ್ತು ನೀಡದಿದ್ದರೆ ಭವಿಷ್ಯದಲ್ಲಿ ಎಲ್ಲೆಡೆ ನೀರಿನ ಬವಣೆ ಎದುರಿಸಬೇಕಾಗುತ್ತದೆ ಎಂದು ತಿಳಿಸಿದರು. ಕರ್ನಾಟಕ ಸೀನಿಯರ್‌ ಇಂಜಿನಿಯರ್ ಫೋರಂನ ಅಧ್ಯಕ್ಷ ಕ್ಯಾಪ್ಟನ್‌ ರಾಜಾ ರಾವ್‌ ಮಾತನಾಡಿ, ಬೆಂಗಳೂರು ನಗರ ಕಾಂಕ್ರಿಟ್‌ ಕಾಡಾಗಿದ್ದು, ಅಂತರ್ಜಲ ಪ್ರಮಾಣ ಸಾಕಷ್ಟು ಕುಗ್ಗುತ್ತಿದೆ. ಕಳೆದ 4 -5 ವರ್ಷಗಳಿಂದ ಸರ್ಕಾರವು ಟೆಂಡರ್‌ ಶೂರ್‌ ಯೋಜನೆ ಮೂಲಕ ಕಾಂಕ್ರಿಟ್‌ ರಸ್ತೆಗಳ ನಿರ್ಮಾಣಕ್ಕೆ ಮುಂದಾಗಿದೆ.

ಮಳೆಯ ನೀರು ಇಂಗಲು ಈ ರಸ್ತೆಗಳು ಅಡ್ಡಿಯಾಗಿವೆ. ಹೀಗಾಗಿ, ಮಳೆಯ ನೀರು ರಾಜಕಾಲವೆ, ಚರಂಡಿಗಳ ಮೂಲಕ ಹರಿದು ನಗರದಿಂದ ಆಚೆ ಹೋಗುತ್ತಿದೆ. ಈ ರೀತಿ ಭೂಮಿಗೆ ಬಿದ್ದ ನೀರು ಚರಂಡಿಯಲ್ಲಿ ಹರಿದು ಹೋದರೆ, ಅಂತರ್ಜಲ ಮರುಪೂರಣವಾಗುಲು ಸಾಧ್ಯವಿಲ್ಲ ಎಂದರು. ಬೆಂಗಳೂರು ಜಲಮಂಡಳಿ ನೀರು ಪೂರೈಕೆಗೆ ಮಾತ್ರ ಒಂದಿಷ್ಟು ಆದ್ಯತೆ ನೀಡುತ್ತಿದ್ದು, ಒಳಚರಂಡಿ ವ್ಯವಸ್ಥೆಯನ್ನು ಸುಸಜ್ಜಿತವಾಗಿಸುತ್ತಿಲ್ಲ.

800 ಚದರ ಕಿ.ಮೀ.ವ್ಯಾಪ್ತಿಯಿರುವ ಬೆಂಗಳೂರು ನಗರಕ್ಕೆ ಪೂರ್ಣ ಪ್ರಮಾಣದಲ್ಲಿ ಒಳಚರಂಡಿ ವ್ಯವಸ್ಥೆಯಿಲ್ಲ. ಜಲಮಂಡಳಿ ಹಾಗೂ ಸರ್ಕಾರ ಸುಸಜ್ಜಿತ ಒಳಚರಂಡಿ ಕಲ್ಪಿಸಲು ಹೆಚ್ಚಿನ ಆದ್ಯತೆ ನೀಡಬೇಕು. ಮುಖ್ಯವಾಗಿ ಈ ಒಳಚರಂಡಿ ವ್ಯವಸ್ಥೆಯಿಂದ ಕೊಳಚೆ ನೀರನ್ನು ಶುದ್ಧೀಕರಿಸಿ ಮರುಬಳಕೆ ಮಾಡಬಹುದು ಅಥವಾ ನಗರದ ಕೆರೆಗಳಿಗೆ ಹರಿಸಿ ಅಂತರ್ಜಲ ಮರುಪೂರಣ ಮಾಡಬಹುದು ಎಂದು ಹೇಳಿದರು.

ಇಂಜಿನಿಯರ್ ಫೋರಂನ ಉಪಾಧ್ಯಕ್ಷ ಬಿ.ಶ್ರೀನಿವಾಸ್‌, ಹಣಕಾಸು ನಿರ್ದೇಶಕ ಎಸ್‌.ಮೃತ್ಯುಂಜಯ, ಜಯರಾಂ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.