ನ.10ರ ಜಿಎಸ್‌ಟಿ ಸಭೆಯಲ್ಲಿ ಸರಕುಗಳ ತೆರಿಗೆ ಇಳಿಕೆ ಸಾಧ್ಯತೆ 


Team Udayavani, Oct 29, 2017, 6:40 AM IST

28BNP-(23).jpg

ಬೆಂಗಳೂರು: “ಮುಂದಿನ ತಿಂಗಳ ಜಿಎಸ್‌ಟಿ ಕೌನ್ಸಿಲ್‌ ಸಭೆಯಲ್ಲಿ ಆಯ್ದ ಸರಕು ಸೇವೆಗಳ ತೆರಿಗೆ ಪ್ರಮಾಣ ಇಳಿಕೆ ಮಾಡುವ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ಜಿಎಸ್‌ಟಿ ನೆಟ್‌ವರ್ಕ್‌ಅನ್ನು ಬಳಕೆದಾರ ಸ್ನೇಹಿಯನ್ನಾಗಿಸಿ ಸರಳಗೊಳಿಸುವಂತೆ ಇನ್ಫೋಸಿಸ್‌ ಸಂಸ್ಥೆಗೆ ಸೂಚಿಸಲಾಗಿದೆ’ ಎಂದು ಜಿಎಸ್‌ಟಿ ನೆಟ್‌ವರ್ಕ್‌ನ ಸಚಿವರ ತಂಡದ ಮುಖ್ಯಸ್ಥರಾದ ಬಿಹಾರದ ಉಪಮುಖ್ಯಮಂತ್ರಿ ಸುಶೀಲ್‌ ಕುಮಾರ್‌ ಮೋದಿ ತಿಳಿಸಿದರು.

ಶನಿವಾರ ಸಮಿತಿಯ 3ನೇ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, “ಜಿಎಸ್‌ಟಿಯಡಿ ವ್ಯವಹರಿಸುವಲ್ಲಿ ಎದುರಾಗಿರುವ ಸಮಸ್ಯೆ, ತಾಂತ್ರಿಕ ಸವಾಲು, ಅನುಷ್ಠಾನದಲ್ಲಿನ ದೋಷಗಳ ಬಗ್ಗೆ ಸಲ್ಲಿಕೆಯಾಗುವ ಮಾಹಿತಿ, ಸಲಹೆಗಳನ್ನು ಜಿಎಸ್‌ಟಿ ಮಂಡಳಿ ಸಭೆಯ ಗಮನಕ್ಕೆ ತರಲಾಗುತ್ತಿದೆ. ಅ.6ರ ಜಿಎಸ್‌ಟಿ ಕೌನ್ಸಿಲ್‌ ಸಭೆಯಲ್ಲಿ ಹಲವು ಸರಕುಗಳ ತೆರಿಗೆ ಪ್ರಮಾಣ ಇಳಿಕೆ ಮಾಡಲಾಗಿದೆ. ಅದೇ ರೀತಿ ನ.10ರಂದು ನಡೆಯಲಿರುವ ಸಭೆಯಲ್ಲಿ ಆಯ್ದ ಸರಕು, ಸೇವೆಗಳ ತೆರಿಗೆ ಪ್ರಮಾಣ ಶೇ.28ರಿಂದ ಶೇ.18ಕ್ಕೆ ಇಳಿಕೆ ಸೇರಿ ನಾನಾ ಹಂತದ ತೆರಿಗೆ ಪರಿಷ್ಕರಣೆ ಸಾಧ್ಯತೆ ಇದೆ ಎಂದು ಹೇಳಿದರು.

ಈ ಹಿಂದೆ ಜಾರಿಯಲ್ಲಿದ್ದ ತೆರಿಗೆ ವ್ಯವಸ್ಥೆಯನ್ನು ಜಿಎಸ್‌ಟಿ ತೆರಿಗೆ ವ್ಯವಸ್ಥೆಯಡಿ ಏಕರೂಪದಲ್ಲಿ ಒಗ್ಗೂಡಿಸುವ ಕೆಲಸ ಸಾಕಷ್ಟು ಸವಾಲಿನದ್ದಾಗಿದೆ. ಹಾಗಾಗಿ ನೆಟ್‌ ವರ್ಕ್‌ಗೆ ಸಂಬಂಧಪಟ್ಟಂತೆ ಸಮಸ್ಯೆ, ಸವಾಲು ವ್ಯಾಪಕವಾಗಿವೆ. ಪ್ರಮುಖವಾದ 47 ತಾಂತ್ರಿಕ ಸವಾಲು, ಸಮಸ್ಯೆಗಳನ್ನು ಗುರುತಿಸಿ ಇದರಲ್ಲಿ 27 ಸವಾಲುಗಳ ನ್ನು ಅ.31ರೊಳಗೆ ಬಗೆಹರಿಸುವಂತೆ ಇನ್ಫೋಸಿಸ್‌ ಸಂಸ್ಥೆಗೆ ಗಡುವು ನೀಡಲಾಗಿತ್ತು. ಆದರೆ ಅ.28ರವರೆಗೆ 18 ಮಾತ್ರ ಬಗೆಹರಿದಿದ್ದು, ಶೇ.67.7ರಷ್ಟು ಗುರಿ ಸಾಧನೆಯಾದಂತಾಗಿದೆ. ಬಾಕಿಯಿರುವ ತಾಂತ್ರಿಕ ಸವಾಲುಗಳ ಜತೆಗೆ ಇನ್ನೂ ಕೆಲವು ಸಮಸ್ಯೆಗಳನ್ನು ಕಾಲಮಿತಿಯೊಳಗೆ ಬಗೆಹರಿಸುವಂತೆಯೂ ಸೂಚಿಸಲಾಗಿದೆ ಎಂದು ವಿವರಿಸಿದರು.ಸಮಿತಿಯಲ್ಲಿರುವ ಸಚಿವ ಕೃಷ್ಣ ಬೈರೇಗೌಡ, ತೆಲಂಗಾಣ ಸಚಿವ ಚೆಲ್ಲಂ ರಾಜೇಂದ್ರ, ಜಿಎಸ್‌ಟಿ ನೆಟ್‌ವರ್ಕ್‌ನ
ಎ.ಬಿ.ಪಾಂಡೆ ಇತರರು ಉಪಸ್ಥಿತರಿದ್ದರು.

