Bengaluru: ಕೆಲಸ ಬಿಟ್ಟಿದ್ದಕ್ಕೆ ಯುವಕನ ಬೆತ್ತಲೆಗೊಳಿಸಿದ ಮಾಲೀಕ!
Team Udayavani, Aug 15, 2024, 1:35 PM IST
ಬೆಂಗಳೂರು: ಕೆಲಸ ಬಿಟ್ಟು ಬೇರೆಡೆ ಕೆಲಸಕ್ಕೆ ಸೇರಿಕೊಂಡ ದೂರದ ಸಂಬಂಧಿ ಮೇಲೆ ಹಲ್ಲೆ ನಡೆಸಿ, ಆತನನ್ನು ನಗ್ನಗೊಳಿಸಿ ವಿಡಿಯೋ ಮಾಡಿದ್ದಲ್ಲದೆ, ಗೃಹ ಬಂಧನದಲ್ಲಿರಿಸಿದ ಆರೋಪದಡಿ ಹಾಸಿಗೆ ಮಳಿಗೆ ಮಾಲಿಕನಿಗೆ ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದಾರೆ.
ಆಂಧ್ರಪ್ರದೇಶದ ಮೂಲದ ಷರೀಫ್(22) ಹಲ್ಲೆಗೊಳಗಾದ ಯುವಕ. ಈ ಸಂಬಂಧ ಆತನ ದೂರದ ಸಂಬಂಧಿ ಹಾಗೂ ಹಾಸಿಗೆ ತಯಾರಿಕಾ ಮಳಿಗೆ ಮಾಲಿಕ ಶಕ್ಷಾವಲಿಗೆ ನೋಟಿಸ್ ನೀಡಲಾಗಿದೆ. ಆರೋಪಿ ಶಕ್ಷಾವಲಿ ಸುಬ್ರಮಣ್ಯಪುರದ ಉತ್ತರಹಳ್ಳಿಯಲ್ಲಿ ಹಾಸಿಗೆ ತಯಾರಿಕಾ ಮಳಿಗೆ ನಡೆಸುತ್ತಿದ್ದು, ಅದರಲ್ಲಿ 3 ತಿಂಗಳಿಂದ ಷರೀಫ್ ಕೆಲಸ ಮಾಡಿಕೊಂಡಿದ್ದ. ಈ ಮಧ್ಯೆ 1 ತಿಂಗಳ ಹಿಂದೆ ಷರೀಫ್, ಏಕಾಏಕಿ ಕೆಲಸ ಬಿಟ್ಟು ಬೇರೆಡೆ ಕೆಲಸಕ್ಕೆ ಸೇರಿಕೊಂಡಿದ್ದ. ಅದರಿಂದ ಕೋಪಗೊಂಡಿದ್ದ ಶಕ್ಷಾವಲಿ, ಷರೀಫ್ಗೆ ಕರೆ ಮಾಡಿ ನಿಂದಿಸಿದ್ದಾನೆ. ಅದರಿಂದ ಆಕ್ರೋಶಗೊಂಡ ಷರೀಫ್, ಶಕ್ಷಾವಲಿ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಈ ಹಿನ್ನೆಲೆಯಲ್ಲಿ ಕೋಪಗೊಂಡ ಆರೋಪಿ, ಜುಲೈ 24ರಂದು, ಷರೀಫ್ ಕೆಲಸ ಮಾಡುತ್ತಿದ್ದ ಮಳಿಗೆಗೆ ಹೋಗಿ, ಆತನ ಮೇಲೆ ಹಲ್ಲೆ ನಡೆಸಿ ತನ್ನ ಮನೆಗೆ ಕರೆ ತಂದಿದ್ದಾನೆ. ಬಳಿಕ ಷರೀಫ್ನನ್ನು ನಗ್ನಗೊಳಿಸಿ ಹಲ್ಲೆ ನಡೆಸಿ, ವಿಡಿಯೋ ಮಾಡಿಕೊಂಡಿದ್ದ. ಅಲ್ಲದೆ, 1 ದಿನ ಗೃಹ ಬಂಧನದಲ್ಲಿರಿಸಿ ಕಳುಹಿಸಿದ್ದ ಎಂದು ಪೊಲೀಸರು ಹೇಳಿದರು.
ನಗ್ನ ವಿಡಿಯೋ ವೈರಲ್: ಜುಲೈ 27ರಂದು ಶಕ್ಷಾವಲಿ, ಷರೀಫ್ ವಿರುದ್ಧ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಡಿ ದೂರು ನೀಡಿದ್ದ. ಹೀಗಾಗಿ ಪೊಲೀಸರು ಷರೀಫ್ನನ್ನು ಕರೆದು ಎಚ್ಚರಿಕೆ ನೀಡಿ ಕಳುಹಿಸಿದ್ದರು. ಆದರೆ, ಆ.6ರಂದು ನಗ್ನ ವಿಡಿಯೋ ವೈರಲ್ ಆಗಿತ್ತು. ಈ ಸಂಬಂಧ ಪೊಲೀಸರು ಷರೀಫ್ನನ್ನು ಸಂಪರ್ಕಿಸಿ ಠಾಣೆಗೆ ಕರೆಸಿ ವಿಚಾರಣೆ ನಡೆಸಿದಾಗ ಘಟನೆ ವಿವರಿಸಿದ್ದಾನೆ. ಈ ಬೆನ್ನಲ್ಲೇ ಷರೀಫ್ನಿಂದ ದೂರು ಸ್ವೀಕರಿಸಿ, ಎಫ್ಐಆರ್ ದಾಖಲಿಸಿಕೊಂಡು, ಆರೋಪಿ ಶಕ್ಷಾವಲಿಗೆ ವಿಚಾರಣೆಗೆ ನೋಟಿಸ್ ಜಾರಿಗೊಳಿಸಲಾಗಿದೆ. ಆರೋಪಿ ಹಾಗೂ ದೂರುದಾರ ಸಂಬಂಧಿಗಳಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ
Chamarajanagara: ಲಂಚ ಪಡೆಯುತ್ತಿದ್ದ ಡಿಆರ್ಎಫ್ಒ ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.