ಫ್ಲೈ ಒವರ್‌ನಿಂದ ಬೈಕ್‌ ಬಿದ್ದು ಇಬ್ಬರು ಸಾವು


Team Udayavani, Oct 30, 2022, 11:32 AM IST

ಫ್ಲೈ ಒವರ್‌ನಿಂದ ಬೈಕ್‌ ಬಿದ್ದು ಇಬ್ಬರು ಸಾವು

ಬೆಂಗಳೂರು: ದ್ವಿಚಕ್ರ ವಾಹನದ ಸೈಡ್‌ ಸ್ಟಾಂಡ್‌ ಸಿಮೆಂಟ್‌ ಬ್ಲಾಕ್‌ಗೆ ತಗುಲಿದ ಪರಿಣಾಮ, ಬೈಕ್‌ ಆಯ ತಪ್ಪಿ ಬಿದ್ದು ಇಬ್ಬರು ವಿದ್ಯಾರ್ಥಿ ಗಳು ಮೇಲು ಸೇತುವೆಯಿಂದ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಯಲಹಂಕ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಹಾರಾಷ್ಟ್ರದ ಅಮೋಲ್‌ ಪ್ರಮೋದ್‌ ಆಮ್ಟೆ(29) ಮತ್ತು ದೆಹಲಿಯ ಅಮಿತ್‌ ಸಿಂಗ್‌ (29) ಮೃತ ವಿದ್ಯಾರ್ಥಿಗಳು. ಮತ್ತೂಬ್ಬ ವಿದ್ಯಾರ್ಥಿ ಸೌರವ್‌ ದೇಗೆ ತಲೆಗೆ ಪೆಟ್ಟು ಬಿದ್ದಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಸಂಚಾರ ಪೊಲೀಸರು ಹೇಳಿದರು.

ಎಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ ನಿಪ್ಟಿ ಕಾಲೇಜಿನಲ್ಲಿ ಎಂಟೆಕ್‌ ವ್ಯಾಸಂಗ ಮಾಡುತ್ತಿ ರುವ ಮೂವರು ನಂದಿಬೆಟ್ಟಕ್ಕೆ ಹೋಗುವು ದಾಗಿ ಸ್ನೇಹಿತರ ಬಳಿ ಹೇಳಿದ್ದರು. ಅಮಿತ್‌ ಸಿಂಗ್‌ ತನ್ನ ಸಹೋದರನ ಹೆಸರಿನಲ್ಲಿರುವ ಬೈಕ್‌ನಲ್ಲಿ ತನ್ನ ಇಬ್ಬರು ಸ್ನೇಹಿತರನ್ನು ಕೂರಿಸಿಕೊಂಡು ತ್ರಿಬಲ್‌ ರೈಡಿಂಗ್‌ ಮಾಡಿಕೊಂಡು ನಂದಿಬೆಟ್ಟಕ್ಕೆ ಹೋಗಿದ್ದರು. ವಾಪಸ್‌ ಬೆಂಗಳೂರಿಗೆ ಬರುವಾಗ ಅತೀ ವೇಗವಾಗಿ ಬೈಕ್‌ ಚಾಲನೆ ಮಾಡಿದ ಸೌರವ್‌ ತನ್ನ ಬೈಕ್‌ನ ಸೈಡ್‌ ಸ್ಟಾಂಡ್‌ ತೆಗೆಯುವುದನ್ನು ಮರೆತಿದ್ದು, ಏರ್‌ಪೋರ್ಟ್‌ ಮಾರ್ಗದ ಬಿಬಿ ರಸ್ತೆಯ ರೈತರ ಸಂತೆಯಿಂದ ಸ್ವಲ್ಪ ಮುಂದೆ ಮೇಲು ಸೇತುವೆ ಮೇಲೆ ಹೋಗುತ್ತಿದ್ದರು. ಈ ವೇಳೆ ಮೇಲು ಸೇತುವೆಯ ರಸ್ತೆ ಬದಿಯಿದ್ದ ಸಿಮೆಂಟ್‌ ಬ್ಲಾಕ್‌ಗೆ ಸೈಡ್‌ ಸ್ಟಾಂಡ್‌ ತುಗಲಿದ ಪರಿಣಾಮ ಬೈಕ್‌ ನಿಯಂತ್ರಣ ತಪ್ಪಿ ತಡೆ ಗೋಡೆಗೆ ಡಿಕ್ಕಿ ಹೊಡೆದು, ಹಿಂಬದಿ ಕುಳಿತಿದ್ದ ಅಮಿತ್‌ ಸಿಂಗ್‌ ಮತ್ತು ಅಮೋಲ್‌ ಪ್ರಮೋದ್‌ ಆಮ್ಟೆ ಇಬ್ಬರು ಮೇಲು ಸೇತುವೆಯಿಂದ ಕೆಳಗೆ ಬಿದ್ದಿದ್ದಾರೆ. ಇಬ್ಬರ ತಲೆಗೆ ಗಂಭೀರ ಪೆಟ್ಟು ಬಿದ್ದಿತ್ತು. ಇನ್ನು ಹೆಲ್ಮೆಟ್‌ ಧರಿಸಿದ್ದ ಸೌರವ್‌ ದೇಗೆ ಎಡಗೈ ಮತ್ತು ತಲೆಗೆ ಪೆಟ್ಟು ಬಿದ್ದಿತ್ತು.

ಕೂಡಲೇ ಸ್ಥಳೀಯರು ಮೂವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಅಮೋಲ್‌ ಪ್ರಮೋದ್‌ ಆಮ್ಟೆ ಮೃತಪಟ್ಟಿದ್ದಾನೆ. ಅಮಿತ್‌ ಸಿಂಗ್‌ ಮಧ್ಯಾಹ್ನದ ವೇಳೆಗೆ ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟಿದ್ದಾನೆ. ಇನ್ನು ತಲೆಗೆ ಪೆಟ್ಟುಬಿದ್ದಿರುವ ಸೌರವ್‌ ದೇ ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದು, ತೀವ್ರ ಪೆಟ್ಟು ಬಿದ್ದಿ ದೆ ಎಂದು ಸಂಚಾರ ಪೊಲೀಸರು ಹೇಳಿದರು.

ಯಲಹಂಕ ಸಂಚಾರ ಠಾಣೆಯಲ್ಲಿ ಬೈಕ್‌ ಚಾಲಕ ಸೌರವ್‌ ದೇ ವಿರುದ್ಧ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.