ತೆರಿಗೆ ಪಾವತಿಸಿದವರ ಸಂಖ್ಯೆ ಇಳಿಕೆ
ಜುಲೈ ತಿಂಗಳ ವಹಿವಾಟಿಗೆ ಸಂಬಂಧಪಟ್ಟಂತೆ 56 ಲಕ್ಷ ಮಂದಿ ಜಿಎಸ್‌ಟಿ ತೆರಿಗೆ ಪಾವತಿಸಿದ್ದರೆ, ಆಗಸ್ಟ್‌ ವಹಿವಾಟಿಗೆ ಸಂಬಂಧಪಟ್ಟಂತೆ 53 ಲಕ್ಷ ಮಂದಿ ತೆರಿಗೆ ಪಾವತಿಸಿದ್ದಾರೆ. ಆದರೆ ಸೆಪ್ಟೆಂಬರ್‌ ವಹಿವಾಟು ಕುರಿತಂತೆ 45.84 ಲಕ್ಷ ಮಂದಿಯಷ್ಟೇ ತೆರಿಗೆ ಪಾವತಿಸಿದ್ದಾರೆ. ತೆರಿಗೆದಾರರ ಸಂಖ್ಯೆ ಇಳಿಕೆಗೆ ಕಾರಣವಾದ ಅಂಶಗಳನ್ನು ಗುರುತಿಸಿ ಪರಿಶೀಲಿಸುವ ಕಾರ್ಯ ನಡೆದಿದೆ ಎಂದು ಸುಶೀಲ್  ಕುಮಾರ್‌ ಮೋದಿ ತಿಳಿಸಿದರು. ಜುಲೈ, ಆಗಸ್ಟ್‌ನಲ್ಲಿ ಜಿಎಸ್‌ಟಿ ತೆರಿಗೆಯಿಂದ 15,060 ಕೋಟಿ ರೂ. ಸಂಗ್ರಹವಾಗಿದೆ. ಇದರಲ್ಲಿ ಅರುಣಾಚಲ ಪ್ರದೇಶ, ರಾಜಸ್ತಾನ ಹೊರತುಪಡಿಸಿ ಉಳಿದ ರಾಜ್ಯಗಳಿಗೆ ಜುಲೈ, ಆಗಸ್ಟ್‌ ತಿಂಗಳ ಪರಿಹಾರವಾಗಿ 8698 ಕೋಟಿ ರೂ. ಪರಿಹಾರ ವಿತರಿಸಲಾಗಿದೆ ಎಂದು ಹೇಳಿದರು.

ಜುಲೈ, ಆಗಸ್ಟ್‌, ಸೆಪ್ಟೆಂಬರ್‌ ತಿಂಗಳ ತೆರಿಗೆ ವಿಳಂಬ ಪಾವತಿಗೆ ದಂಡ ವಿಧಿಸುವುದನ್ನು ಈಗಾಗಲೇ ಕೈಬಿಡಲಾಗಿದೆ. 6 ತಿಂಗಳ ನಂತರ ಪರಿಸ್ಥಿತಿ ಅವಲೋಕಿಸಿ ನಿರ್ಧರಿಸಲಾಗುವುದು.
– ಸುಶೀಲ್‌ ಕುಮಾರ್‌ ಮೋದಿ,
ಜಿಎಸ್‌ಟಿ ನೆಟ್‌ವರ್ಕ್‌ ಸಚಿವರ ತಂಡದ ಮುಖ್ಯಸ್ಥ

ಟಾಪ್ ನ್ಯೂಸ್

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ

Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್

belagaviBelagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Belagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

(Expiry Date)ಔಷಧಗಳ ಅವಧಿ ಮುಗಿಯುವ ದಿನಾಂಕ; ರಾಷ್ಟ್ರೀಯ ಫಾರ್ಮಕೋವಿಜಿಲೆನ್ಸ್‌ ಸಪ್ತಾಹ

Expiry Date; ಔಷಧಗಳ ಅವಧಿ ಮುಗಿಯುವ ದಿನಾಂಕ; ರಾಷ್ಟ್ರೀಯ ಫಾರ್ಮಕೋವಿಜಿಲೆನ್ಸ್‌ ಸಪ್ತಾಹ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ

Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.