ಆಹಾರಧಾನ್ಯದ ಜತೆಗೆ ಇನ್ನು ಬೇಳೆಕಾಳು ಭಾಗ್ಯ


Team Udayavani, Jan 31, 2017, 12:06 PM IST

ut-khader.jpg

ಬೆಂಗಳೂರು: ಅನ್ನಭಾಗ್ಯ ಯೋಜನೆ ಯಡಿ ಬಿಪಿಎಲ್‌ ಕಾರ್ಡ್‌ದಾರರಿಗೆ ಆಹಾರ ಧಾನ್ಯಗಳ ಜತೆ ಬೇಳೆಕಾಳು ನೀಡುವ ರಾಜ್ಯದ ಮಹತ್ವಾಕಾಂಕ್ಷಿ ಕಾರ್ಯಕ್ರಮ ಫೆಬ್ರವರಿಯಿಂದಲೇ ಜಾರಿಯಾಗಲಿದ್ದು, ಮೊದಲ 3 ತಿಂಗಳು ಹೆಸರುಕಾಳು ಆ ನಂತರ ತೊಗರಿಬೇಳೆ ದೊರೆಯಲಿದೆ.

ಹೆಸರುಕಾಳು ಪ್ರತಿ ಕೇಜಿಗೆ 33 ರೂ, ತೊಗರಿಬೇಳೆ 40 ರೂ. ದರದಲ್ಲಿ ಬಿಪಿಎಲ್‌ ಕಾರ್ಡ್‌ದಾರರಿಗೆ ನೀಡಲಾಗುವುದು. ಒಂದು ಕುಟುಂಬಕ್ಕೆ ಒಂದು ಕೇಜಿ ದೊರೆಯಲಿದೆ. ಕ್ರಮವಾಗಿ 3 ತಿಂಗಳು ಹೆಸರು ಕಾಳು, ಮೂರು ತಿಂಗಳು ತೊಗರಿಬೇಳೆಯಂತೆ ವರ್ಷವಿಡೀ ನೀಡಲಾಗುವುದು. ಬಿಪಿಎಲ್‌ ಪಡಿತರ ಕಾರ್ಡ್‌ಗಳಿಗೆ ಬೇಳೆಕಾಳು ವಿತರಣೆ ಹಾಗೂ ಆನ್‌ಲೈನ್‌ನಲ್ಲಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಮಂಗಳವಾರ ವಿಧಾನಸೌಧದ ಬಾಂಕ್ವೆಂಟ್‌ ಸಭಾಂಗಣದಲ್ಲಿ ಚಾಲನೆ ನೀಡಲಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಆಹಾರ ಸಚಿವ ಯು.ಟಿ. ಖಾದರ್‌, ಬಿಪಿಎಲ್‌ ಪಡಿತರ ಚೀಟಿ ಪಡೆಯಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ, ಸಬ್ಸಿಡಿ ದರದಲ್ಲಿ ಹೆಸರುಕಾಳು ನೀಡುವ, ಮುಕ್ತ ಮಾರುಕಟ್ಟೆಯಲ್ಲಿ ಬಿಳಿ ಸೀಮೆಎಣ್ಣೆ ಮಾರಾಟ ಹಾಗೂ ನ್ಯಾಯಬೆಲೆ ಅಂಗಡಿಗಳಲ್ಲೇ ಕೂಪನ್‌ ವಿತರಣೆ ಯೋಜನೆಯನ್ನು ಮುಖ್ಯ ಮಂತ್ರಿಯವರು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ಬಿಪಿಎಲ್‌ ಪಡಿತರ ಚೀಟಿ ವಿತರಣೆಯಲ್ಲಿನ ಅನಗತ್ಯ ವಿಳಂಬ ತಪ್ಪಿಸಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಿಸಲಿದ್ದು, ಅರ್ಜಿ ಸಲ್ಲಿಸಿದ 25 ದಿನಗಳೊಳಗಾಗಿ ಪರಿಶೀಲಿಸಿ, ಹೊಸ ಪಡಿತರ ಚೀಟಿ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದರು. ಗ್ರಾಮ ಪಂಚಾಯಿತಿ, ಗ್ರಾಹಕರ ಸೇವಾ ಕೇಂದ್ರ, ನೆಮ್ಮದಿ ಕೇಂದ್ರ, ಪಾಲಿಕೆ ವ್ಯಾಪ್ತಿಯಲ್ಲಿನ ಬೆಂಗಳೂರು ಓನ್‌, ಕರ್ನಾಟಕ ಓನ್‌ ಕೇಂದ್ರಗಳಲ್ಲಿ ಬಿಪಿಎಲ್‌ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿದರು.

ನ್ಯಾಯಬೆಲೆ ಅಂಗಡಿಗಳಲ್ಲೆ ಅರ್ಜಿ ಸಲ್ಲಿಸುವ ವ್ಯವಸ್ಥೆಯನ್ನು ಜಾರಿಗೆ ತರಲು ಉದ್ದೇಶಿಸಿದ್ದು, ಆ ನಿಟ್ಟಿನಲ್ಲಿ ಆಹಾರ ಇಲಾಖೆ ಸಿದ್ದತೆ ನಡೆಸಿದೆ. ಪಡಿತರ ಕೂಪನ್‌ ಅನ್ನು ಇನ್ನೂ ಮುಂದೆ ನ್ಯಾಯಬೆಲೆ ಅಂಗಡಿಗಳಲ್ಲೆ ಪಡೆದುಕೊಳ್ಳಬಹುದು ಎಂದು ತಿಳಿಸಿದರು. ಪಡಿತರ ಬದಲಿಗೆ ನಗದು ನೀಡುವ ಸಂಬಂಧ ಇಲಾಖೆ ಅಗತ್ಯ ಸಾಫ್ಟ್ವೇರ್‌ ಸಿದ್ಧಪಡಿಸಿದೆ. ಆದರೆ, ಆ ಯೋಜನೆ ಜಾರಿಯ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲವೆಂದು ಸ್ಪಷ್ಟಣೆ ನೀಡಿದ ಅವರು, ಬೇಡಿಕೆ ಬಂದ ಹಿನ್ನೆಲೆಯಲ್ಲಿ ಆ ಬಗ್ಗೆ ಚಿಂತನೆ ನಡೆಸಲಾಗಿತ್ತು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪಡಿತರ ಪ್ರಮಾಣ ಹೆಚ್ಚಳಕ್ಕೆ ಚಿಂತನೆ
ಯೂನಿಟ್‌ಗೆ ಪ್ರಸ್ತುತ ನೀಡುತ್ತಿರುವ ಪಡಿತರ ಪ್ರಮಾಣವನ್ನು 5 ರಿಂದ 8 ಕೇಜಿಗೆ ಹೆಚ್ಚಿಸುವ ಚಿಂತನೆ ಇದೆ. 1 ಯೂನಿಟ್‌ಗೆ 8 ಕೇಜಿ, ಎರಡಕ್ಕೆ 16 ಕೇಜಿ ಮತ್ತು ಮೂರು ಯೂನಿಟ್‌ಗೆ 24 ಕೇಜಿ ಪಡಿತರ ನೀಡುವ ಸಂಬಂಧ ಬಜೆಟ್‌ ಪೂರ್ವಭಾವಿ ಸಭೆಯಲ್ಲಿ ಸಿಎಂ ಜತೆಗೆ ಚರ್ಚಿಸಲಾಗುವುದು. ನ್ಯಾಯಬೆಲೆ ಅಂಗಡಿಗಳಿಂದ ಪ್ರತಿ ತಿಂಗಳ ವಿತರಣೆ ಮತ್ತು ಉಳಿದ ದಾಸ್ತಾನಿನ ಮಾಹಿತಿ ನೀಡುವುದನ್ನು ಕಡ್ಡಾಯಗೊಳಿಸಿದ ಕಾರಣ ಜನವರಿ ತಿಂಗಳ ಪಡಿತರ ವಿತರಣೆಯಲ್ಲಿ ವ್ಯತ್ಯಯವಾಗಿದ್ದು ಫೆ.5ರ ವರೆಗೆ ಪಡಿತರ ವಿತರಣೆಗೆ ಸೂಚಿಸಲಾಗಿದೆ. ಫೆಬ್ರವರಿ ತಿಂಗಳ ಪಡಿತರ ವಿತರಣೆ 10ರಿಂದ ಆರಂಭಿಸಲಾಗುವುದು.
-ಯು.ಟಿ.ಖಾದರ್‌, ಆಹಾರ ಸಚಿವ

ಟಾಪ್ ನ್ಯೂಸ್

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.